2018ರ ಹಳೆ ಪಠ್ಯಕ್ರಮ ಪ್ರಶ್ನೆಪತ್ರಿಕೆ ನೀಡಿದ್ದಕ್ಕೆ ವಿದ್ಯಾರ್ಥಿಗಳು- ಪಾಲಕರ ಪ್ರತಿಭಟನೆ
Team Udayavani, Jun 28, 2020, 12:14 PM IST
ಸಿಂಧನೂರು: ಶ್ರೀ ಕೃಷ್ಣ ದೇವರಾಯ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪ್ರತಿಭಟಿಸಿದರು
ಸಿಂಧನೂರು: ನಗರದ ಶ್ರೀ ಕೃಷ್ಣ ದೇವರಾಯ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಆಂಗ್ಲ ಮಾಧ್ಯಮದ 20 ವಿದ್ಯಾರ್ಥಿಗಳಿಗೆ 2018ರ ಹಳೆ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡಿರುವ ಘಟನೆ ನಡೆದಿದೆ. ಒಟ್ಟು 419 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 20 ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಹಳೆ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡಿದ್ದರಿಂದ ಕೇವಲ ಶೇ.40ರಷ್ಟು ಮಾತ್ರ ಉತ್ತರ ಬಿಡಿಸಿದ್ದಾರೆ.
ಇನ್ನುಳಿದ ಶೇ.60ಪ್ರಶ್ನೆಗಳಿಗೆ ಉತ್ತರ ತಿಳಿಯದೆ ಗೊಂದಲಕ್ಕೆ ಕಾರಣವಾಗಿದೆ. ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳು ಪ್ರತಿಭಟಿಸಿ, ತಮ್ಮ ಶಿಕ್ಷಕರು ಹಾಗೂ ಪೋಷಕರಿಗೆ ಕರೆಸಿ ವಿಷಯ ತಿಳಿಸಿದರು. ಆಗ ಪೋಷಕರು ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಲು ಬಂದ ವಾಹನ ಬಿಡದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರು.
ಕೊಠಡಿ ನಂಬರ್ 1, 2 ಹಾಗೂ ಮೂರರಲ್ಲಿ ಬರೆಯುತ್ತಿದ್ದ 20 ವಿದ್ಯಾರ್ಥಿಗಳು ಹಳೆ ಪ್ರಶ್ನೆ ಪತ್ರಿಕೆ ನೀಡಿರುವ ಬಗ್ಗೆ ನಿಯೋಜಿತ ಶಿಕ್ಷಕರಿಗೆ ತಿಳಿಸಿದರು. ಎಲ್ಲಾ ಒಂದೇ ಇದೆ.ಬರೆಯಬೇಕು ಎಂದು ಅವರು ಹೇಳಿದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ ಪಠ್ಯದಲ್ಲಿ ಇಲ್ಲದ ಕೆಲವು ಪ್ರಶ್ನೆಗಳು ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಬರೆಯಲು ಆಗಲಿಲ್ಲ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಂಧನೂರು ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳಿದ್ದು ಯಾವ ಪರೀಕ್ಷಾ ಕೇಂದ್ರಗಳಲ್ಲಿಯೂ ಗೊಂದಲವಾಗಿಲ್ಲ. ಆದರೆ ಶ್ರೀ ಕೃಷ್ಣ ದೇವರಾಯ ವಿದ್ಯಾಸಂಸ್ಥೆಯಲ್ಲಿ ಮಾತ್ರ ಈ ಗೊಂದಲ ಕಂಡುಬಂದಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ. ಮರು ಪರೀಕ್ಷೆ ನಡೆಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಆಂಗ್ಲ ಮಾಧ್ಯಮದ 20 ವಿದ್ಯಾರ್ಥಿಗಳಿಗೆ ಹಳೆ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ವಿತರಣೆ ಆಗಿದೆ. ಈ ಗೊಂದಲದ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಮರು ಪರೀಕ್ಷೆ ಕುರಿತು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ನಿರ್ಣಯಿಸಲಿದೆ.
ಅಮರಪ್ಪಭೋವಿ,
ಬಿಇಒ ಸಿಂಧನೂರು
ಹಳೆಯ ಪ್ರಶ್ನೆ ಪತ್ರಿಕೆ ಕೊಟ್ಟು ಅಧಿಕಾರಿಗಳು ಗೊಂದಲ ಸೃಷ್ಟಿಸಿದ್ದಾರೆ. ಇದರಿಂದ ನಮ್ಮ ಮಕ್ಕಳಿಗೆ ತೊಂದರೆಯಾಗಿದೆ. ಕೂಡಲೇ ಮರು ಪರೀಕ್ಷೆ ನಡೆಸಲು ಒತ್ತಾಯಿಸುತ್ತೇವೆ.
ಶರಣಪ್ಪ ವಿರೂಪಾಪುರ,
ಪಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ