ಸೇಡಂ ಕ್ಷೇತ್ರದ ಅಭಿವೃದ್ದಿಗೆ ಬದ್ದ: ತೇಲ್ಕೂರ
Team Udayavani, May 16, 2022, 11:38 AM IST
ಕಲಬುರಗಿ: ಸೇಡಂ ಕ್ಷೇತ್ರದ ಜನರ ಆಶೀರ್ವಾದ ಹಾಗೂ ತಮ್ಮ ಪರಿಶ್ರಮದಿಂದ ಕ್ಷೇತ್ರದ ಅಭಿವೃದ್ಧಿಗೆ ಹೊಸ ಆಯಾಮ ರೂಪಿಸಿ ಮುನ್ನಡೆಯುವ ಪ್ರಯತ್ನದಲ್ಲಿ ಮೊದಲ ವರ್ಷ ಎದುರಾದದ್ದು, ಸಮ್ಮಿಶ್ರ ಸರ್ಕಾರವೆಂಬ ಸವಾಲು, ನಂತರದ ದಿನಗಳಲ್ಲಿ ಎರಡು ಬಾರಿ ನೆರೆಹಾವಳಿ, ಕೊರೊನಾ ಮೂರನೇ ಅಲೆಗೆ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬೀಳಬಹುದೆಂಬ ಯೋಚನೆ ಮೂಡಿದ್ದು ಸುಳ್ಳಲ್ಲ. ಆದರೆ ಸತತ ಪ್ರಯತ್ನದಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ. ಹೆಮ್ಮೆಯ ವಿಚಾರವೆಂದರೆ ಕಲ್ಯಾಣ ಕರ್ನಾಟಕ ಎಲ್ಲ ಶಾಸಕರಿಗಿಂತ ಹೆಚ್ಚಿನ ಅನುದಾನ ತರುವಲ್ಲಿಯೂ ಸಫಲನಾಗಿದ್ದೇನೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.
ನೆರೆ ಹಾವಳಿ ಸಂಧರ್ಭದಲ್ಲಿ ನನ್ನ ನಂಬಿದ ಜನತೆಗೆ ಕೈಲಾದ ಸಹಾಯ, ಸಹಕಾರ ನೀಡಿ, ಕೋವಿಡ್ ಲಾಕ್ಡೌನ್ದಲ್ಲೂ ಸಹಿತ ಹಸಿದವರಿಗೆ ತೇಲ್ಕೂರ ಪಾಟೀಲ ಫೌಂಡೇಶನ್ ವತಿಯಿಂದ ಆಹಾರ ಸಾಮಗ್ರಿ ನೀಡಿ ಕಷ್ಟದಲ್ಲಿರುವವರಿಗೆ ನೆರವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.
ರದ್ದಾದ ಬೀದರ್-ಯಶವಂತಪುರ ರೈಲು ಮೊದಲಿನಂತೆ ಸಂಚರಿಸುವಂತೆ ಒತ್ತಡ ತಂದು ಯಶಸ್ವಿಯಾಗಿರುವುದು, ಸೇಡಂ ಪಟ್ಟಣದಲ್ಲಿ 500ಕೋಟಿ ರೂ. ವೆಚ್ಚದಲ್ಲಿ 700 ಮನೆಗಳ ನಿರ್ಮಾಣ, ಸೇಡಂ ಕ್ಷೇತ್ರದಲ್ಲಿ 12ಕೋಟಿ ರೂ. ವೆಚ್ಚದಲ್ಲಿ 100 ದೇವಾಲಯಗಳ ಅಭಿವೃದ್ಧಿ, ಅತಿವೃಷ್ಟಿ ಹಾನಿಗೆ ಹೆಚ್ಚಿನ ಪರಿಹಾರ ದೊರಕಿಸಿರುವುದು, ಇದರ ಹೊರತಾಗಿಯೂ ನನ್ನ ಮತ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಎಡೆಮಾಡಿಕೊಡದೇ ಕುಡಿಯುವ ನೀರು, ಕೃಷಿ ಭೂಮಿಗೆ ನೀರಾವರಿ ಯೋಜನೆಗಳು, ರಸ್ತೆ, ಸೇತುವೆಗಳು, ಶಾಲೆ-ಕಾಲೇಜು ಕಟ್ಟಡಗಳು, ವಸತಿ ನಿಲಯಗಳು, ವಿದ್ಯುತ್ ಸಂಪರ್ಕ ಹೀಗೆ 500 ಕೋಟಿ ರೂ.ಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ವಿವರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿರುವುದನ್ನು ಗುರುತಿಸಿ ಪಕ್ಷದ ರಾಜ್ಯದ ವಕ್ತಾರ ಹಾಗೂ ವಿಭಾಗೀಯ ಪ್ರಭಾರಿಯನ್ನಾಗಿ ನಿಯೋಜಿಸಲಾಗಿದೆ. ಹೀಗಾಗಿ ಪಕ್ಷದ ಸಂಘಟನೆ ಜತೆಗೆ 371(ಜೆ) ವಿಧಿ ಲೋಪದೋಷ ನಿವಾರಣೆಗೆ ಒತ್ತಡ ತಂದಿರುವುದು ಸೇರಿದಂತೆ ಹಲವಾರು ನಿಟ್ಟಿನಲ್ಲಿ ಶ್ರಮಿಸಿರುವುದು ತಮ್ಮೆಲ್ಲರಿಗೂ ಗೊತ್ತಿರುವ ವಿಷಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ