ಹಾಳಾದ ಹಳ್ಳಿರಸ್ತೆ; ತಪ್ಪದ ನರಕ ಯಾತನೆ

ವಾಹನ ಸವಾರರು ಪರದಾಡುವಂತಾಗಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Team Udayavani, Aug 30, 2021, 5:54 PM IST

ಹಾಳಾದ ಹಳ್ಳಿರಸ್ತೆ; ತಪ್ಪದ ನರಕ ಯಾತನೆ

ಅಫಜಲಪುರ: ತಾಲೂಕಿನ ಬಡದಾಳ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗಳು ಹದಗೆಟ್ಟು ಕೆಸರು ಗದ್ದೆಯಂತಾಗಿದ್ದು ಗ್ರಾಮಸ್ಥರು ನಿತ್ಯ ನರಕ ಯಾತನೆ ಅನುಭವಿಸುವಂತೆ ಆಗಿದೆ. ತಾಲೂಕಿನ ಬಡದಾಳ ಗ್ರಾಮ ಜಿಲ್ಲಾ ಪಂಚಾಯಿತಿ ಮತಕ್ಷೇತ್ರವಾಗಿದೆ. ಅಲ್ಲದೇ ಸ್ಥಳೀಯವಾಗಿಯೇ ಗ್ರಾ.ಪಂ ಕಚೇರಿಯು ಇದೆ. ಆದರೂ ಈ ಗ್ರಾಮದಲ್ಲಿನ ರಸ್ತೆ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿಲ್ಲ.

ಬಡದಾಳದಿಂದ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ 4 ಕಿ.ಮಿ ರಸ್ತೆ ಹದಗೆಟ್ಟು ಎಲ್ಲಿ ನೋಡಿದರೂ ತಗ್ಗು ದಿಣ್ಣೆಗಳು ಬಿದ್ದು ಸುಗಮ ಸಂಚಾರಕ್ಕೆ ಸಂಚಕಾರ ಬಂದಿದೆ. ಬಡದಾಳದಿಂದ ಚಿಂಚೋಳಿ ಗ್ರಾಮಕ್ಕೆ ಸಂಪರ್ಕಿಸುವ 4 ಕಿ.ಮಿ ರಸ್ತೆ ಕೆಸರು ಗದ್ದೆಯಂತಾಗಿದೆ. ಬಡದಾಳದಿಂದ ರೇವೂರ(ಬಿ) ವರೆಗಿನ 5 ಕಿ.ಮಿ ರಸ್ತೆ ಕೆಸರು ಗದ್ದೆಯಂತಾಗಿದೆ.

ಅಲ್ಲದೆ ಬಡದಾಳ ಅರ್ಜುಣಗಿ ವರೆಗಿನ 4 ಕಿ.ಮೀ ರಸ್ತೆ ಕೂಡ ಕೆಸರು ಗದ್ದೆಯಂತಾಗಿ ಯಾವುದೇ ವಾಹನಗಳು ಸುಗಮವಾಗಿ ಸಂಚಾರ ಮಾಡಲಾಗುತ್ತಿಲ್ಲ. ಗ್ರಾಮದಲ್ಲಿ ಹೆರಿಗೆ, ತುರ್ತು ಸಂದರ್ಭದಂತ ಪರಿಸ್ಥಿತಿಯಲ್ಲಿ ಸಮಯಾನುಸಾರ ಪಟ್ಟಣಕ್ಕೆ ತಲುಪಲಾಗುತ್ತಿಲ್ಲ. ಅನೇಕ ಸಲ ತುರ್ತು ಪರಿಸ್ಥಿತಿಗಳಂತ ಸಂದರ್ಭದಲ್ಲಿ ರೋಗಿಗಳು ಪ್ರಾಣಾಪಾಯದಿಂದ ಪಾರಾದ ಘಟನೆಗಳು ನಡೆದಿವೆ.

30 ವರ್ಷದಿಂದ ರಸ್ತೆ ಕಾಣದ ಹೊಸ ಬಡಾವಣೆ; ಗ್ರಾಮದ ಹೊಸ ಬಡಾವಣೆ ನಿರ್ಮಾಣವಾಗಿ 30 ವರ್ಷ ಗತಿಸಿದರೂ ಇದುವರೆಗೂ ಬಡಾವಣೆಯಲ್ಲಿ ಸಿಸಿ ರಸ್ತೆಗಳಿಲ್ಲದೆ ಬಡಾವಣೆ ನಿವಾಸಿಗಳು ಪರಿತಪಿಸುವಂತಾಗಿದೆ. ತಾಲೂಕಿನ ಅನೇಕ ಹಳ್ಳಿ ರಸ್ತೆಗಳಿಗಿಲ್ಲ ಡಾಂಬರ್‌ ಭಾಗ್ಯ, ಬಡದಾಳ ಗ್ರಾಮದ ಎಲ್ಲ ಸಂಪರ್ಕ ರಸ್ತೆಗಳು ಸೇರಿದಂತೆ ತಾಲೂಕಿನ ಚಿಂಚೋಳಿ ಹಳಿಯಾಳ, ಬಂದರವಾಡ, ಭೋಸಗಾ ಸೇರಿದಂತೆ ಅನೇಕ ಗ್ರಾಮಗಳ ಸಂಪರ್ಕ ರಸ್ತೆಗಳಿಗೆ ಡಾಂಬರ್‌ ಭಾಗ್ಯವಿಲ್ಲದೆ ಗ್ರಾಮಸ್ಥರು, ವಾಹನ ಸವಾರರು ಪರದಾಡುವಂತಾಗಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಜೆಎಂಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ನಡೆದಿದೆ. ಬಳೂರ್ಗಿ ಬಡದಾಳ ರಸ್ತೆಗೆ ಅನುದಾನ ಇಡಲಾಗಿದೆ. ಅನುದಾನ ತರುವಕೆಲಸ ನಾನು ಮಾಡುತ್ತೇನೆ. ಗ್ರಾಮಸ್ಥರ ಸಹಕಾರ ಇದ್ದು ಗುತ್ತಿಗೆದಾರರು ಮತ್ತು ಅಧಿಕಾರಿಗಳು ಅವುಗಳನ್ನು ಅನುಷ್ಠಾನಕ್ಕೆ ತರುವಕೆಲಸ ಮಾಡಿದರೆ ಅಭಿವೃದ್ಧಿ ಕುಂಠಿತವಾಗುವುದಿಲ್ಲ.
ಎಂ.ವೈ. ಪಾಟೀಲ, ಶಾಸಕ

*ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.