ನಾಗಾವಿ ಕ್ಯಾಂಪಸ್ಗೆ ಬಸ್ ಕಲ್ಪಿಸಲು ವಿದ್ಯಾರ್ಥಿಗಳ ಆಗ್ರಹ
Team Udayavani, Dec 24, 2021, 2:24 PM IST
ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನಲ್ಲಿನ ಸರ್ಕಾರಿ ಐಟಿಐ ಕಾಲೇಜು ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಟಿ ಬಸ್ ಸೌಲಭ್ಯ ಒದಗಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಬಸ್ ಘಟಕ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಸಂಚಾಲಕ ವೆಂಕಟೇಶ ದೇವದುರ್ಗ ಮಾತನಾಡಿ, ಚಿತ್ತಾಪುರ ತಾಲೂಕಿನ ಬಹುತೇಕ ಹಳ್ಳಿಗಳು, ನಗರದ ಹಲವಾರು ಬಡವಣೆಗಳಿಂದ ಶಾಲೆ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವುದರಿಂದ ಅವರಿಗೆ ಸರಿಯಾಗಿ ಸಿಟಿ ಬಸ್ ಸೌಲಭ್ಯವಿಲ್ಲ. ಇದು ವಿದ್ಯಾಭ್ಯಾಸ ಮುಂದುವರಿಸಲು ಹಿಂದೇಟು ಹಾಕುವಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಲಾಕ್ಡೌನ್ ಸಂದರ್ಭದಲ್ಲಿ ಸಾರಿಗೆ ಇಲಾಖೆಯು ಬಸ್ಗಳ ಸಂಖ್ಯೆಯು ಕಡಿತ ಗೊಳಿಸಿತ್ತು. ಈಗ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಆದ್ದರಿಂದ 5-6 ಕಿ.ಮೀ ದೂರದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ, ಆದರ್ಶ ವಿದ್ಯಾಲಯ ಹಾಗೂ ಸರ್ಕಾರಿ ವಸತಿ ನಿಲಯಗಳು ಇವೆ. ಅಲ್ಲಿಗೆ ದಿನಾಲೂ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ. ಆದರೆ ಈ ಮಾರ್ಗಕ್ಕೆ ಸರಿಯಾದ ಸಿಟಿ ಬಸ್ಸಿನ ಸೌಲಭ್ಯವಿಲ್ಲ ಎಂದರು.
ರಾವೂರು ಗ್ರಾಮಕ್ಕೆ ತೆರಳಲು ವಿದ್ಯಾರ್ಥಿ ಗಳಿಗೆ ಸಂಜೆ 5 ಗಂಟೆಗೆ ಒಂದೇ ಬಸ್ ಇರುವುದರಿಂದ ಎಲ್ಲ ವಿದ್ಯಾರ್ಥಿಗಳು ಅದೇ ಬಸ್ಸಿಗೆ ಹೋಗುವಂತೆ ಆಗಿದೆ. ಆದ್ದರಿಂದ ಅವಶ್ಯಕತೆಗೆ ತಕ್ಕಂತೆ ಬಸ್ಸಿನ ಸೌಲಭ್ಯ ಒದಗಿಸಬೇಕು ಎಂದು ತಾಲೂಕು ಸಂಚಾಲಕಿ ಪ್ರೀತಿ ದೊಡ್ಡಮನಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ