5.20 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಕಾಮಗಾರಿಗೆ ಚಾಲನೆ

ಮಕ್ಕಳ ಪಾರ್ಕ ಮತ್ತು ಕ್ರೀಡಾ ಕುಳಿತು ನೋಡುವ ಪಾಟುಣಿಕೆಯಂತ ಸುಸಜ್ಜಿತ ಕಾಮಗಾರಿ ಕೈಗೊಳ್ಳಲಾಗುತ್ತಿದೆ

Team Udayavani, Sep 19, 2022, 4:52 PM IST

5.20 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಕಾಮಗಾರಿಗೆ ಚಾಲನೆ

ಆಳಂದ: ಬರುವ ದಿನಗಳಲ್ಲಿ ಅಮರ್ಜಾ ಅಣೆಕಟ್ಟೆ ಪ್ರವಾಸೋದ್ಯಮ ತಾಣವಾಗಿಸಿ ಶಿವನ ಪ್ರತಿಮೆ ಸ್ಥಾಪನೆ ಮತ್ತು ಪಟ್ಟಣದ ಹಳೆ ಚೆಕ್‌ ಪೋಸ್ಟ್‌ ಸ್ಥಳದಲ್ಲಿ ಸರ್ದಾರ ವಲ್ಲಾಭಭಾಯ್‌ ಪಟೇಲರ ಪ್ರತಿಮೆ ಸ್ಥಾಪನೆ ಕೈಗೊಳ್ಳಲಾಗುವುದು ಎಂದು ಶಾಸಕ ಸುಭಾಷ ಗುತ್ತೇದಾರ ಪ್ರಕಟಿಸಿದರು.

ಪಟ್ಟಣದ ಮಟಕಿ ರಸ್ತೆಯ ಸರ್ಕಾರಿ ಆಸ್ಪತ್ರೆ ಬಳಿಯ ತಾಲೂಕು ಸಾರ್ವಜನಿಕ ಕ್ರೀಡಾಂಗಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯ 2.20ಕೋಟಿ ರೂ. ಹಾಗೂ ಕ್ರೀಡಾ ಇಲಾಖೆಯ ಮೂರು ಕೋಟಿ ಸೇರಿ ಒಟ್ಟು 5.20ಕೋಟಿ ರೂ. ವೆಚ್ಚದ ಅನುದಾನದಲ್ಲಿ ಸುಸಜ್ಜಿತ ಸಾರ್ವಜನಿಕ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಇಂತ ಎಲ್ಲ ಕೆಲಸಗಳಿಗೆ ಮುಖ್ಯಮಂತ್ರಿಗಳು ಹಾಗೂ ಕೆಕೆಆರ್‌ಡಿಬಿಯಿಂದ ನಿರೀಕ್ಷೆ ಮೀರಿ
ಕ್ಷೇತ್ರದ ಅಭಿವೃದ್ಧಿಗೆ ಅನುದಾನ ದೊರೆಯುತ್ತಿದೆ.

ಈ ಅನುದಾನದಡಿ ಕೈಗೆತ್ತಿಕೊಂಡ ಶಾಲೆ, ಕಾಲೇಜುಗಳ ಕಟ್ಟಡ, ರಸ್ತೆ ನಿರ್ಮಾಣ, ಸಮುದಾಯ ಭವನ ದೇವಸ್ಥಾನ, ಉದ್ಯಾನವನ, ನೀರಾವರಿಯಂತ ಕಾಮಗಾರಿಗಳಲ್ಲಿ ಯಾವುದೇ ರಾಜೀಮಾಡಿಕೊಳ್ಳದೇ ಗುಣಮಟ್ಟತೆಗೆ ಒತ್ತು ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ಕ್ರೀಡಾಂಗಣಕ್ಕೆ 2.20ಕೋಟಿ ರೂ. ಅನುದಾನದಲ್ಲಿ ಜಿಪಂಗೆ ಕಾಮಗಾರಿ ವಹಿಸಿದ್ದ ವಿಶ್ರಾಂತಿಕೋಣೆ, ಆಡಳಿತ ಕಚೇರಿ, ಕಂಟ್ರೋಲ್‌ ರೂಮ್‌ ಸೇರಿ ಆವರಣ ಗೋಡೆ ಕಾಮಗಾರಿ ನಡೆಯಲಿದೆ. ಸಾಲದ್ದಕ್ಕೆ ಕ್ರೀಡಾ ಇಲಾಖೆಯ 3ಕೋಟಿ ರೂ. ವೆಚ್ಚದ ಕಾಮಗಾರಿಯ ಕ್ರಿಯಾ ಯೋಜನೆಗೆ ಸೂಚಿಸಿದ್ದು, ಇದರಲ್ಲಿ ಹೊರಾಂಗಣ ಜಿಮ್‌, ವಾಯುವಿಹಾರ, ಮಕ್ಕಳ ಪಾರ್ಕ ಮತ್ತು ಕ್ರೀಡಾ ಕುಳಿತು ನೋಡುವ ಪಾಟುಣಿಕೆಯಂತ ಸುಸಜ್ಜಿತ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಪೊಲೀಸ್‌ ಮೈದಾನದಲ್ಲಿ 1.85ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ಮತ್ತು ಜಿಮ್‌, ಪಾರ್ಕ್‌ ನಡೆಯಲಿದೆ. ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು. ತಾಲೂಕಿನ ಜೀವನಾಡಿ ಅಮರ್ಜಾ ಅಣೆಕಟ್ಟೆ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಇಲಾಖೆಯಿಂದ 10ಕೋಟಿ ರೂ. ನೀಡಲಾಗಿದೆ. ಅಲ್ಲದೇ ಕೆಕೆಆರ್‌ಡಿಬಿಯಿಂದ ಹೊಸದಾಗಿ ಮತ್ತೆ 10ಕೋಟಿ ರೂ. ಸೇರಿ 20ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ, ಬೋಟಿಂಗ್‌ ಕೆಲಸ ಮತ್ತು 5 ಕೋಟಿ ರೂ. ಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಜೊತೆಗೆ ಶಿವನ ಪ್ರತಿಮೆ ಸ್ಥಾಪಿಸಲು ಒಟ್ಟು 25 ಕೋಟಿಯಲ್ಲಿ ಅಣೆಕಟ್ಟೆಯಲ್ಲಿ ಕಾಮಗಾರಿಗೆ ಖರ್ಚು ಮಾಡಲಾಗುತ್ತಿದೆ ಎಂದು ವಿವರಿಸಿದರು.

ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಜಿಪಂ ಸಹಾಯಕ ಇಂಜಿನಿಯರ್‌ ಲಿಂಗರಾಜ ಪೂಜಾರಿ, ಪುರಸಭೆ ಸದಸ್ಯ ಶ್ರೀಶೈಲ ಪಾಟೀಲ, ಸಂತೋಷ ಹೂಗಾರ, ಆಸ್ಮಿàತಾ ಚಿಟಗುಪ್ಪಕರ್‌, ಮುಖಂಡ ಸಿದ್ಧು ಪೂಜಾರಿ, ರಾಜು ಷಣ್ಮೂಖ, ಮಿರು, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಮಹಾಂತಪ್ಪ ಹಾಳಮಳಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.