ಹಾಜರಿ ಹಾಕಿ ಶಾಲೆಗೆ ಚಕ್ಕರ್‌ ಹೊಡೆದ ಶಿಕ್ಷಕರು


Team Udayavani, Nov 26, 2021, 10:37 AM IST

4attendence

ಶಹಾಬಾದ: ಇಲ್ಲಿನ ಶಾಲೆಯೊಂದರಲ್ಲಿ ಸುಮಾರು ಒಂಭತ್ತು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲಿ ಒಬ್ಬರು ರಜೆ ಮೇಲಿದ್ದರೇ, ಉಳಿದ ಎಂಟು ಶಿಕ್ಷಕರು ಬೆಳಗ್ಗೆ ಬಂದು ಸಹಿ ಮಾಡಿ, ಮಧ್ಯಾಹ್ನದಿಂದ ಮುಖ್ಯ ಶಿಕ್ಷಕರು ಸೇರಿದಂತೆ ಐವರು ಶಿಕ್ಷಕರು ಶಾಲೆಗೆ ಚಕ್ಕರ್‌ ಹೊಡೆದ ಘಟನೆ ಗುರುವಾರ ನಡೆದಿದೆ.

ಇದು ನಗರದ ಮಧ್ಯ ಭಾಗದಲ್ಲಿರುವ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆ. ನಗರಸಭೆ ಸದಸ್ಯ ರವಿ ರಾಠೊಡ ಅವರು ಹಠಾತ್‌ನೇ ಗುರುವಾರ ಮಧ್ಯಾಹ್ನ ಶಾಲೆಗೆ ಬೇಟಿ ನೀಡಿದ ಸಂದರ್ಭದಲ್ಲಿ ಒಂಭತ್ತು ಶಿಕ್ಷಕರಲ್ಲಿ ಕೇವಲ ಮೂವರು ಶಿಕ್ಷಕರು ಹಾಜರಿದ್ದು, ಒಬ್ಬರು ರಜೆ ಮೇಲಿದ್ದರು. ಇದರಲ್ಲಿ ಸುಮಾರು ಐವರು ಶಿಕ್ಷಕರು ಮಧ್ಯಾಹ್ನ ಚಕ್ಕರ್‌ ಹೊಡೆದಿದ್ದು ಕಂಡು ಬಂತು. ಅಲ್ಲದೇ ಶಿಕ್ಷಕರ ಹಾಜರಿ ಪುಸ್ತಕದಲ್ಲಿ ಎಲ್ಲರೂ ಸಹಿ ಮಾಡಿದ್ದರು. ತಕ್ಷಣವೇ ನಗರಸಭೆ ಸದಸ್ಯ ರವಿ ರಾಠೊಡ ಸ್ಥಳದಲ್ಲಿದ್ದ ಶಿಕ್ಷಕರಿಗೆ ಮುಖ್ಯಗುರುಗಳನ್ನು ಕರೆಯಲು ತಿಳಿಸಿದರು.

ಆದರೆ ಆ ಐದು ಸಿಬ್ಬಂದಿಗಳಲ್ಲಿ ಮುಖ್ಯಗುರುಗಳು ಒಬ್ಬರು ಇದುದ್ದನ್ನು ಕಂಡು ಸಿಡಿಮಿಡಿಗೊಂಡರು. ಮುಖ್ಯಶಿಕ್ಷಕರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಮನಸ್ಸಿಗೆ ಬಂದಂತೆ ಬರುತ್ತಾರೆ ಮತ್ತು ಹೋಗುತ್ತಾರೆ. ದಿನಾಲೂ ಪಾಲಕರು ನನ್ನ ಹತ್ತಿರ ದೂರು ನೀಡುತ್ತಿದ್ದಾರೆ. ಮಕ್ಕಳ ಭವಿಷ್ಯ ಬೆಳಗುವ ಶಿಕ್ಷಕರು ಈ ರೀತಿ ಶಾಲೆಗೆ ಚಕ್ಕರ್‌ ಹೊಡೆದರೇ, ಮಕ್ಕಳ ಭವಿಷ್ಯ ಏನಾಗಬಹುದು. ಎಲ್ಲಿಗೆ ಹೋಗಿದ್ದಾರೆ ಎಂದು ಶಿಕ್ಷಕರನ್ನು ಕೇಳಿದರು. ಮನೆ ಶಾಂತಿ ಇರುವುದರಿಂದ ಸಹದ್ಯೋಗಿ ಶಿಕ್ಷಕರು ಅಲ್ಲಿಗೆ ಹೋಗಿದ್ದಾರೆ ಎಂದು ಶಿಕ್ಷಕರು ತಿಳಿಸಿದರು.

ಮುಖ್ಯ ಶಿಕ್ಷಕರಾದವರು ಶಾಲೆ ಬಗ್ಗೆ ಸ್ವಲ್ಪವೂ ಜವಾಬ್ದಾರಿ ಇಲ್ಲದೇ ಹೋದರೆ ಹೇಗೆ ಎಂದು ಹೇಳಿದರಲ್ಲದೇ, ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯಸ್ವಾಮಿ ರುದ್ನೂರ್‌ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಶಿಕ್ಷಣಾಧಿಕಾರಿಗಳು ಈ ಕುರಿತು ಪರಿಶೀಲಿಸಿ ನೋಟಿಸ್‌ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.