ಉರಿ ಬಿಸಿಲಲ್ಲೇ ಪಾಠ; ಪಾಲಕರ ಪೀಕಲಾಟ


Team Udayavani, May 14, 2022, 1:15 PM IST

10school

ಕಲಬುರಗಿ: ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳನ್ನು ಸರ್ಕಾರ ಮೇ 16ರಿಂದ ಆರಂಭಿಸಲು ಹೆಜ್ಜೆ ಇಟ್ಟಿದೆ. ಆದರೆ, ಇದಕ್ಕೆ ಪಾಲಕರು ವಿರೋಧಿಸಿದ್ದು, ರಣ ಬಿಸಿಲಿನಿಂದ ಮೊದಲೇ ಹೈರಾಣಾಗಿರುವ ಮಕ್ಕಳನ್ನು ಇನ್ನಷ್ಟು ಹೈರಾಣ ಮಾಡಬೇಡಿ.

ಸಂಪ್ರದಾಯದಂತೆ ಜೂ. 1ಕ್ಕೆ ಶಾಲೆ ಆರಂಭಿಸಿ ಎನ್ನುವ ಕೂಗು ಬಲವಾಗಿ ಕೇಳಿ ಬರುತ್ತಿದೆ. ಇದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಧ್ವನಿಗೂಡಿಸಿವೆ. ವಿರೋಧದ ಮಧ್ಯೆಯೂ ಜಿಲ್ಲೆಯ 3780 ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿವೆ. ಇದರ ಮಧ್ಯೆ ಕಳೆದೆರಡು ದಿನಗಳಿಂದ ವಾತಾವರಣದಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ.

ಚಂಡಮಾರುತದ ಪರಿಣಾಮ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಸಣ್ಣದಾಗಿ ಮಳೆಯಾಗುತ್ತಿದೆ. ಬಿರುಗಾಳಿ ಅನಾಹುತ ಉಂಟು ಮಾಡುತ್ತಿದೆ. ಇದನ್ನೆ ನೆಪವಾಗಿಟ್ಟು ಕೊಂಡಿರುವ ಶಿಕ್ಷಣ ಇಲಾಖೆ, ಶಾಲೆ ಆರಂಭಕ್ಕೆ ಒಳ್ಳೆಯ ವಾತಾವರಣ ಇದೆ ಎನ್ನುತ್ತಿದ್ದಾರೆ.

ಕಳೆದ ಒಂದು ವಾರದಿಂದ ಕಲಬುರಗಿ ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ರಣಬಿಸಿಲು ಜನರನ್ನು ಹಣಿಯುತ್ತಿದೆ. 42 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದೆ. ಇದರಿಂದ ಬೆಳಗ್ಗೆ 10ಕ್ಕೆ ಜನರು ಬೆವರಲು ಶುರುವಾಗುತ್ತಾರೆ. ಮಧ್ಯಾಹ್ನವಂತೂ ಸಹಿಸುವುದೇ ಕಷ್ಟ ಎನ್ನುವಷ್ಟು ಸೆಕೆ. ಹೊರಗೆ ಝಳ (ಬಿಸಿ ಗಾಳಿ) ಇರುತ್ತದೆ. ಇಂತಹದ್ದರಲ್ಲಿ ಮಕ್ಕಳನ್ನು ಶಾಲೆಗೆ ಕಳಿಸುವುದು ದೊಡ್ಡ ಸಾಹಸ. ಡಿಹೈಡ್ರೇಷನ್‌ (ನಿರ್ಜಲೀಕರಣ) ಸಮಸ್ಯೆ ಕಾಡುತ್ತದೆ. ನಾವು ಅಪಾಯಕ್ಕೆ ಮಕ್ಕಳನ್ನು ತಳ್ಳಿದಂತಾಗುತ್ತದೆ ಎನ್ನುತ್ತಾರೆ ಪಾಲಕರು.

ಜಿಲ್ಲೆಯ 1032 ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಕಿರಿಯ ಪ್ರಾಥಮಿಕ ಶಾಲೆಗಳು, 1894 ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು 889 ಪ್ರೌಢ ಶಾಲೆಗಳು ಆರಂಭಕ್ಕೆ ಸಜ್ಜಾಗುತ್ತಿವೆ. ಈಗಾಗಲೇ ಜಿಲ್ಲೆಯ ಬೇಡಿಕೆಯಂತೆ ಶೇ. 34ರಷ್ಟು ಪುಸ್ತಕಗಳ ಸರಬರಾಜು ಆಗಿದೆ. ಇನ್ನಷ್ಟು ಶೀಘ್ರವೇ ಬರುತ್ತವೆ. ಪುಸ್ತಕ ಕೊರತೆ ಆಗುವುದಿಲ್ಲ. ಸಮವಸ್ತ್ರಗಳು ಸಮಯಕ್ಕೆ ಸರಿಯಾಗಿ ಜೂನ್‌ ಕೊನೆ ವಾರದೊಳಗೆ ಮಕ್ಕಳಿಗೆ ಲಭ್ಯವಾಗುತ್ತವೆ. ಕುಡಿವ ನೀರು, ಶೌಚಾಲಯ ವ್ಯವಸ್ಥೆ ನಡೆದಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಶಿಕ್ಷಣ ಸಚಿವರ ಗಡಿಬಿಡಿ ಕಲ್ಯಾಣ ಕರ್ನಾಟಕದ ಮಕ್ಕಳಿಗೆ ತುಸು ಹೈರಾಣ ಮಾಡಲಿದೆ. ನಮ್ಮಲ್ಲಿ 42 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಬಿಸಿಲಿರುತ್ತದೆ. ಇದು ಮಕ್ಕಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸರ್ಕಾರ ಆಲೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ಶಾಲೆಗಳಲ್ಲಿ ಕುಡಿಯಲು ನೀರಿಲ್ಲ. ಶೌಚಾಲಯಗಳು ಅಷ್ಟಕಷ್ಟೆ. ಕೆಲವು ಖಾಸಗಿ ಶಾಲೆಗಳಲ್ಲಿ ಎರಡೂ ಇಲ್ಲ. ಈ ಬಗ್ಗೆ ಸರ್ಕಾರಕ್ಕೆ ಗಮನವಿದೆಯೇ? -ಲಿಂಗರಾಜ ಸಿರಗಾಪುರ, ಅಧ್ಯಕ್ಷ, ಕನ್ನಡ ಭೂಮಿ ಜಾಗೃತ ಸಮಿತಿ

-ಸೂರ್ಯಕಾಂತ ಎಂ.ಜಮಾದಾರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.