ಆರ್ಥಿಕ ವಲಯಕ್ಕೆ ಮರುಜೀವ

ಗೊಬ್ಬರ- ಪೈಪ್‌ ಅಂಗಡಿ- ಗ್ಯಾರೇಜ್‌ ಆರಂಭ ಇನ್ನಷ್ಟು ವ್ಯಾಪಾರ ಶುರುವಾಗುವ ನಿರೀಕ್ಷೆ

Team Udayavani, Apr 24, 2020, 12:42 PM IST

24-April-12

ಶಿವಮೊಗ್ಗ: ಹೊಳೆ ಬಸ್‌ ನಿಲ್ದಾಣದ ಬಳಿ ರೈಲ್ವೆ ಹಳಿ ಕೆಲಸ ಆರಂಭವಾಗಿರುವುದು.

ಶಿವಮೊಗ್ಗ: ಈವರೆಗೂ ಕೋವಿಡ್ ವೈರಸ್‌ ಕಾಣಿಸಿಕೊಳ್ಳದೇ ಗ್ರೀನ್‌ ಜೋನ್‌ನಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರದಿಂದ ನೀಡಿರುವ ಸಡಿಲಿಕೆಯು ಆರ್ಥಿಕ ವಲಯಕ್ಕೆ ಚೇತರಿಕೆ ನೀಡಿದೆ. ಬೆಳಗ್ಗೆ 7ರಿಂದ 12 ಗಂಟೆವರೆಗೆ ಕದ್ದು ಮುಚ್ಚಿ ವ್ಯವಹಾರ ನಡೆಸುತ್ತಿದ್ದ ವಾಣಿಜ್ಯ ಮಳಿಗೆಗಳು ಈಗ ನಿರಾಳಗೊಂಡಿವೆ.

ಕೃಷಿ ವಲಯಕ್ಕೆ ಸಂಪೂರ್ಣ ಉತ್ತೇಜನ ನೀಡಿರುವುದರಿಂದ ಕೃಷಿ ಪೂರಕವಾದ ಗೊಬ್ಬರ, ಪೈಪ್‌, ಗ್ಯಾರೇಜ್‌ಗಳು ಆರಂಭಗೊಂಡಿವೆ. ಶಿವಮೊಗ್ಗ- ಭದ್ರಾವತಿ, ಶಿವಮೊಗ್ಗ- ತೀರ್ಥಹಳ್ಳಿ, ಸಾಗರ ನಡುವಿನ ಡಾಬಾಗಳು ಇನ್ನಷ್ಟೇ ಕಾರ್ಯಾರಂಭ ಮಾಡಬೇಕಿದೆ. ಮೊಬೈಲ್‌ ರೀಚಾರ್ಜ್‌ ಮಳಿಗೆ ತೆರೆಯಲು ಅವಕಾಶ ನೀಡಿರುವುದು ಬೇರೆ ರೀತಿ ಚಟುವಟಿಕೆಗೂ ದಾರಿಯಾಗಿದೆ. ಜೆರಾಕ್ಸ್‌, ದಿನಸಿ ಅಂಗಡಿ ಜತೆ ರೀಚಾರ್ಜ್‌ ಸೇವೆ ಮಾಡುತ್ತಿದ್ದ ಅಂಗಡಿಗಳು ಸಹ ಓಪನ್‌ ಆಗಿವೆ. ಮೊದಲಿನಿಂದಲೂ ನಗರ ಭಾಗದಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ. ಗ್ರಾಮಾಂತರದಲ್ಲಿ ಅಷ್ಟಿಲ್ಲ. ಇದೇ ಅವಕಾಶ ಬಳಸಿಕೊಂಡು ಇನ್ನಷ್ಟು ವ್ಯಾಪಾರ ವಹಿವಾಟು ನಡೆಯುತ್ತಿದೆ.

ಡೋರ್‌ ಹಾಕಿದಂತೆ ಕಾಣುತ್ತಿದ್ದರೂ ಸಲೂನ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಗ್ರಾಹಕರಿಗೆ ಕರೆ ಮಾಡಿ ಬೆಳಗ್ಗಿನ ಜಾವ ಕರೆದು ಕ್ಷೌರ ಮಾಡಲಾಗುತ್ತಿದೆ. ಅನೇಕ ಬಾರಿ ಪೊಲೀಸರು ಮತ್ತು ಬೀಟ್‌ ಅಧಿಕಾರಿಗಳು ಮೌಖೀಕ ತಿಳಿವಳಿಕೆ ನೀಡಿದರೂ ಕದ್ದು ಮುಚ್ಚಿ ವ್ಯವಹಾರಗಳು ಜೋರಾಗಿವೆ. ಮಧ್ಯಾಹ್ನ 12 ಗಂಟೆವರೆಗೂ ನಗರ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪೊಲೀಸರು ನಿಯಂತ್ರಣ ಮಾಡುತ್ತಿದ್ದಾರೆ. ಕೆಲ ಏರಿಯಾಗಳ ರಸ್ತೆ ಬ್ಲಾಕ್‌ ಮಾಡಿರುವುದರಿಂದ ಮುಖ್ಯ ರಸ್ತೆಗಳು ಜನದಟ್ಟಣೆಯಿಂದ ಕೂಡಿದ್ದವು.

ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ ಸೇವೆಗೆ ಅವಕಾಶ ಇದ್ದರೂ ನಷ್ಟದ ಭೀತಿಯಲ್ಲಿ ಯಾರೂ ಮುಂದೆ ಬರುತ್ತಿಲ್ಲ. ಹೈವೇ ಡಾಬಾಗಳು ಇನ್ನೆರಡು ದಿನಗಳಲ್ಲಿ ಓಪನ್‌ ಆಗಬಹುದು. ಅದೇ ಹೆಚ್ಚು ವಾಣಿಜ್ಯ ಮಳಿಗೆಗಳಿರುವ ಗಾರ್ಡನ್‌ ಏರಿಯಾ, ಗಾಂಧಿ  ಬಜಾರ್‌ನಲ್ಲಿ ಜನರ ಓಡಾಟಕ್ಕೆ ಅವಕಾಶವಿಲ್ಲ. ಸಣ್ಣಪುಟ್ಟ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿರುವುದರಿಂದ ಓಪನ್‌ ಮಾಡುತ್ತಿಲ್ಲ. ಹೊಸ ಆದೇಶದ ನಂತರ ಜನರಲ್ಲಿ ಗೊಂದಲಗಳಿದ್ದು ಹಂತಹಂತವಾಗಿ ಚಟುವಟಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ.

ಜನರಲ್ಲಿ ಗೊಂದಲ ಜಿಲ್ಲೆ ಒಳಗೆ ಓಡಾಡಲು ಯಾರಿಗೂ ಪಾಸ್‌ ವ್ಯವಸ್ಥೆ ಮಾಡದ ಕಾರಣ ಕೆಲ ಸಾರ್ವಜನಿಕರು ಗೊಂದಲದಲ್ಲಿದ್ದಾರೆ. ಕೃಷಿ ಸಂಬಂಧಿತ ವಾಣಿಜ್ಯ ಮಳಿಗೆ ಸಿಬ್ಬಂದಿ ಯಾವ ಕಾರ್ಡ್‌ ಇಲ್ಲದೇ ಓಡಾಡಲು ಹಿಂಜರಿಯುತ್ತಿದ್ದಾರೆ. ಪ್ರಮುಖ ಸರ್ಕಲ್‌ಗ‌ಳಲ್ಲಿ ಚೆಕ್‌ಪೋಸ್ಟ್‌ ಮಾಡಿರುವುದರಿಂದ ತಪಾಸಣೆ ಕಡ್ಡಾಯವಾಗಿದೆ. ಪ್ರತಿ ಹಂತದಲ್ಲೂ ವಿಚಾರಣೆಗೆ ಒಳಗಾಗುವುದು ಇರಿಸು ಮುರಿಸು ಉಂಟು ಮಾಡುತ್ತಿದೆ.

ಕಟ್ಟಡ ನಿರ್ಮಾಣ ಸ್ಪೀಡ್‌ ಮಳೆಗಾಲ ಆರಂಭದೊಳಗೆ ಮನೆ ಕಾಮಗಾರಿ ಮುಗಿಸಲು ಅನೇಕರು ಮುಂದಾಗಿದ್ದರು. ಲಾಕ್‌ಡೌನ್‌ ಕಾರಣ
ಸಾಧ್ಯವಾಗಿರಲಿಲ್ಲ. ಬಸವ ಜಯಂತಿಗೆ ಸಿದ್ಧತೆ ಮಾಡಿಕೊಂಡವರು ಮುಂದಿನ ಶುಭ ದಿನಕ್ಕೆ ಯೋಚನೆ ಮಾಡುತ್ತಿದ್ದಾರೆ. ಒಳ ರಸ್ತೆಗಳಲ್ಲಿ ಈಗಾಗಲೇ ಕಡಿಮೆ ಕಾರ್ಮಿಕರಿಟ್ಟುಕೊಂಡು ನಡೆಸುತ್ತಿದ್ದ ಕಾಮಗಾರಿ ಈಗ ಗರಿಗೆದರಿದೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.