ವಾಡಿ ರೈಲು ನಿಲ್ದಾಣಕ್ಕೆ ಭದ್ರತೆ
Team Udayavani, Jun 21, 2022, 10:27 AM IST
ವಾಡಿ: ಕೇಂದ್ರ ಸರ್ಕಾರದ ಗುತ್ತಿಗೆಯಾ ದಾರಿತ ಸೇನಾ ನೇಮಕಾತಿ ಯೋಜನೆ “ಅಗ್ನಿಪಥ’ ಖಂಡಿಸಿ ದೇಶದಲ್ಲಿ ಭುಗಿಲೆದ್ದಿರುವ ರೈಲು ದಹನದಂತಹ ಹಿಂಸಾತ್ಮಾಕ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ರೈಲು ನಿಲ್ದಾಣಗಳ ಸುತ್ತಲೂ ಹೈ ಅಲರ್ಟ್ ಘೋಷಿಸಿದೆ.
ಸೋಮವಾರ ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ರಾಜ್ಯ ಗೃಹ ಇಲಾಖೆಯ ಕಲಬುರಗಿ ಎಸ್ಪಿ ಇಶಾ ಪಂತ್, ಪ್ಲಾಟ್ಫಾರ್ಮ್ಗಳ ಮೇಲೆ ಪಾದಯಾತ್ರೆ ನಡೆಸುವ ಮೂಲಕ ನಿಲ್ದಾಣದ ಸುರಕ್ಷತೆ ಪರಿಶೀಲಿಸಿದರು.
ನಿಲ್ದಾಣದ ವಿವಿಧ ಭಾಗಗಳಿಲ್ಲಿರುವ ಎಲ್ಲ ಅನಧಿ ಕೃತ ಪ್ರವೇಶ ದ್ವಾರಗಳನ್ನು ಮುಚ್ಚಿಸುವ ಮತ್ತು ಅವುಗಳ ಮೇಲೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು.
ಇದೇ ವೇಳೆ ನಿಲ್ದಾಣದ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿದ ಎಸ್ಪಿ ಇಶಾ ಪಂತ್, ನಿಲ್ದಾಣವನ್ನು ಪ್ರವೇಶಿಸುವ ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿಡಬೇಕು. ಪ್ಲಾಟ್ಫಾರ್ಮ್ ಗಳ ಮೇಲೆ ಗುಂಪು ಗುಂಪಾಗಿ ಸೇರುವುದನ್ನು ತಡೆಯಬೇಕು. ರೈಲುಗಳು ನಿಲ್ದಾಣ ಪ್ರವೇಶಿಸಿದಾಗ ಅಲರ್ಟ್ ಆಗಿರಬೇಕು ಎಂದರು.
ರೈಲು ನಿಲ್ದಾಣ ವ್ಯವಸ್ಥಾಪಕ ಜೆ.ಎನ್. ಪರೀಡಾ, ಶಹಾಬಾದ ಡಿವೈಎಸ್ಪಿ ಉಮೇಶ ಚಿಕ್ಕಮಠ, ಸಿಪಿಐ ಪ್ರಕಾಶ ಯಾತನೂರ, ರೈಲ್ವೆ ಪಿಎಸ್ಐ ಎಂ.ಪಾಷಾ, ನಗರ ಠಾಣೆ ಪಿಎಸ್ಐ ಮಹಾಂತೇಶ ಪಾಟೀಲ, ಕ್ರೈಂ ಪಿಎಸ್ಐ ಶಿವುಕಾಂತ ಕಮಲಾಪುರ, ದತ್ತಾತ್ರೇಯ ಜಾನೆ, ಲಕ್ಷ್ಮಣ ತಳಕೇರಿ ಸೇರಿದಂತೆ ರೈಲ್ವೆ ಆರ್ ಪಿಎಫ್ ಮತ್ತು ಸಿವಿಲ್ ಪೊಲೀಸ್ ಪಡೆಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ