ಆರು ಕಿಮೀ ದೂರದಲ್ಲಿ ಕಾರ್ಯಸೌಧ; ಜನರ ಪರದಾಟ


Team Udayavani, Mar 24, 2022, 1:05 PM IST

8workplace

ಆಳಂದ: ಒಂದೇ ಸೂರಿನಡಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಟ್ಟಣ ಹೊರವಲಯದ ಆಳಂದ-ಕಲಬುರಗಿ ರಸ್ತೆಯ ಆರು ಕಿ.ಮೀ ದೂರದಲ್ಲಿ ಕಾರ್ಯಾರಂಭಿಸಿದ ತಾಲೂಕು ಆಡಳಿತ ಸೌಧಕ್ಕೆ ಹೋಗಿ ಬರಲು ಜನತೆ ದಿನನಿತ್ಯ ಪರದಾಡುವಂತಾಗಿದೆ.

ಮಾ.1ರಿಂದ ಆಡಳಿತ ಸೌಧದಲ್ಲಿ ಕಂದಾಯ, ಸಮಾಜ ಕಲ್ಯಾಣ, ಭೂಮಾಪನ ಕಚೇರಿಗಳು ಈಗಾಗಲೇ ಕಾರ್ಯಾರಂಭಿಸಿವೆ. ಈ ಕಚೇರಿಗೆ ಸಂಬಂಧಿತ ಕೆಲಸ ಕಾರ್ಯಗಳಿಗೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಜನರು ಹೋಗಿ ಬರಲು ಪರದಾಡುತ್ತಿದ್ದಾರೆ.

ಬಸ್‌ ನಿಲ್ದಾಣದಿಂದ ಅಟೋಗಳಿಗೆ ಹೋಗಿ ಬರಲು 100ರೂ. ಬೇಕು. ಇಲ್ಲಿಗೆ ಖಾಸಗಿ ವಾಹನ ಅಥವಾ ಸಾರಿಗೆ ಬಸ್‌ ಸೌಕರ್ಯವಿಲ್ಲ. ಇದರಿಂದ ಜನಸಾಮಾನ್ಯರು ಕಚೇರಿಗೆ ಹೋಗಳು ಹಣ ಖರ್ಚು ಮಾಡಲೇಬೇಕಾಗುತ್ತದೆ. ಏ.1ರಿಂದ ಕಂದಾಯ ಇಲಾಖೆಗೆ ಸಂಬಂಧಿತ ಭೂ ನೋಂದಣಿ ಇಲಾಖೆ, ಖಜಾನೆ ಮತ್ತು ನೆಮ್ಮದಿ ಕೇಂದ್ರ, ಬಿಇಒ, ಬಿಸಿಎಂ, ರೇಷ್ಮೆ ಇಲಾಖೆ ಕಚೇರಿಯೂ ಪಟ್ಟಣದಿಂದ ಆಡಳಿತ ಸೌಧಕ್ಕೆ ಸ್ಥಳಾಂತರಗೊಳ್ಳಲಿವೆ. ಹೀಗಾಗಿ ನಿತ್ಯ ನೂರಾರು ಮಂದಿ ಜನಸಾಮಾನ್ಯರು ಓಡಾಡಲು ಕಸರತ್ತು ಮಾಡಬೇಕಾಗಿದ್ದು ಅನಿವಾರ್ಯವಾಗಿದೆ.

ಬುಧವಾರ ಪಟ್ಟಣದಿಂದ 20ಕಿ.ಮೀ. ಅಂತರದಲ್ಲಿರುವ ಗಡಿಗ್ರಾಮನಂದಗೂರದ ಹಿರಿಯ ಜೀವಿ ಕಮಲಾಬಾಯಿ ಬಲಭೀಮ ಬಿರಾಜದಾರ ಎನ್ನುವಾಕೆ ತನ್ನ ಆಧಾರ ಕಾರ್ಡ್‌ ತಿದ್ದುಪಡಿಗಾಗಿ ಕಾರ್ಯಸೌಧಕ್ಕೆ ಬರಲು ಇಬ್ಬರು ಮೊಮ್ಮಕ್ಕಳೊಂದಿಗೆ ಬಸ್‌ ನಿಲ್ದಾಣದಿಂದ ಅಟೋದಲ್ಲಿ ಬಂದು ಹೋಗಲು 300ರೂ. ಖರ್ಚಾಯಿತು. ಆದರೆ ಕೆಲಸವೂ ಆಗಲಿಲ್ಲ. ಮತ್ತೆ ನಾಳೆ ಬರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದಳು.

ಮತ್ತೊಂದೆಡೆ ಕೊರಳ್ಳಿ ಗ್ರಾಮದ ಶಂಕರ ಕಂಬಾರ ಎನ್ನುವ ರೈತ ಬಂದುಹೋಗಲು ನೂರು ರೂಪಾಯಿ ಖರ್ಚಾಗುತ್ತಿದೆ. ಹಲವು ಬಾರಿ ಓಡಾಡಿದರೆ ಕೆಲಸವಾಗುತ್ತದೆ ಎಂದು ಅಳಲು ತೋಡಿಕೊಂಡ. ತಹಶೀಲ್ದಾರ್‌ ಕಚೇರಿ ಪಟ್ಟಣದಿಂದ ದೂರವಾದ ಮೇಲೆ ಇಂಥ ಗೋಳು ಹೇಳತೀರದಾಗಿದೆ.

ಪಟ್ಟಣದ ಹಳೆ ಕಚೇರಿಯಲ್ಲಿ ಜನರಿಗೆ ಅನುಕೂಲ ಕಲ್ಪಿಸುವ ನೆಮ್ಮದಿ ಕೇಂದ್ರ, ಆಧಾರ ಕೇಂದ್ರವನ್ನಾದರೂ ಇಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆಡಳಿತಸೌಧದ ಮುಂಭಾಗದಿಂದಲೇ ಕಲಬುರಗಿಗೆ ತೆರಳುವ ತಡೆ ರಹಿತ ಹಾಗೂ ತಡೆ ಸಹಿತ ಬಸ್‌ಗಳನ್ನು ಕಡ್ಡಾಯವಾಗಿ ನಿಲುಗಡೆ ಮಾಡುವಂತೆ ಹಾಗೂ ಆಳಂದದಿಂದ ಆಡಳಿತ ಸೌಧಮಾರ್ಗವಾಗಿ ಕೊಡಲಹಂಗರದ ವರೆಗೆ ನಗರ ಬಸ್‌ ಸಂಚಾರಕ್ಕೆ ಒಂದು ಬಸ್‌ ಸಂಚರಿಸುವಂತೆ ಎನ್‌ಇಕೆಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಮತ್ತು ನಿರ್ದೇಶಕರಿಗೆ ಪತ್ರಬರೆಯಲಾಗಿದೆ. ಎರಡ್ಮೂರು ದಿನಗಳಲ್ಲಿ ನೀರಿನ ವ್ಯವಸ್ಥೆ ಕೈಗೊಳ್ಳುವಂತೆ ಗ್ರಾಮೀಣ ನೀರು ಸರಬರಾಜು ಎಇಇ ಚಂದ್ರಮೌಳಿ ಅವರನ್ನು ಕೋರಲಾಗಿದೆ. -ಯಲ್ಲಪ್ಪ ಸುಬೇದಾರ, ತಹಶೀಲ್ದಾರ್‌

-ಮಹಾದೇವ ವಡಗಾಂವ

ಟಾಪ್ ನ್ಯೂಸ್

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.