ದೇಶದ ಪರಂಪರೆ ಉಳಿಸಿ-ಬೆಳೆಸಿ: ಸಿದ್ದೇಶ್ವರ ಸ್ವಾಮೀಜಿ
Team Udayavani, Dec 18, 2021, 12:59 PM IST
ಆಳಂದ: ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೇ, ದೇಶದ ಮೂಲ ಸಂಸ್ಕೃತಿ, ಆಚರಣೆಯಿಂದ ದೂರ ಸರಿಯದೇ ಪರಂಪರೆ ಉಳಿಸುವ ಕಾರ್ಯವಾಗಬೇಕು ಎಂದು ಸ್ಥಳೀಯ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು ನುಡಿದರು.
ತಾಲೂಕಿನ ಹೊದಲೂರ ಗ್ರಾಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯ ಸ್ವಾಮಿ ನಿವಾಸದಲ್ಲಿ “ಕನ್ನಡ ಜಾನಪದ ಪರಿಷತ್’ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಿದ್ಧೇಶ ಸ್ವಾಮಿ ದಂಪತಿಯ “ಜಾನಪದ ಸೀಮಂತ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಮಾತನಾಡಿ, ಮಗು ಜನಿಸಿದಾಗ ಐದೇಶಿಯಿಂದ ಆರಂಭವಾಗಿ ವ್ಯಕ್ತಿಯ ಜೀವನದ ಕೊನೆ ವರೆಗೆ ವಿವಿಧ ಸಂಸ್ಕಾರ ಮಾಡಲಾಗುತ್ತದೆ. ಪ್ರತಿಯೊಂದು ಸಂಸ್ಕಾರಕ್ಕೆ ಅದರದೇ ಆದ ಹಿನ್ನಲೆ, ಅರ್ಥವಿದೆ. ಸೀಮಂತ ಸಂಸ್ಕಾರವು ತಾಯಿಯಾಗುವ, ಮತ್ತೊಂದು ಜೀವವನ್ನು ನೀಡುವ ಪ್ರಕ್ರಿಯೆಯ ಭಾಗವಾಗಿದೆ. ಈ ಪದ್ಧತಿ ನೂರಾರು ವರ್ಷದಿಂದ ಆಚರಣೆಯಲ್ಲಿದ್ದು, ಇಂತಹ ಆಚರಣೆಗಳು ಪ್ರಸ್ತುತ ದಿನಗಳಲ್ಲಿ ಕಡಿಮೆಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಕಜಾಪ ಜಿಲ್ಲಾ ಕಾರ್ಯದರ್ಶಿ ಎಚ್. ಬಿ. ಪಾಟೀಲ, ಪ್ರಮುಖರಾದ ಸುನೀಲ ಕುಮಾರ ವಂಟಿ, ದೇವೇಂದ್ರಪ್ಪ ಗಣಮುಖೀ, ಶರಣ ಬಸಪ್ಪ ಮಾಲಿಬಿರಾದಾರ ದೇಗಾಂವ, ರೇಣುಕಾಚಾರ್ಯ ಸ್ಥಾವರಮಠ, ಸಿದ್ಧರಾಮ ತಳವಾರ, ಜಗನ್ನಾಥ ಈಟಿ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು