ಕಾನೂನು ಪ್ರಾಧಿಕಾರ ಲಾಭ ಪಡೆಯಿರಿ: ನಾಡಗೌಡ
Team Udayavani, Nov 10, 2021, 6:10 PM IST
ಆಳಂದ: ಬಡವರಿಗೆ, ನೊಂದು-ಬೆಂದವರಿಗೆ, ಶೋಷಿತರಿಗೆ ಮತ್ತು ಮಹಿಳೆಯರಿಗಾಗಿ ಇರುವ ಉಚಿತ ಕಾನೂನು ಸೇವಾ ಪ್ರಾಧಿಕಾರದ ಲಾಭ ಪಡೆದುಕೊಳ್ಳಬೇಕು ಎಂದು ಹಿರಿಯ ಶ್ರೇಣಿಯ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎಂ.ಸಿ. ನಾಡಗೌಡ ಹೇಳಿದರು.
ಪಟ್ಟಣದ ನ್ಯಾಯಾಲಯ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿ ಸಂಘದ ಆಶ್ರಯದಲ್ಲಿ ಭಾರತ ಅಮೃತ ಮಹೋತ್ಸವ, ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷದ ಆಚರಣೆ ಸಂಭ್ರಮ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರಿಗೂ ಒಂದೇ ನ್ಯಾಯ ದೊರಕುತ್ತದೆ. ಮಾನವ ಹಕ್ಕುಗಳ ವಂಚಿತರು, ಸರ್ಕಾರಿ ಸೌಲಭ್ಯಗಳಿಂದ ವಂಚಿತರು ಮತ್ತು ದೌರ್ಜನ್ಯ ಹಾಗೂ ಬಲತ್ಕಾರಕ್ಕೆ ಒಳಗಾದ ಬಡವರಿಗೆ ಉಚಿತ ಕಾನೂನು ಸೇವೆಯಿಂದ ನ್ಯಾಯ ಒದಗಿಸುವ ಕೆಲಸ ನಡೆಯುತ್ತಿದೆ ಎಂದರು.
ಉಪನ್ಯಾಸಕರಾಗಿದ್ದ ನ್ಯಾಯವಾದಿ ದೇವಾನಂದ ಹೋದಲೂರಕರ್ ಕಾನೂನು ಸೇವಾ ದಿನಗಳ ಕುರಿತು ಮಾತನಾಡಿ, ಬ್ರಿಟಿಷರ್ ಕೈಗೊಂಬೆಯಾಗಿದ್ದ ಭಾರತೀಯ ಪ್ರಜೆಗಳಿಗೆ ದೇಶ ಸ್ವಾತಂತ್ರ್ಯವಾದ ಮೇಲೆ ಜಾರಿಗೆ ಬಂದ ಸಂವಿಧಾನದಂತೆ ಎಲ್ಲರಿಗೂ ಒಂದೇ ಕಾನೂನು, ಒಂದೆ ಮತದಾನದ ಹಕ್ಕು ದೊರಕಿದೆ ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಕಾಂತ, ಸರ್ಕಾರಿ ವಕೀಲ ಶುಭಶ್ರೀ ಬಡಿಗೇರ, ಜ್ಯೋತಿ ವಿ. ಬಂದಿ ಮುಖ್ಯ ಅತಿಥಿಗಳಾಗಿದ್ದರು. ಕಾನೂನು ಸೇವೆಗಳ ಉಪಯುಕ್ತತೆ ಕುರಿತು ನ್ಯಾಯವಾದಿ ಎ.ಸಿ. ತೋಳೆ ಉಪನ್ಯಾಸ ನೀಡಿದರು. ಹಿರಿಯ ನ್ಯಾಯವಾದಿ ಬಿ.ಎ. ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಬಿ.ಜಿ. ಬೀಳಗಿ, ದೀಪಾರಾಣಿ ಕುಲಕರ್ಣಿ, ಬಿ.ಟಿ. ಸಿಂಧೆ, ಕೆ. ಮಲ್ಲಿಕಾರ್ಜುನ, ಯು.ಕೆ. ಇನಾಮದಾರ, ಕಂದಾಯ ನಿರೀಕ್ಷಕ ಶರಣು ಹಕ್ಕಿ, ನಾಗೇಂದ್ರ, ಎಂ.ಕೆ. ಗೋವಿನ್ ಹಾಗೂ ಕಕ್ಷಿದಾರರು ಇದ್ದರು. ನ್ಯಾಯವಾದಿ ಶಿವಶಂಕರ ಮುನ್ನೊಳ್ಳಿ ನಿರೂಪಿಸಿದರು. ಬಿ.ಎಸ್. ನಿಂಬರಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ