ಅನುದಾನವಿಲ್ಲದೇ ರಸ್ತೆ ಸುಧಾರಣೆ ಸ್ಥಗಿತ
Team Udayavani, Apr 21, 2022, 12:06 PM IST
ಚಿಂಚೋಳಿ: ತಾಲೂಕಿನ ಫೀರೋಜಾ ಬಾದ-ಕಮಲಾಪುರ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗದೇ ರಸ್ತೆ ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ.
ತಾಲೂಕಿನ ಸಾಸರಗಾಂವ, ರಾಣಾಪುರ, ಚಂದನಕೇರಾ, ಪಂಗರಗಾ, ಚೇಂಗಟಾ ಗ್ರಾಮಗಳ ಮಾರ್ಗವಾಗಿ ಕಮಲಾಪುರ ತಾಲೂಕಿಗೆ ರಸ್ತೆ ಸಂಪರ್ಕ ಕಲ್ಪಿಸುವುದಕ್ಕಾಗಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ಈ ರಸ್ತೆ ಸುಧಾರಣೆಗೋಸ್ಕರ 2015-16ನೇ ಸಾಲಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
2016-17ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆ 5056 ಅಪೆಂಡಿಕ್ಸ್-ಇ ಯೋಜನೆ ಅಡಿಯಲ್ಲಿ 15 ಕೋಟಿ ರೂ., ಫಿರೋಜಾಬಾದ-ಕಮಲಾಪುರ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನವನ್ನು ಸರ್ಕಾರ ಮಂಜೂರಿ ಮಾಡಿದ್ದರಿಂದ ಕಾಮಗಾರಿ ಪ್ರಾರಂಭಿಸಲಾಗಿತ್ತು. ಆನಂತರ ಬಿಲ್ಲು ಪಾವತಿ ಆಗದೇ ಇದ್ದುದರಿಂದ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ ಎನ್ನಲಾಗಿದೆ.
ಸರ್ಕಾರದಿಂದ 11ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ 15 ಕೋಟಿ ರೂ.ಗಳಲ್ಲಿ ಗುತ್ತಿಗೆದಾರನಿಗೆ ಇದುವರೆಗೆ 4.22ಕೋಟಿ ರೂ. ಮಾತ್ರ ಬಿಲ್ಲು ಪಾವತಿಯಾಗಿದೆ. 2020-21ನೇ ಸಾಲಿನಲ್ಲಿ 37ಲಕ್ಷ ರೂ. ಬಿಲ್ಲು ಪಾವತಿಯಾಗಿದೆ. ಆದರೆ ಉಳಿದ ಬಿಲ್ಲು ಪಾವತಿಯಾಗದೇ ಇದ್ದುದಕ್ಕೆ ಕಾಮಗಾರಿ ಸ್ಥಗಿತವಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಪಂಗರಗಾ, ಚೆಂಗಟಾ ಗ್ರಾಮಗಳ ಹತ್ತಿರ ಮುಖ್ಯರಸ್ತೆ ಬದಿಯಲ್ಲಿ ಐದು ಅಡಿ ತೆಗ್ಗು ತೋಡಲಾಗಿದೆ. ತೆಗ್ಗಿನಲ್ಲಿ ಮುರುಮು ಭರ್ತಿಗೊಳಿಸದೇ ಇರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಲ್ಲೇ ಸಾಗುವಂತಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಈ ರಸ್ತೆ ಅಭಿವೃದ್ಧಿ ಕೆಲಸ ನಡೆದಿಲ್ಲ. ಈ ರಸ್ತೆ ಮೂಲಕ ಚೆಂಗಟಾ, ಸೋಂತ, ಕಲಮೂಡ ತಾಂಡಾಗಳಿಗೆ ಹೋಗಲು ತೀವ್ರ ತೊಂದರೆ ಪಡುವಂತಾಗಿದೆ. ಚಂದನಕೇರಾ-ಪಂಗರಗಾ ಗ್ರಾಮದಿಂದ ಹಾಯ್ದು ಹೋಗಿರುವ ಬಹುಗ್ರಾಮ ಯೋಜನೆಯ ಪೈಪಲೈನ್ ರಸ್ತೆ ಮಧ್ಯೆ ಇರುವುದರಿಂದ ರಸ್ತೆ ಕಾಮಗಾರಿ ಸ್ಥಗಿತವಾಗಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಬೇಕಾಗಿದೆ. -ಆನಂದ ಕಟ್ಟಿ, ಎಇಇ, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು