ಅಲ್ಲೂರ ಬಿ ಗ್ರಾಮಕ್ಕೆ ಎಸ್ಪಿ ಪಂತ್ ಭೇಟಿ
Team Udayavani, Jan 6, 2022, 11:17 AM IST
ಚಿತ್ತಾಪುರ: ತಾಲೂಕಿನ ಅಲ್ಲೂರ (ಬಿ) ಗ್ರಾಮದಲ್ಲಿ ಅಕ್ರಮ ಗಾಂಜಾ ಬೆಳೆ ಬೆಳೆಯುವುದಾಗಲಿ ಅಥವಾ ಮಾರಾಟ ಮಾಡುವುದಾಗಲಿ ಕಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಖಡಕ್ ಎಚ್ಚರಿಕೆ ನೀಡಿದರು.
ತಾಲೂಕಿನ ಅಲ್ಲೂರ (ಬಿ) ಗ್ರಾಮಕ್ಕೆ ಭೇಟಿ ಮಾಡಿ ಸಾರ್ವಜನಿಕರ ಸಭೆ ನಡೆಸಿ ಮಾತನಾಡಿದ ಅವರು, ಗಾಂಜಾ ಮಾರಾಟ ಮಾಡುವವರಿಗೆ ಯಾರಾದರೂ ಸಹಕಾರ ನೀಡಿದರೆ ಅವರ ಮೇಲೆಯೂ ಕಾನೂನು ಅಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗ್ರಾಮದಲ್ಲಿ ಎಲ್ಲಾದರೂ ಅಕ್ರಮ ಗಾಂಜಾ ಬೆಳೆ ಬೆಳೆದಿದ್ದರೆ ಅಥವಾ ಮಾರಾಟ ಮಾಡುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಡಿವೈಎಸ್ಪಿ ಉಮೇಶ ಚಿಕ್ಕಮಠ, ಸಿಪಿಐ ಕೃಷ್ಣಪ್ಪ ಕಲ್ಲದೇವರು, ಪಿಎಸ್ಐ ಗಂಗಮ್ಮ, ಸಿಬ್ಬಂದಿಗಳಾದ ನಾಗೇಂದ್ರ ತಳವಾರ, ಮಹೇಶ ರೆಡ್ಡಿ, ಚಂದ್ರಶೇಖರ, ಅಜರೋದ್ದಿನ್, ಮುಖಂಡರಾದ ಶಂಕರ ವಿಜಾಪೂರಕರ್, ಮಹಾದೇವ ಕೊನಗೇರಿ, ರಾಮಲಿಂಗ, ದುರ್ಜಿನ ನಾಟೀಕಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ