ಮನೆ-ಮನೆಗೂ ಮಣ್ಣಿನ ಗಣಪ ಅಭಿಯಾನ: ಮಡಿವಾಳ
ಪರಿಸರಕ್ಕೆ ಹಾನಿ ಮಾಡದಂತ ಗಣೇಶನ ಮೂರ್ತಿಗಳನ್ನು ಇಲ್ಲಿಯೇ ತಯಾರಿಸಲಾಗುತ್ತಿದೆ.
Team Udayavani, Aug 18, 2021, 5:49 PM IST
ಕಲಬುರಗಿ: ಪರಿಸರ ಸ್ನೇಹಿ ಗಣಪತಿ ಮೂರ್ತಿ ಮಾರಾಟ ಮತ್ತು ಜಾಗೃತಿಯಲ್ಲಿ ತೊಡಗಿಸಿಕೊಂಡಿರುವ ಸ್ವಗ್ರಾಮ ಸಂಸ್ಥೆ ವತಿಯಿಂದ ಪ್ರಸಕ್ತ ವರ್ಷ ಅತ್ಯಂತ ಕಡಿಮೆ ದರದಲ್ಲಿ ಮಣ್ಣಿನ ಮೂರ್ತಿ ನೀಡಲಾಗುತ್ತದೆ ಎಂದು ಸಂಸ್ಥೆ ಅಧ್ಯಕ್ಷ ಸಂಗಮೇಶ ಮಡಿವಾಳ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ “ಮನೆ-ಮನೆಗೂ ಮಣ್ಣಿನ ಗಣಪ’ ಎಂಬ ಅಭಿಯಾನ ನಡೆಸುತ್ತಿದ್ದು, ಈ ಬಾರಿ ಕಲಬುರಗಿ ನಗರದಲ್ಲೇ ಅಂದಾಜು 10 ಸಾವಿರ ಮಣ್ಣಿನ ಗಣಪತಿ ಮೂರ್ತಿಗಳನ್ನು ಸಿದ್ಧಪಡಿಸಲಾಗಿದೆ. ಇವುಗಳ ಬೆಲೆ ಕೇವಲ 40ರೂ.ದಿಂದ ಆರಂಭವಾಗಲಿವೆ ಎಂದರು.
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಬಳಕೆಯಿಂದ ಮಣ್ಣು, ಗಾಳಿ, ಜಲ ಮಾಲಿನ್ಯ ಉಂಟಾಗುತ್ತದೆ. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಮಣ್ಣಿನ ಮೂರ್ತಿಗಳ ಮಾರಾಟ ಮತ್ತು ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ. ಇಷ್ಟು ವರ್ಷಗಳಿಂದ ಬೆಳಗಾವಿಯಿಂದ ತರಿಸಿದ ಮೂರ್ತಿಗಳನ್ನು ಮನೆ-ಮನೆಗೆ ತಲುಪಿಸಿದ್ದೇವೆ. ಆದರೆ, ಈ ಮೂರ್ತಿಗಳ ಬೆಲೆ ಜಾಸ್ತಿ ಎಂದು ಬಹಳಷ್ಟು ಜನ ಖರೀದಿ ಮಾಡುತ್ತಿರಲಿಲ್ಲ ಎಂದರು.
ಪರಿಸರಕ್ಕೆ ಹಾನಿ ಮಾಡದಂತ ಗಣೇಶನ ಮೂರ್ತಿಗಳನ್ನು ಇಲ್ಲಿಯೇ ತಯಾರಿಸಲಾಗುತ್ತಿದೆ. ಬೆಳಗಾವಿಯಿಂದ ಮಣ್ಣು ತರಿಸಿ ನಾವೇ ಸಿದ್ಧಪಡಿಸುತ್ತಿದ್ದೇವೆ. ಇದರಿಂದ ಕಳೆದ ಜನವರಿಯಿಂದ 30 ಮಹಿಳೆಯರು ಉದ್ಯೋಗ ಪಡೆದಿದ್ದಾರೆ. ಮೂರ್ತಿಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾದರೆ ಇನ್ನು ಹಲವು ಮಹಿಳೆಯರಿಗೆ ವರ್ಷಪೂರ್ತಿ ಕೆಲಸ ಕೊಡಲು ಸಾಧ್ಯವಿದೆ. ಇದು ಸ್ಥಳೀಯ ಉದ್ಯೋಗ ಸೃಷ್ಟಿಗೂ ಪೂರಕವಾಗಲಿದೆ ಎಂದು ಹೇಳಿದರು.
ಜೇಡಿ ಮಣ್ಣಿನಿಂದ ತಯಾರಿಸಿದ ಈ ಗಣೇಶನ ಮೂರ್ತಿಗಳು ನೀರಿನಲ್ಲಿ ಸುಲಭವಾಗಿ ಕರಗುತ್ತವೆ. ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಆದ್ದರಿಂದ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಅಧಿಕಾರಿಗಳು ಕೈಜೋಡಿಸಬೇಕು. ಹೆಚ್ಚೆಚ್ಚು ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾಪಿಸುವ ರೂಢಿ ಜನರಿಗೂ ಬರಬೇಕು. ಮೂರ್ತಿ ಬೇಕಾದವರು ನಗರದ ಸೂಪರ್ ಮಾರ್ಕೆಟ್ನ ಹುಮನಾಬಾದ್ ಬೇಸ್ ಸಮೀಪದ ಸುಭಾಷ ಚಂದ್ರ ಬೋಸ್ ಪ್ರತಿಮೆ ಹಿಂಭಾಗದಲ್ಲಿರುವ ಸಂಸ್ಥೆ ಕಚೇರಿ ಅಥವಾ ಮೊ.ಸಂ. 76769 22891ಕ್ಕೆ ಸಂಪರ್ಕಿಸಬಹುದು ಎಂದರು.ಮಣ್ಣಿನ ಗಣೇಶ ಮೂರ್ತಿ ತಯಾರಕರಾದ ಸರಸ್ವತಿ ಸಾರವೆ, ಕಲಾವತಿ ಮಠಪತಿ, ಈರಮ್ಮ ವಿಶ್ವಕರ್ಮ, ಸವಿತಾ ಚಂದ್ರಕಾಂತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ