ಅಂಗವಿಕಲರ ಬಸ್‌ ಪಾಸ್‌ ನಿಯಮ ಸರಳೀಕರಿಸಿ


Team Udayavani, Feb 5, 2022, 12:33 PM IST

9bus-pass

ಚಿತ್ತಾಪುರ: ಅಂಗವಿಕಲರ ಬಸ್‌ ಪಾಸ್‌ ನವೀಕರಣ ವೇಳೆ ಹಳೆ ಪಾಸ್‌ ಪಡೆದು ಹೊಸ ಪಾಸ್‌ ನೀಡುವಂತೆ ನಿಯಮ ಸರಳೀಕರಣ ಮಾಡಬೇಕು ಎಂದು ತಾಲೂಕು ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೊದ್ಧೇಶ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹ್ಮದ್‌ ಇಬ್ರಾಹಿಂ ಒತ್ತಾಯಿಸಿದರು.

ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ ಅಶ್ವತ್ಥ್ ನಾರಾಯಣ ಅವರಿಗೆ ಸಲ್ಲಿಸಿ ಮಾತನಾಡಿದ ಅವರು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಂಗವಿಕಲರು ವಾಸ ಮಾಡುವ ಸ್ಥಳದಿಂದ 100 ಕಿ.ಮೀ ವರೆಗೆ ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಪ್ರತಿವರ್ಷ ಜನವರಿಯಲ್ಲಿ ಬಸ್‌ ಪಾಸ್‌ ನೀಡುತ್ತದೆ. ಡಿಸೆಂಬರ್‌ನಲ್ಲಿ ಪಾಸ್‌ ಕೊನೆಗೊಳ್ಳುತ್ತದೆ. ಆದರೆ ಇದುವರೆಗೆ ಕೇವಲ ಶೇ.10ರಷ್ಟು ಅಂಗವಿಕಲರಿಗೆ ಮಾತ್ರ ಬಸ್‌ ಪಾಸ್‌ ನೀಡಲಾಗಿದೆ. ಅನೇಕ ಅಂಗವಿಕಲರು ಬಸ್‌ ಪಾಸ್‌ಗಾಗಿ ಅಲೆದಾಡುತ್ತಿದ್ದಾರೆ ಎಂದರು.

ಹಳೆ ಪಾಸ್‌ ನೋಡಿ ನವೀಕರಣಗೊಳಿಸಿ ಹೊಸ ಪಾಸ್‌ ನೀಡುವ ವ್ಯವಸ್ಥೆಯಿದೆ. ಅಂಗವಿಕಲರು ಆರೋಗ್ಯ ಇಲಾಖೆ ವೈದ್ಯರು ತಪಾಸಣೆ ಮಾಡಿ, ನೀಡಿರುವ ಗುರುತಿನ ಚೀಟಿ ನೋಡಿ ಬಸ್‌ ಪಾಸ್‌ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅರ್ಜಿ ಸಲ್ಲಿಸಲು ಯುಡಿಐಡಿ ಗುರುತಿನ ಚೀಟಿ ಕಡ್ಡಾಯವೆಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಂಗವಿಕಲರು ಅರ್ಜಿ ಸಲ್ಲಿಸಲು ಬಸ್‌ ನಿಲ್ದಾಣವಿರುವ ನಗರ, ಪಟ್ಟಣಗಳಿಗೆ ಅಲೆದಾಡಲು ಹಣದ ಖರ್ಚಿನ ಜತೆಗೆ ಮಾನಸಿಕ ಹಿಂಸೆಯಾಗುತ್ತಿದೆ. ಆದ್ದರಿಂದ ನಿಯಮ ಸರಳೀಕರಣಗೊಳಿಸಿ ಅಂಗವಿಕಲರಿಗೆ ಕೂಡಲೇ ಬಸ್‌ ಪಾಸ್‌ ನೀಡಬೇಕು. ಪಾಸ್‌ ನೀಡುವ ಸಮಯ ಮಾರ್ಚ್‌ ತಿಂಗಳ ಕೊನೆ ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಮಹೇಶ ಜಾಯಿ, ಭಾಗಣ್ಣ ಧನಶೆಟ್ಟಿ, ಶರಬಣ್ಣ ಸನ್ನತಿ, ನಾಗಪ್ಪ ಅಳ್ಳೋಳ್ಳಿ, ಮಲ್ಲೇಶಿ ಹುಂಡೇಕಾರ, ಸಾಬಣ್ಣ ದೊಡ್ಮನಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.