ಬೋಸ್ ಭಾರತದ ಅಪ್ರತಿಮ ವೀರ: ಡಾ| ಅಲ್ಲಮಪ್ರಭು
Team Udayavani, Jan 24, 2022, 10:21 AM IST
ಕಲಬುರಗಿ: ಬ್ರಿಟಿಷರು ಭಾರತ ಬಿಟ್ಟು ತೊಲಗಲು ಪ್ರಬಲ ಹೋರಾಟ ರೂಪಿಸಿ ದವರು ನೇತಾಜಿ ಸುಭಾಶ್ಚಂದ್ರ ಭೋಸ್ ಎಂದು ಡಾ| ಅಲ್ಲಮಪ್ರಭು ಗುಡ್ಡಾ ಹೇಳಿದರು.
ನಗರದ ದೊಡ್ಡಪ್ಪ ಅಪ್ಪ ವಸತಿ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತಾಜಿ ಸುಬಾಶ್ಚಂದ್ರ ಬೋಸ್ರ 125ನೇ ಜಯಂತಿ ಉದ್ದೇಶಿಸಿ ಅವರು ಮಾತನಾಡಿದರು.
ಭೋಸ್ ಭಾರತ ಕಂಡ ಅಪ್ರತಿಮ ವೀರರಾಗಿದ್ದರು. ಇಂಗ್ಲೆಂಡ್ನ ವಿರೋಧಿ ರಾಷ್ಟ್ರಗಳ ಗೆಳೆತನ ಬೆಳೆಸಿ ಅವೆಲ್ಲವುಗಳನ್ನು ಒಗ್ಗೂಡಿಸಿ ಬ್ರಿಟಿಷರ ವಿರುದ್ಧ ಹೋರಾಡಿ ಭಾರತ ಸ್ವಾತಂತ್ರ್ಯಾಕ್ಕಾಗಿ ಶ್ರಮಿಸಿದರು. ಐಎನ್ಎ ಕೇಂದ್ರ ಕಚೇರಿಯನ್ನು ಸಿಂಗಾಪುರದಲ್ಲಿ ತೆರೆದರು. 30,000 ಭಾರತೀಯ ಸೈನಿಕರನ್ನು ಒಗ್ಗೂಡಿಸಿ ಶಸ್ತ್ರಸಜ್ಜಿತರನ್ನಾಗಿದರು. ಪರ್ಯಾಯ ಭಾರತ ಸರ್ಕಾರ ರಚಿಸಿ, ವಿದೇಶಿಗರು ಒಪ್ಪಿಕೊಳ್ಳುವಂತೆ ಮಾಡಿದ್ದರು. ಐಸಿಎಸ್ ಪಾಸಾಗಿದ್ದ ಸುಭಾಶ್ಚಂದ್ರ ಭೋಸ್ ಭಾರತೀಯ ಯುವಕರಿಗೆ ಮಾದರಿಯಾಗಿದ್ದರು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ವಿನೋದಕುಮಾರ ಪತಂಗೆ ಮಾತನಾಡಿ, ಯುವಕರು ಶ್ರಮಜೀವಿಗಳಾಗಿ ಉತ್ತಮ ವ್ಯಕ್ತಿತ್ವ ಹೊಂದಬೇಕು. ನಾಡು, ನುಡಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಹಾ ವಿದ್ಯಾಲಯದ ವಿದ್ಯಾರ್ಥಿಗಳಾದ ಅನ್ನಪೂರ್ಣ. ಖುಷಿ, ಈಶ್ವರಿ, ಶಿವಾನಿ ಸುಭಾಶ್ಚಂದ್ರ ಬೋಸ್ ಕುರಿತು ತಮ್ಮ ಅನುಭವ ಹಂಚಿ ಕೊಂಡರು. ಡಾ| ಆನಂದ ಸಿದ್ಧಾಮಣಿ ನಿರೂಪಿಸಿದರು. ಕಾಲೇಜಿನ ಸಿಬ್ಬಂದಿ ಇದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!