ಸಾಮಗ್ರಿ ವಿತರಣೆ: ಸಾಮಾಜಿಕ ಅಂತರ ಮಾಯ
Team Udayavani, May 30, 2020, 10:51 AM IST
ಸಾಮಾಜಿಕ ಅಂತರವಿಲ್ಲದೇ ಆಹಾರ ಸಾಮಗ್ರಿ ಪಡೆಯಲು ಕುಳಿತ ಮಹಿಳೆಯರು
ಶಹಾಬಾದ: ತಾಲೂಕಿನ ಗೋಳಾ (ಕೆ) ಗ್ರಾಮದಲ್ಲಿ ಸಾಮಾಜಿಕ ಅಂತರವಿಲ್ಲದೇ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹಾಗೂ ತಾಲೂಕಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿಯೇ ಶುಕ್ರವಾರ ಬಡವರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಿದರು.
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಬಡ ಜನರಿಗೆ ಆಹಾರ ಸಾಮಗ್ರಿಗಳನ್ನು ಟ್ರಕ್ ಮೂಲಕ ತಂದು ಹಂಚಲಾಯಿತು. ಶಾಸಕರು ಬರುವುದಕ್ಕಿಂತ ಮುಂಚೆ ಗೋಳಾ (ಕೆ) ಗ್ರಾಮದ ಬಡ ಮಹಿಳೆಯರನ್ನು ಗ್ರಾಮದ ಶಾಲೆಯೊಂದರಲ್ಲಿ ಸಾಮಾಜಿಕ ಅಂತರವಿಲ್ಲದೇ ಕೂಡಿಸಲಾಗಿತ್ತು. ಸರ್ಕಾರದ ಆದೇಶ ಗಾಳಿಗೆ ತೂರಿದರೂ ಸ್ಥಳದಲ್ಲಿಯೇ ಬಿಡಾರ ಹೂಡಿದ ಅಧಿಕಾರಿಗಳು ಕಂಡು ಕಾಣದಂತೆ ಕುಳಿತಿದ್ದರು.
ಶಾಸಕರು ಆಹಾರ ಸಾಮಗ್ರಿಗಳನ್ನು ಹಂಚಲು ಪ್ರಾರಂಭಿಸುತ್ತಿದ್ದಂತೆ ಫಲಾನುಭವಿಗಳಿಗಿಂತ ಬಿಜೆಪಿ ಕಾರ್ಯಕರ್ತರೇ ಕಾಣುತ್ತಿದ್ದರು. ಆಹಾರ ಪೊಟ್ಟಣಕ್ಕಾಗಿ ಮುಗಿಬೀಳುತ್ತಿದ್ದರೂ ಯಾರೂ ಏನು ಮಾಡಲಿಲ್ಲ. ಕೆಲವರು ಮಾಸ್ಕ್ ಧರಿಸಿದರೆ ಬಹುತೇಕರು ಮಾಸ್ಕ್ ಧರಿಸದೇ ಇದ್ದುದಕ್ಕೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದರು. ಶಾಸಕರ ಮುಂದೆಯೇ ಇಷ್ಟೆಲ್ಲ ಬೆಳವಣಿಗೆ ನಡೆದರೂ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ಧೋರಣೆ ತೋರಿದರು.
ತಹಶೀಲ್ದಾರ್ ಸುರೇಶ ವರ್ಮಾ, ಕೋವಿಡ್-19 ನೋಡಲ್ ಅಧಿಕಾರಿ ನೀಲಗಂಗಮ್ಮ ಬಬಲಾದ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ, ತೊನಸನಹಳ್ಳಿ (ಎಸ್) ಗ್ರಾ.ಪಂ ಅಧ್ಯಕ್ಷ ವಿಜಯಾನಂದ ಮಾಣಿಕ್, ಶಾಂತಕುಮಾರ ಮಾಣಿಕ್, ಮರಲಿಂಗ ಗಂಗಭೋ, ರವಿ ಸಣತಮ್, ಶಿವಕುಮಾರ ನಾಯ್ಕಲ್, ಗ್ರಾ.ಪಂ ಸದಸ್ಯೆ ರಾಜೇಶ್ವರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ