ಕೈಗೆ ಬಲ ತುಂಬಿದ ಉಪ ಚುನಾವಣೆ


Team Udayavani, Jan 3, 2022, 10:56 AM IST

7election

ಸೇಡಂ: ಗ್ರಾಮ ಪಂಚಾಯಿತಿ ಮತ್ತು ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಜೆಪಿಗಿಂತಲೂ ಡಬಲ್‌ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಡಂ ವಿಧಾನಸಭೆ ವ್ಯಾಪ್ತಿಯಲ್ಲಿ 32 ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರಲ್ಲಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 31ರಲ್ಲಿ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಗೆದ್ದಿದೆ. ಒಂದು ಪಕ್ಷೇತರ ಅಭ್ಯರ್ಥಿ ಹಾಗೂ ಬಿಜೆಪಿ 10 ಸ್ಥಾನ ಗೆದ್ದಿದೆ ಎಂದರು.

ಅಲ್ಲದೇ 425 ಭಾರಿ ಅಂತರದಿಂದ ಪುರಸಭೆಯಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಇದು ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿಯಾಗಿದೆ. ವಿಧಾನಸಭೆ ವ್ಯಾಪ್ತಿಯ ಕರ್ಚಖೇಡ್‌ ಗ್ರಾಪಂನ 13 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆ 7 ಸ್ಥಾನ, ಗರಗಪಳ್ಳಿಯ 16ರ ಪೈಕಿ 12ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಈ ಮೂಲಕ ಎರಡೂ ಗ್ರಾಮ ಪಂಚಾಯಿತಿಗಳಲ್ಲಿ ಬಹುಮತ ಸಾಧಿಸಿದೆ ಎಂದು ಹೇಳಿದರು.

ಅಭಿವೃದ್ಧಿ ಮರೆಮಾಚಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿಗೆ ಜನತೆ ಸರಿಯಾದ ಉತ್ತರ ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ಸಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತ ದುರುಪಯೋಗ ಮಾಡಿಕೊಂಡು ಜನರಿಗೆ ಮಂಕು ಬೂದಿ ಎರಚಲಾಗುತ್ತಿದೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಎಪಿಎಂಸಿ ಅಧ್ಯಕ್ಷ ಹೇಮರೆಡ್ಡಿ ಪಾಟೀಲ, ಹಿರಿಯ ಮುಖಂಡ ವಿಶ್ವನಾಥ ಪಾಟೀಲ ಬೊಮ್ನಳ್ಳಿ, ಅಬ್ದುಲ್‌ ಗಫೂರ ಹಾಗೂ ಇತರರು ಇದ್ದರು.

15 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ನಿಟ್ಟಿನಲ್ಲಿ ಸರ್ಕಾರ ಘೋಷಿಸಿದೆ. ಈ ವಯಸ್ಸಿನ ಮಿತಿಯೊಳಗೆ ಇರುವವರು ಲಸಿಕೆ ಪಡೆದುಕೊಳ್ಳಬೇಕು. ಶಾಲೆ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಶಾಲೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಗಮನಹರಿಸಬೇಕು. ಜೊತೆಗೆ 60 ವರ್ಷ ಮೇಲ್ಪಟ್ಟವರು ಬೂಸ್ಟರ್‌ ಡೋಸ್‌ ಪಡೆಯಬೇಕು. ಮುಂದಿನ ದಿನಗಳಲ್ಲಿ ಕೋವಿಡ್‌ ದೊಡ್ಡ ಪ್ರಮಾಣದಲ್ಲಿ ಉಲ್ಬಣಿಸುವ ಮುನ್ಸೂಚನೆ ಇದ್ದು, ಬೆಡ್‌, ಆಕ್ಸಿಜನ್‌, ಔಷಧಗಳ ಶೇಖರಣೆ ಬಗ್ಗೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದೇನೆ. -ಡಾ| ಶರಣಪ್ರಕಾಶ ಪಾಟೀಲ, ಮಾಜಿ ಸಚಿವ

ಟಾಪ್ ನ್ಯೂಸ್

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.