ಎಸ್ಟಿಪಿ-ಟಿಎಸ್ಪಿ ಆರ್ಥಿಕ ಪ್ರಗತಿಗೆ ಗಡು
ಸ್ಥಳದಲ್ಲಿಯೇ ಯೋಜನೆಗಳ ಸೌಲಭ್ಯ ನೀಡುವತ್ತ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
Team Udayavani, Mar 18, 2021, 6:08 PM IST
ಕಲಬುರಗಿ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಯಿಂದ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳನ್ನೆಲ್ಲ ಪ್ರಸಕ್ತ
ಮಾರ್ಚ್ ಅಂತ್ಯದೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜೋತ್ಸ್ನಾ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ನಿಗದಿತ ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿದ ಕೆಲ ಇಲಾಖೆಗಳಿದ್ದು,
ಮಾರ್ಚ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಫೆಬ್ರವರಿ ಅಂತ್ಯದ ವರೆಗೆ ಸಾಧಿಸಿದ ಪ್ರಗತಿ ಮೆಚ್ಚುಗೆಗೆ ಅರ್ಹವಾಗಿದೆ. ಆದರೆ ಅನುದಾನ ಲ್ಯಾಪ್ಸ್ಆಗುವುದಿಲ್ಲವೆಂದು ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡಬಾರದು ಎಂದು
ಅನುಷ್ಠಾನ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಿಬಿರ ನಡೆಸಿ: ಜಿಲ್ಲೆಯಲ್ಲಿ ಗಿರಿಜನರ ಸಂಖ್ಯೆ ಕಡಿಮೆ ಇರುವುದರಿಂದ ಗಿರಿಜನ ಉಪಯೋಜನೆಯಡಿ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಫಲಾನುಭವಿಗಳ
ಕೊರತೆ ಕಾಣುತ್ತಿದ್ದು, ಮುಂದಿನ ವರ್ಷ ಈ ಸಮಸ್ಯೆ ಉದ್ಭವಿಸದಂತೆ ಗಿರಿಜನರು ಹೆಚ್ಚಾಗಿ ವಾಸವಿರುವ ತಾಂಡಾ, ಗೊಲ್ಲರಹಟ್ಟಿಯಂತ ಸ್ಥಳಗಳಲ್ಲಿ
ಕಾರ್ಯಾಗಾರ, ಕ್ಯಾಂಪ್ ಮಾಡುವ ಮೂಲಕ ಅರಿವು ಮೂಡಿಸಿ, ಸ್ಥಳದಲ್ಲಿಯೇ ಯೋಜನೆಗಳ ಸೌಲಭ್ಯ ನೀಡುವತ್ತ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು
ಎಂದು ಸಲಹೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಅಲ್ಲಾಭಕ್ಷ ಅವರು ಪ್ರಸಕ್ತ 2020-21ನೇ ಸಾಲಿಗೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ರಾಜ್ಯ ವಲಯದಲ್ಲಿ
18997.84 ಲಕ್ಷ ರೂ., ಜಿಲ್ಲಾ ವಲಯದಲ್ಲಿ 3910.15 ಲಕ್ಷ ರೂ. ಸೇರಿದಂತೆ ಒಟ್ಟು 22907.99 ಲಕ್ಷ ರೂ. ಅನುದಾನ ಹಂಚಿಕೆಯಾಗಿದೆ. ಹಂಚಿಕೆ
ಪೈಕಿ ಎರಡು ವಲಯಗಳಲ್ಲಿ ಒಟ್ಟಾರೆ 16340.03 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಫೆಬ್ರವರಿ ಅಂತ್ಯಕ್ಕೆ 12666.89 ಲಕ್ಷ ರೂ. ಖರ್ಚು
ಮಾಡುವ ಮೂಲಕ ಬಿಡುಗಡೆಯಾದ ಅನುದಾನದಲ್ಲಿ ಶೇ.77ರಷ್ಟು ಪ್ರಗತಿ ಸಾಧಿಸಿದೆ. ಈ ಅನುದಾನದಲ್ಲಿ 461568 ಫಲಾನುಭವಿಗಳು ನೇರವಾಗಿ
ಪ್ರಯೋಜನ ಪಡೆಯಲಿದ್ದಾರೆ. 1250 ಸಮುದಾಯ ಆಧಾರಿತ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇದರಲ್ಲಿ ಇದುವರೆಗೆ 729 ಕಾಮಗಾರಿಗಳನ್ನು
ಪೂರ್ಣಗೊಳಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಜಿಪಂ ಸಿಇಒ ಡಾ| ದಿಲೀಶ್ ಸಾಸಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು
ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ