ಆರೋಗ್ಯ ಸೇವೆ ಲಾಭ ಪಡೆಯಿರಿ: ಗುತ್ತೇದಾರ
Team Udayavani, May 3, 2022, 12:58 PM IST
ಆಳಂದ: ಜನಸಾಮಾನ್ಯರ ಆರೋಗ್ಯ ಸಂರಕ್ಷಣೆಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಜಾರಿಗೆ ತಂದ ಆರೋಗ್ಯ ಸೌಲಭ್ಯಗಳ ಲಾಭ ಪಡೆಯಲು ಮುಂದಾಗಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲೆ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಉಲಾಖೆ, ಜಿಲ್ಲಾ ಆಯುಷ್ಯ, ತಾಲೂಕು ಆಡಳಿತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ತಾಲೂಕು ಮಟ್ಟದಲ್ಲಿ ವಿವಿಧ ರೋಗಗಳಿಗೆ ಸಂಬಂಧಿಸಿದಂತೆ ತಪಾಸಣೆ ಮತ್ತು ಚಿಕಿತ್ಸೆಗೆ ಮುಂದಾಗಿ ನುರಿತ ವೈದ್ಯರು ಸಿಬ್ಬಂದಿ ಮೂಲಕ ಮುಂದಾಗಿದ್ದು, ಪ್ರತಿಯೊಬ್ಬ ಬಡವರು ಹಿಂಜರಿಯದೇ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ಕೈಗೊಂಡು ಆರೋಗ್ಯವಾಗಿದ್ದರೆ ಮಾತ್ರ ಸರ್ಕಾರದ ಯೋಜನೆಗಳ ಕಾರ್ಯ ಸಾರ್ಥಕವಾಗುತ್ತದೆ ಎಂದರು.
ಕೋವಿಡ್-19 ಒಂದರಿಂದ ಮೂರು ಅಲೆಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕುಟುಂಬವನ್ನು ಲೆಕ್ಕಿಸದೇ ಉತ್ತಮ ಕೆಲಸ ಮಾಡಿದ್ದು ಶ್ಲಾಘನೀಯವಾಗಿದೆ. 4ನೇ ಅಲೆ ಕುರಿತು ಮುಂಜಾಗ್ರತೆ ವಹಿಸಲು ಮುಂದಾಗಬೇಕು ಎಂದು ಹೇಳಿದರು.
ಬಿಪಿಎಲ್ ಗ್ರಾಹಕರಿಗೆ ದೊಡ್ಡ ರೋಗಗಳ ನಿವಾರಣೆಗೆ ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಕೈಗೊಂಡಿದೆ. ಇದು ಬಡವರಿಗೆ, ಕೂಲಿ ಕಾರರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಅನುಕೂಲವಾಗುತ್ತದೆ. ಕಾಯಿಲೆಗಳನ್ನು ನಿರ್ಲಕ್ಷಿಸದೇ ಸರ್ಕಾರಿ ವೈದ್ಯರನ್ನು ಸಂಪರ್ಕಿಸಿ ಗುಣಪಡಿಸಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಉಚಿತ ಚಿಕಿತ್ಸೆ ಪಡೆಯಲು ಆರೋಗ್ಯ ಕಾರ್ಡ್ಗಳನ್ನು ಪಡೆದುಕೊಂಡು ಸರ್ಕಾರ ಆಯ್ಕೆ ಮಾಡಿದ ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ನೀಡಿದೆ. ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಸುಶೀಲಕುಮಾರ ಅಂಬೂರೆ ಪ್ರಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ತಾಪಂ ಇಒ ಡಾ| ಸಂಜಯ ರೆಡ್ಡಿ, ಪುರಸಭೆ ಅಧ್ಯಕ್ಷೆ ರಾಜಶ್ರೀ ಎಸ್. ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ, ಡಿಎಚ್ಒ ಶರಣಬಸಪ್ಪ ಗಣಜಲಖೇಡ, ಸಮಾಜ ಕಲ್ಯಾಣಾಧಿ ಕಾರಿ ಮೋನಮ್ಮ ಸುತಾರ, ಸಿಡಿಪಿಒ ಶಿವಮೂರ್ತಿ ಕುಂಬಾರ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಮಹಾಂತಪ್ಪ ಹಾಳಮಳಿ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ಧರಾಮ ಪಾಟೀಲ ಮತ್ತಿತರರು ಇದ್ದರು. ಜಿಲ್ಲಾ ಆರೋಗ್ಯ ಸಮೀಕ್ಷಣಾಧಿಕಾರಿ ಶಿವುಕುಮಾರ ದೇಶಮುಖ, ಜಿಲ್ಲಾ ಮಲೆರಿಯಾ ಅಧಿಕಾರಿ ಡಾ| ಶರಣಬಸಪ್ಪ ಖ್ಯಾತನಾಳ, ಆರೋಗ್ಯ ಇಲಾಖೆ ನೋಡಲ್ ಅಧಿಕಾರಿ ಡಾ| ಚಂದ್ರಕಾಂತ ನರಿಬೋಳ, ಆಯುಷ್ಯ ಇಲಾಖೆ ಅಧಿಕಾರಿ ಡಾ| ರಿಯಾಜ್ ಸುಳ್ಳದ, ಡಾ| ಅಪ್ಪರಾವ್ ಅರಗಡೆ ಮತ್ತಿತರರು ಹಾಜರಿದ್ದರು.
ಮೇಳದಲ್ಲಿ 25 ವೈದ್ಯಕೀಯ ಚಿಕಿತ್ಸಾ ತಪಾಸಣಾ ಕೇಂದ್ರ ಸ್ಥಾಪಿಸುವ ಮೂಲಕ ಹಲವು ರೋಗಿಗಳ ತಪಾಸಣೆ ಹಾಗೂ ಚಿಕಿತ್ಸೆ ಔಷಧೋಪಚಾರ ಕೈಗೊಳ್ಳಲಾಯಿತು. ಅಲ್ಲದೇ, ಆರೋಗ್ಯ ಇಲಾಖೆಯಿಂದ ವಸ್ತು ಪ್ರದರ್ಶನ, ರಕ್ತದಾನ ಶಿಬಿರ ನಡೆಯಿತು.
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಿಂದ ನೂರಾರು ಮಂದಿ ಆರೋಗ್ಯ ತಪಾಸಣೆ ನಡೆಯಿತು. ಅಲ್ಲದೇ, ಆಯುಷ್ಯಮಾನ ಭಾರತ, ಆರೋಗ್ಯ ಕಾರ್ಡ್ಗಳನ್ನು ಫಲಾನುಭವಿಗಳಿಗೆ ಸ್ಥಳದಲ್ಲೇ ನೀಡಲಾಯಿತು. ಆರೋಗ್ಯ ಶಿಕ್ಷಣಾಧಿಕಾರಿ ವಿಜಯಲಕ್ಷ್ಮೀ ನಂದಿಕೋಲಮಠ ಪ್ರಾರ್ಥಿಸಿದರು. ಕೌನ್ಸಿಲರ್ ಶಿವುಕುಮಾರ ಸ್ವಾಗತಿಸಿದರು. ಚಾಮರಾಜ ದೊಡ್ಡಮನಿ ನಿರೂಪಿಸಿದರು. ಅಬ್ದುಲ್ ರಾವೂಫ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ