ಎಸ್ಎಸ್ಎಲ್ಸಿ ಪರೀಕ್ಷೆ: ಗ್ರಾಮೀಣ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡಿದ ಗ್ರಾಪಂ ಅಧ್ಯಕ್ಷ
Team Udayavani, Mar 29, 2022, 11:35 AM IST
ವಾಡಿ: ನಗರಕ್ಕೆ ಹೋಗಿ ಪರೀಕ್ಷೆ ಬರೆಯಲು ಸಾರಿಗೆ ವ್ಯವಸ್ಥೆಯ ಸಂಕಷ್ಟ ಎದುರಿಸಿ ಚಿಂತಿತರಾಗಿದ್ದ ಗ್ರಾಮೀಣ ಭಾಗದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರಾಪಂ ಅಧ್ಯಕ್ಷನೋರ್ವ ಬಸ್ ವ್ಯವಸ್ಥೆ ಮಾಡುವ ಮೂಲಕ ಶಿಕ್ಷಣ ಕಾಳಜಿ ಮೆರೆದ ಘಟನೆ ಚಿತ್ತಾಪುರ ತಾಲೂಕಿನ ಯಾಗಾಪುರ ಗ್ರಾಮದಲ್ಲಿ ನಡೆದಿದೆ.
ಸೋಮವಾರದಿಂದ ಶುರುವಾದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಯಾಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ತಾಂಡಾಗಳ ಒಟ್ಟು 68 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು 18 ಕಿ.ಮೀ ದೂರದ ಹೋಬಳಿ ಕೇಂದ್ರಸ್ಥಾನ ನಾಲವಾರ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಿತ್ತು. ಯಾಗಾಪುರದಿಂದ ನಾಲವಾರಕ್ಕೆ ಸಾರಿಗೆ ಸೌಲಭ್ಯವಿಲ್ಲ. ಹಣ ಖರ್ಚು ಮಾಡಿ ಖಾಸಗಿ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕಾದ ಪ್ರಸಂಗ ಎದುರಾಗಿತ್ತು. ಇದನ್ನು ಗಮನಿಸಿದ ಯಾಗಾಪುರ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ, ತಕ್ಷಣವೇ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಪತ್ರ ಬರೆದು ಪರೀಕ್ಷೆ ಮುಗಿಯುವ ವರೆಗೆ ತಾತ್ಕಾಲಿಕ ವಿಶೇಷ ಬಸ್ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಗ್ರಾಮೀಣ ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಯಾಗಾಪುರ ಗ್ರಾಮಕ್ಕೆ ಬಸ್ ಕಳುಹಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಉಚಿತವಾಗಿ ಪೆನ್ ವಿತರಿಸುವ ಮೂಲಕ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭಕೋರಿದ್ದಾರೆ.
ಮುಖಂಡರಾದ ವಿಜಯ್ ಕುಮಾರ್ ನಾಯಕ್, ರೆಡ್ಡಿ ಬಂಜಾರ, ಚಂದ್ರು ಗೌಡ, ಗುಳ್ಳಪ್ಪ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ