ಬಿಜೆಪಿಯಿಂದ ಸಶಕ್ತ-ಸದೃಢ ದೇಶ ನಿರ್ಮಾಣ


Team Udayavani, Nov 18, 2021, 12:22 PM IST

10bjo

ಅಫಜಲಪುರ: ಬಿಜೆಪಿ ಹೊರತು ಪಡಿಸಿ ಬೇರಾವ ಪಕ್ಷದಲ್ಲೂ ಕೆಳ ಮಟ್ಟದ ಕಾರ್ಯಕರ್ತರನ್ನು ಗುರುತಿಸಿ ದೊಡ್ಡ ಜವಾಬ್ದಾರಿ ನೀಡುವ ಪರಂಪರೆ ಇಲ್ಲ. ಹೀಗಾಗಿ ಪಕ್ಷಕ್ಕಾಗಿ ಶೃದ್ಧೆಯಿಂದ ಕೆಲಸ ಮಾಡಿ, ಪಕ್ಷ ನಿಮ್ಮ ಸೇವೆ ಗುರುತಿಸಿ ಜವಾಬ್ದಾರಿ ನೀಡಲಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮರನಾಥ ಪಾಟೀಲ ಹೇಳಿದರು.

ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ನಮ್ಮದು ಕಾರ್ಯಕರ್ತರ ಪಕ್ಷ, ಕಾರ್ಯಕರ್ತರೇ ಪಕ್ಷದ ನರನಾಡಿಗಳು. ಹೀಗಾಗಿ ಪಕ್ಷದ ವರಿಷ್ಠರು ಕಾರ್ಯಕರ್ತರಿಗೆ ಹೆಚ್ಚು ಸಮಯ ನೀಡುತ್ತಿದ್ದಾರೆ ಎಂದರು.

ಬಿಜೆಪಿ ಧ್ಯೇಯ ಉದ್ದೇಶ ಸದೃಢ ದೇಶ ಕಟ್ಟುವುದಾಗಿದೆ. ದೇಶದ ಒಳಿತಿಗಾಗಿ ಅನೇಕ ಕಠಿಣ ಕ್ರಮಗಳನ್ನು ಮೋದಿ ಸರ್ಕಾರ ಕೈಗೊಂಡಿದೆ. ಅಲ್ಲದೆ ದೊಡ್ಡ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಬಲಿಷ್ಠಗೊಳಿಸಿದೆ. ಅವರ ಕೆಲಸಗಳನ್ನು ಜಗತ್ತು ಹೊಗಳುತ್ತಿದೆ. ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಮ ಮಂದಿರ ನಿರ್ಮಾಣ, ಕೊರೊನಾ ಸಂದರ್ಭದಲ್ಲಿ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಣೆ, ನರೇಗಾ ಬೋಗಸ್‌ ತಡೆಯಲು ಬೋಗಸ್‌ ರೇಷನ್‌ ಕಾರ್ಡ್‌ ರದ್ದುಗೊಳಿಸಿದ್ದರ ಪರಿಣಾಮ ಬೊಕ್ಕಸಕ್ಕೆ 1.80 ಲಕ್ಷ ಕೋಟಿ ರೂ. ಉಳಿತಾಯವಾಗಿದೆ. ಇವೆಲ್ಲ ಹೊರತು ಪಡಿಸಿ ಇನ್ನು ಸಾಕಷ್ಟು ಅಭಿವೃದ್ದಿ ಕೆಲಸಗಳು ನಡಯುತ್ತಿವೆ. ಪಕ್ಷದ ಕಾರ್ಯಕರ್ತರು ಇವುಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಸುಭಾಷ ಪ್ಯಾಟಿ, ಸೂರ್ಯಕಾಂತ ನಾಕೇದಾರ, ಸಚೀನ ರಾಠೊಡ, ಮಲ್ಲಿಕಾರ್ಜುನ ನಿಂಗದಳ್ಳಿ, ಸಂಜಯ ಮಿಸ್ಕಿನ್‌, ಸುರೇಖಾ ಪದಕಿ, ಸುನೀಲ ಶೆಟ್ಟಿ, ಭಾಗೇಶ ಬೋರೆಗಾಂವ್‌, ಧಾನು ಪತಾಟೆ, ನಾಮದೇವ ರಾಠೊಡ, ರಾಮಣ್ಣ ನಾಯ್ಕೋಡಿ, ವಿಠೊಬಾ ಹಿರೇಕುರುಬರ, ಆನಂದ ಶೆಟ್ಟಿ, ಗುರುಬಾಳಪ್ಪ ಜಕಾಪುರ, ಶಿವು ಪದಕಿ, ಮನೋಹರ ರಾಠೊಡ, ಗಂಗಾಧರ ಶ್ರೀಗಿರಿ, ಶ್ರೀಶೈಲ ಬಳೂರ್ಗಿ, ಪ್ರಭಾವತಿ ಮೇತ್ರಿ ಮತ್ತಿತರರು ಇದ್ದರು.

ಕಾರ್ಯಕಾರಿಣಿ ಸಭೆಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಕಡ್ಡಾಯವಾಗಿ ಹಾಜರಾಗಬೇಕು. ಆದರೆ ಇವತ್ತಿನ ಕಾರ್ಯಕಾರಿಣಿಯಲ್ಲಿ ಖಾಲಿ ಕುರ್ಚಿಗಳೆ ಹೆಚ್ಚಾಗಿವೆ. ಇದು ಯಾಕೋ ಸರಿ ಎನಿಸುತ್ತಿಲ್ಲ. ಮುಂದಿನ ಕಾರ್ಯಕಾರಿಣಿ ಹಾಗೂ ಪಕ್ಷದ ಸಂಘಟನೆ ಕೆಲಸಗಳು ಕ್ಷೇತ್ರದ ಮಾಜಿ ಶಾಸಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ನೇತೃತ್ವದಲ್ಲಿ ನಡೆಯಲಿವೆ. ಮುಂದಿನ ಸಭೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕು. ಅಲ್ಲದೇ ನಿಮ್ಮ ಕಾರ್ಯವೈಖರಿ ರಿಪೋರ್ಟ್‌ ಕಾರ್ಡ್‌ನೊಂದಿಗೆ ಬರಬೇಕು. -ಅಮರನಾಥ ಪಾಟೀಲ, ಮಾಜಿ ಎಂಎಲ್‌ಸಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.