ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಮುಷ್ಕರ


Team Udayavani, Dec 17, 2021, 10:52 AM IST

4bank

ಕಲಬುರಗಿ: ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುವ ಹುನ್ನಾರ ನಡೆಸಿದ್ದು, ಇದರ ಪ್ರಕ್ರಿಯೆ ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನಗಳ ರಾಷ್ಟ್ರವ್ಯಾಪಿ ಬಾಂಕ್‌ ಮುಷ್ಕರದ ಅಂಗವಾಗಿ ನಗರದಲ್ಲೂ ಗುರುವಾರ ವಿವಿಧ ಬ್ಯಾಂಕ್‌ಗಳ ನೂರಾರು ನೌಕರರು ಪ್ರತಿಭಟನೆ ನಡೆಸಿದರು.

ನಗರದ ಜಗತ್‌ ವೃತ್ತದಲ್ಲಿ ಅಖೀಲ ಭಾರತ ಬ್ಯಾಂಕ್‌ ನೌಕರರ ಸಂಘ (ಎಐಬಿಇಎ)ದ ನೇತೃತ್ವದಲ್ಲಿ ಹಾಗೂ ಸೂಪರ್‌ ಮಾರ್ಕೆಟ್‌ನಲ್ಲಿರುವ ಕೆನರಾ ಬ್ಯಾಂಕ್‌ ಪ್ರಧಾನ ಕಚೇರಿ ಸಮೀಪ ಕೆನರಾ ಬ್ಯಾಂಕ್‌ ಅಧಿಕಾರಿಗಳ ಸಂಘ (ಸಿಬಿಒಎ) ಮತ್ತು ಅಖೀಲ ಭಾರತ ರಾಷ್ಟ್ರೀಕೃತ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟ (ಎಐಎನ್‌ಬಿಒಎಫ್‌)ದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಯಿತು.

2021-22ರ ಬಜೆಟ್‌ನಲ್ಲಿ ಸರ್ಕಾರವು ಈ ವರ್ಷದಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುವುದಾಗಿ ಘೋಷಿಸಿತ್ತು. ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಿದರೇ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿನ ಬ್ಯಾಂಕ್‌ ಶಾಖೆಗಳನ್ನು ಮುಚ್ಚುವ ಪರಿಸ್ಥಿತಿ ಬರುತ್ತಿದೆ. ಅಲ್ಲದೇ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾದ ಎಲ್ಲ ಸರ್ಕಾರಿ ಯೋಜನೆಗಳ ಅನುಷ್ಠಾನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪ್ರತಿಭಟನಾನಿರತ ಬ್ಯಾಂಕ್‌ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದರು.

ಈಗ ನಡೆಯುತ್ತಿರುವ ‌ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಬ್ಯಾಂಕ್‌ ಖಾಸಗೀಕರಣ ಮಸೂದೆ (ಬ್ಯಾಂಕಿಂಗ್‌ ಕಾನೂನುಗಳ ತಿದ್ದುಪಡಿ ಮಸೂದೆ-2021) ಮಂಡಿಸಬಾರದು. ಈ ಸೂಕ್ತವಾದ ಭರವಸೆಯನ್ನು ಸರ್ಕಾರ ನೀಡಿದರೆ, ಮುಷ್ಕರ ನಿಲ್ಲಿಸಬಹುದು. ಆದರೆ, ಈ ಬಗ್ಗೆ ಸರ್ಕಾರ ಯಾವುದೇ ಭರವಸೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನರ ಅನುಕೂಲಕ್ಕಾಗಿ 1980ರ ದಶಕದಲ್ಲಿ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಲಾಗಿತ್ತು. ಜನರು ಕಷ್ಟಪಟ್ಟುಗಳಿಸಿದ ಹಣವನ್ನು ಯಾವುದೋ ಖಾಸಗಿಯವರ ಪಾಲಾಗಿ ದುರುಪಯೋಗ ಬಾರದು ಎಂಬ ಉದ್ದೇಶದಿಂದ ಬ್ಯಾಂಕ್‌ಗಳ ರಾಷ್ಟ್ರೀಕರಣ ಮಾಡಲಾಗಿದೆ. ಆದರೆ, ಈಗಿನ ಸರ್ಕಾರ ಇದ್ಯಾವುದನ್ನು ಯೋಚಿಸದೇ ಬ್ಯಾಂಕ್‌ ಗಳನ್ನು ಖಾಸಗಿ ವರೆಗೆ ಒಪ್ಪಿಸಲು ಮುಂದಾಗಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲೇ ಬೆಂಗಳೂರಿನ ಗುರು ರಾಘವೇಂದ್ರ ಅ‌ರ್ಬನ್‌ ಸಹಕಾರ ಸಂಘ, ವಿಜಯಪುರದ ಡೆಕ್ಕನ್‌ ಬ್ಯಾಂಕ್‌ ಸೇರಿದಂತೆ ಹಲವು ಖಾಸಗಿ ವಲಯದ ಬ್ಯಾಂಕ್‌ಗಳು ದಿವಾಳಿಯಾಗಿವೆ. ನಷ್ಟದ ಸುಳಿಗೆ ಸಿಲುಕಿದ ಖಾಸಗಿ ಸ್ವಾಮ್ಯದ ‌ ಯೆಸ್‌ ಬ್ಯಾಂಕ್‌ ಮುಳುಗಿದಾಗ ಅದರ ಗ್ರಾಹಕರ ‌ ನೆರವಿಗೆ ಎಸ್‌ಬಿಐ ಬಂದಿತು. ಆದರೆ, ಇದೇ ಮುಂದೊಂದು ದಿನ ಎಲ್ಲವೂ ಖಾಸಗೀ‌ಕರಣವಾದರೆ ಗ್ರಾಹಕರ ಹಿತವನ್ನು ಕಾಯುವವರು ಯಾರು ಎಂದು ಪ್ರತಿಭಟನಾನಿರತರು ಪ್ರಶ್ನಿಸಿದರು.

ಸರ್ಕಾರದ ಉದ್ದೇಶಿತ ಖಾಸಗೀಕರಣ ಪ್ರಕ್ರಿಯೆ ಪೂರ್ಣಗೊಂಡರೆ ಈಗಿನಂತೆ ಉದ್ಯೋಗಗಳು ಸಿಗುವುದಿಲ್ಲ. ಜನರ ಹಣದ ಠೇವಣಿಗೆ ಭದ್ರತೆ ಇರುವುದಿಲ್ಲ. ಬ್ಯಾಂಕಿಂಗ್‌ ವ್ಯವಸ್ಥೆ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳಲಿದೆ. ಆದ್ದರಿ‌ಂದ ಸರ್ಕಾರ ತಕ್ಷಣವೇ ಈ ಪ್ರಕ್ರಿಯೆ ಕೈಬಿಡಬೇಕೆಂದು ಒತ್ತಾಯಿಸಿದರು.

ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳಾದ ಚಂದ್ರಮೋಹನ, ವಿಜಯಲಕ್ಷ್ಮೀ ಮುಕ್ಯಾ, ಸತೀಶ ರಾಮಚಂದ್ರ ಚವ್ಹಾಣ, ವೇಣುಗೋಪಾಲ ಸಿಂಗ್‌, ಸತೀಶ ಜೋಶಿ, ರಮಾ ದರ್ಗಿ, ರವಿಗೌಡ, ಶ್ರೀಧರ, ರವಿಶಂಕರ, ಸಂತೋಷ ಪಾಟೀಲ, ಮದನ, ವಿದ್ಯಾ, ಪ್ರೀತಿ, ವಸೀಮಾ, ವೆಂಕಟೇಶ, ಪ್ರವೀಣ ಸಾಗರ್‌, ಗಂಗಾರಾಜು ಹಾಗೂ ನೂರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.