ಸಕ್ಕರೆ ಕಾರ್ಖಾನೆ ಜಮೀನಿನ ಸಾಲ ವಿಷಯ ಮುನ್ನೆಲೆಗೆ


Team Udayavani, Nov 22, 2021, 11:56 AM IST

7sugar

ಕಲಬುರಗಿ: ಚಿಂಚೋಳಿ ಜನರ ಎರಡು ದಶಕಗಳ ನಿರೀಕ್ಷೆಯಾದ ಸಕ್ಕರೆ ಕಾರ್ಖಾನೆಗೆ ಸೋಮವಾರ ಅಡಿಗಲ್ಲು ನೆರವೇರಿಸಲಾಗುತ್ತಿದೆ. ಈ ಹೊತ್ತಲ್ಲೇ ಈ ಕಾರ್ಖಾನೆ ತಲೆಎತ್ತಲಿರುವ ಜಮೀನಿಗೆ ಸಂಬಂಧಿಸಿದ 210 ಕೋಟಿ ರೂ. ಸಾಲದ ವಿಷಯ ಈಗ ಮುನ್ನೆಲೆಗೆ ಬರುತ್ತಿದೆ.

ವಿಜಯಪುರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘ ರೋಗಗ್ರಸ್ತ ಕಾರ್ಖಾನೆಗಳ ಪುನಶ್ಚೇತನ ಯೋಜನೆಯಡಿ ಖರೀದಿಸಿದ ಜಮೀನಿನಲ್ಲಿ “ಸಿದ್ಧಸಿರಿ ಸಕ್ಕರೆ ಕಾರ್ಖಾನೆ, ಸಿದ್ಧಸಿರಿ ಇಥೆನಾಲ್‌ ಹಾಗೂ ಪವರ್‌ ಉತ್ಪಾದನಾ ಘಟಕ’ ಆರಂಭವಾಗಲಿದೆ.

ಇನ್ನು ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಸಹಕಾರಿ ಸಂಘದಡಿ ಸ್ಥಾಪಿಸಲು ದಶಕಗಳ ಹಿಂದೆಯೇ ಉದ್ದೇಶಿಸಿ, “ಚಿಂಚೋಳಿ ಶುಗರ್ಸ್‌ ಮಿಲ್ಸ್‌ ಲಿ. ಕಂಪನಿ’ ಆರಂಭಿಸಿ ಕಂಪನಿ ಕಾಯ್ದೆಯಡಿ 1995ರಲ್ಲಿ ನೋಂದಣಿ ಮಾಡಲಾಗಿತ್ತು. ಬಳಿಕ ಈ ಕಂಪನಿ ಆಡಳಿತ ಮಂಡಳಿ ಇದನ್ನು ಹೈದ್ರಾಬಾದ್‌ನ ಟಬೋì ಇಂಡಸ್ಟ್ರೀಸ್‌ ಮತ್ತು ಮೆಷಿನರೀಸ್‌ ಮಾಲೀಕ ಟಿ. ಸುಬ್ಬರಾಯಡು ಅವರಿಗೆ ಮಾರಾಟ ಮಾಡಿತ್ತು. ರಾಜ್ಯ ಸರ್ಕಾರ ಕೆಐಎಡಿಬಿ ಸಂಸ್ಥೆ ಮುಖಾಂತರ ಕಾರ್ಖಾನೆ ಸ್ಥಾಪನೆಗೆಂದು 97.13 ಎಕರೆ ಜಮೀನು ಮಂಜೂರು ಮಾಡಿತು. ಈ ಭೂಮಿ ಸಾಕಾಗಲ್ಲ ಎಂದು ಕಂಪೆನಿ ಆಡಳಿತ ಮಂಡಳಿ 110 ಎಕರೆ ರೈತರ ಖಾಸಗಿ ಭೂಮಿ ಖರೀದಿಸಿತ್ತು.

ಈ ರೈತರಿಂದ ಖರೀದಿಸಿದ ಹಾಗೂ ಕೆಐಎಡಿಬಿ ನೀಡಿದ ಭೂಮಿ ಮೇಲೆ ಒಟ್ಟು 210 ಕೋಟಿ ರೂ. ಸಾಲ ಪಡೆಯಿತು. ಆದರೆ ಕಾರ್ಖಾನೆ ಸ್ಥಾಪನೆಗೆ ಬದಲಾಗಿ ಇತರೆ ಉದ್ದೇಶಗಳಿಗೆ ಈ ಹಣ ಬಳಕೆ ಮಾಡಲಾಯಿತು ಎಂಬ ಆರೋಪ ಕೇಳಿಬಂದಿತ್ತು. 2016ರಲ್ಲಿ ಆಗಿನ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರಾಗಿದ್ದ ಹೇಮಂತ ನಿಂಬಾಳಕರ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ವರದಿ ಸಲ್ಲಿಸಿದ್ದರು. ಇದರ ನಡುವೆ ಕಾರ್ಖಾನೆಗೆ ರೈತರಿಂದ ಕಬ್ಬು ಪೂರೈಸಲಾಗುವುದು ಎಂದು ಹೇಳಿ ರೈತರ ಹೆಸರಿನಲ್ಲೂ ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಎತ್ತಲಾಗಿದೆ. ಈ ವಿಷಯ ಸದ್ಯ ನ್ಯಾಯಾಲಯದಲ್ಲಿದೆ ಎನ್ನಲಾಗಿದೆ.

ಒಟ್ಟಾರೆ ಸಾಲ ಎತ್ತುವಳಿ ಹಾಗೂ ವಂಚನೆ ಪ್ರಕರಣವನ್ನು ಸಿಐಡಿ ಗಮನಕ್ಕೆ ತರುವಲ್ಲಿ ಹಾಗೂ ರೈತರಿಗೆ ನ್ಯಾಯ ಕೊಡಿಸಲು ಮಾಜಿ ಸಚಿವ ದಿ| ವೈಜನಾಥ ಪಾಟೀಲ ರೈತರೊಂದಿಗೆ ಹತ್ತಾರು ಹೋರಾಟ ಮಾಡಿದ್ದರು. ಈ ನಡುವೆ ಕಾರ್ಖಾನೆ ಸ್ಥಾಪನೆಯಾಗದ್ದಕ್ಕೆ ಕಾರಣರಾದವರು ಹಾಗೂ ರೈತರ ಜತೆ ಚೆಲ್ಲಾಟವಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಕೂಗು ಕೇಳಿಬಂದಿದೆ.

ಇನ್ನೊಂದೆಡೆ ಎರಡು ತಿಂಗಳ ಹಿಂದೆಯಷ್ಟೇ ಅಧಿಕಾರ ಸ್ವೀಕರಿಸಿರುವ ತಮಗೆ ಈ ಕಾರ್ಖಾನೆ ಕುರಿತು ಹೆಚ್ಚಿನ ಮಾಹಿತಿ ಇಲ್ಲ. ಕಚೇರಿಯಲ್ಲಿ ದಾಖಲಾತಿಗಳಿದ್ದರೆ ಪರಿಶೀಲನೆ ನಡೆಸುವುದಾಗಿ ಚಿಂಚೋಳಿ ತಹಶೀಲ್ದಾರ್‌ ಅಂಜುಂ ತಬ್ಸುಮ್‌ ತಿಳಿಸಿದ್ದಾರೆ.

ಚಿಂಚೋಳಿ ಶುಗರ್ಸ್‌ ಮಿಲ್ಸ್‌ ಲಿ. ಕಂಪನಿಯನ್ನು ನಿರ್ದೇಶಕರ ಗಮನಕ್ಕೂ ತಾರದೆ ರಾತೋರಾತ್ರಿ ಬೇರೆಯವರಿಗೆ ಹೇಗೆ ಮಾರಾಟ ಮಾಡಲಾಯಿತು ಎಂಬುದೇ ತಿಳಿಯುತ್ತಿಲ್ಲ. ಹೇಗಾದರೂ ಆಗಲಿ ಸಕ್ಕರೆ ಕಾರ್ಖಾನೆ ಶುರುವಾಗಲಿ ಎಂಬುದೇ ತಮ್ಮ ಉದ್ದೇಶವಾಗಿತ್ತು. ಆದರೆ 210 ಕೋಟಿ ರೂ. ಸಾಲದ ಹೊಣೆಗಾರರ ವಿರುದ್ಧ ಹಾಗೂ ತಮಗಾದ ಅನ್ಯಾಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. -ಡಾ|ವಿಕ್ರಂ ವೈಜನಾಥ ಪಾಟೀಲ, ಎಂಎಸ್‌ಐಎಲ್‌ ಮಾಜಿ ಅಧ್ಯಕ್ಷ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.