ಸಮಾಜ ಸೇವೆಯಲ್ಲೇ ಆನಂದ: ಮತ್ತಿಮಡು
Team Udayavani, Nov 19, 2021, 5:47 PM IST
ಶಹಾಬಾದ: ಸಮಾಜದಲ್ಲಿ ಸೇವಾ ಮನೋಭಾವ ಮೈಗೂಡಿಸಿಕೊಂಡು ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಬುಧವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸಮಾಜ ಸೇವೆ ಗುರುತಿಸಿ ರಾಜ್ಯ ಮಟ್ಟದ “ಭಂಡಾರ ಸೇವಾ ರತ್ನ’ ಪ್ರಶಸ್ತಿ ಪಡೆದುಕೊಂಡ ಬಿಜೆಪಿ ಮುಖಂಡ ಬಸವರಾಜ ಮದ್ರಕಿ ಅವರನ್ನು ಸನ್ಮಾನಿಸಿ, ಅವರು ಮಾತನಾಡಿದರು.
ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ. ಸಮಾಜ ಸೇವೆ ಪುಣ್ಯದ ಕೆಲಸವಾಗಿದೆ. ಮನುಷ್ಯ ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿ ಆಗುತ್ತಿದ್ದಾನೆ. ಕೆಲವರು ತಮ್ಮ ಕುಟುಂಬಕ್ಕಷ್ಟೇ ಸೀಮಿತರಾಗುತ್ತಿದ್ದಾರೆ. ಸಮಾಜದ ಅಭಿವೃದ್ಧಿಗೆ ಹಣವುಳ್ಳವರು ಶ್ರಮಿಸುತ್ತಿರುವುದು ವಿರಳವಾಗಿದೆ. ಆದರೆ ಬಸವರಾಜ ಮದ್ರಕಿ ಅವರು ಕುರುಬ ಸಮಾಜಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಾಗರಾಜ ಮೇಲಗಿರಿ, ಕನಕಪ್ಪ ದಂಡಗುಳಕರ್, ನಿಂಗಣ್ಣ ಹುಳಗೊಳ್ಕರ್,ಬಸವರಾಜ ಬಿರಾದಾರ, ಸಿದ್ರಾಮ್ ಕುಸಾಳೆ, ಚಂದ್ರಕಾಂತ ಗೊಬ್ಬೂರ, ಡಿ.ಸಿ. ಹೊಸಮನಿ, ಸುಭಾಷ ಜಾಪೂರ, ಸಂಜಯ ವಿಠಕರ್, ಭೀಮಯ್ಯ ಗುತ್ತೇದಾರ, ದತ್ತು ಫಂಡ, ಶ್ರೀನಿವಾಸ ಹಾಗೂ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ