ಅಭಿವೃದ್ಧಿಯೇ ಮೂಲ ಮಂತ್ರ: ಪಾಟೀಲ್
Team Udayavani, Jan 11, 2022, 12:02 PM IST
ಅಫಜಲಪುರ: ಅಧಿಕಾರ ಶಾಶ್ವತವಲ್ಲ ಹೀಗಾಗಿ ಅಭಿವೃದ್ಧಿಯೇ ನನ್ನ ಮೂಲಮಂತ್ರವಾಗಿದೆ ಎಂದು ಶಾಸಕ ಎಂ.ವೈ. ಪಾಟೀಲ್ ಹೇಳಿದರು.
ತಾಲೂಕಿನ ಮಾಶಾಳ ಗ್ರಾಮದಲ್ಲಿ 2021-22ನೇ ಸಾಲಿನ 4.702 ಯೋಜನೆ ಅಡಿಯಲ್ಲಿ ಮಾಶಾಳ ದಿಕ್ಸಂಗಾ ಹಾಗೂ ಅಫಜಲಪುರ ಎಪಿಎಂಸಿ ಯಿಂದ ಬಳ್ಳೂಂಡಗಿ ಮುಖ್ಯ ಕಾಲುವೆಗೆ ಸಂಪರ್ಕಿಸುವ 2.2 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಜವಾಬ್ದಾರಿ ನನ್ನ ಮೇಲಿದೆ. ನನಗೆ ಅಧಿಕಾರ ನೀಡಿದ ಜನರ ಬೇಡಿಕೆಗಳನ್ನು ಈಡೇರಿಸುವ ಕೆಲಸದಲ್ಲಿ ತೊಡಗಿದ್ದೇನೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ಜನರ ಸೇವೆ ಮಾಡುತ್ತೇನೆ. ಈಗ ಅಧಿಕಾರ ನೀಡಿರುವ ಜನರ ನಂಬಿಕೆ ಉಳಿಸಿಕೊಳ್ಳುವುದಲ್ಲದೆ ತಾಲೂಕಿನಾದ್ಯಂತ ಅವಧಿ ಮುಗಿಯುದರೊಳಗಾಗಿ ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸಿ ಜನರ ಋಣ ತೀರಿಸುತ್ತೇನೆ ಎಂದರು.
ಮಾಜಿ ತಾಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಞಾನೇಶ್ವರಿ ಪಾಟೀಲ್ ಮಾತನಾಡಿದರು. ಮುಖಂಡರಾದ ರಾಜು ಬಬಲಾದ, ಮಹಾದೇವಗೌಡ ಕರೂಟಿ, ಶಿವಾನಂದ ಗಾಡಿಸಾಹುಕಾರ, ಶಿವು ಪಾರಗೊಂಡ, ಬಾಬಾಸಾಹೇಬಗೌಡ ಪಾಟೀಲ್, ಶರಣು ಕುಂಭಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ