ಇಸ್ಲಾಂ ವಿರುದ್ಧ ಹೇಳಿಕೆ: ಶಿಕ್ಷೆಗೆ ಆಗ್ರಹ
Team Udayavani, Jun 11, 2022, 11:42 AM IST
ವಾಡಿ: ಇಸ್ಲಾಂ ಧರ್ಮಗುರು ಪ್ರವಾದಿ ಮಹ್ಮದ್ರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ, ರಾಜಾ ಸಿಂಗ್ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುನೈಟೆಡ್ ಫ್ರಂಟ್ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಪೊಲೀಸ್ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಯುನೈಟೆಡ್ ಫ್ರಂಟ್ ಸಂಘಟನೆ ಅಧ್ಯಕ್ಷ ಝಹೂರ್ ಖಾನ್, ದೇಶದಲ್ಲಿ ಇಸ್ಮಾಂ ವಿರುದ್ಧ ಮಾತನಾಡುವರರ ಸಂಖ್ಯೆ ಹೆಚ್ಚಾಗುತ್ತಿದೆ. ಧರ್ಮ ಗುರುಗಳನ್ನು ಅವಮಾನಿಸುವ ಮತ್ತು ಇಸ್ಮಾಂ ಧರ್ಮ ಸಂಸ್ಕೃತಿಯನ್ನು ಪ್ರಶ್ನಿಸುವ ಮನಸ್ಥಿತಿಗಳು ಸಮಾಜದಲ್ಲಿ ಕೋಮು ದ್ವೇಷ ಹುಟ್ಟುಹಾಕುತ್ತಿವೆ. ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜಕೀಯ ಕಾರಣಕ್ಕೆ ಪ್ರಶ್ನೆ ಮಾಡುವ ಭರದಲ್ಲಿ ಧರ್ಮದ ಕುರಿತು ಅವಹೇಳನಕಾರಿ ನುಡಿಗಳನ್ನು ವ್ಯಕ್ತಪಡಿ ಸುವುದು ಜನರ ನಂಬಿಕೆಗಳನ್ನೇ ಅವಮಾನಿಸಿದಂತಾಗುತ್ತದೆ. ಹೀಗೆ ಅವಮಾನಿಸಿದವರನ್ನು ಶಿಕ್ಷಿಸದೇ ಬಿಟ್ಟರೆ ಮುಂದೊಂದು ದಿನ ದೊಡ್ಡ ಪ್ರತಿಭಟನೆಗೆ ಕಾರಣವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಯುನೈಟೆಡ್ ಫ್ರಂಟ್ ಅಧ್ಯಕ್ಷ ಝಹೂರ್ ಖಾನ್, ಪ್ರಧಾನ ಕಾರ್ಯದರ್ಶಿ ಉಮೇರ್ ಜುನೈದಿ, ಎಂ.ಡಿ.ಜುಬೇಲ್, ಮಹ್ಮದ್ ಮಝರ್, ಮಹ್ಮದ್ ರಫೀಕ್, ಅಜ್ಮತ್ ಪಟೇಲ್, ಯೂಸೂಫ್ ಕೊಡಜ್ಜಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ