ವಿದ್ಯಾರ್ಥಿಗಳ ಸಾಧನೆಯೇ ಗುರುವಿಗೆ ಕಾಣಿಕೆ
Team Udayavani, Mar 28, 2022, 3:25 PM IST
ಕಲಬುರಗಿ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಉನ್ನತ ಸಾಧನೆ ಮಾಡಿದ್ದು ಗುರುವಾದ ನನಗೆ ಹೆಮ್ಮೆಯಿದೆ ಎಂದು ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಶುಂಪಾಲ ಡಾ| ಎಸ್ .ವಿ. ಮಲ್ಲಾಪುರ ಹೇಳಿದರು.
ನಗರದ ವಿಶ್ವೇಶ್ವರಯ್ಯ ಭವನದಲ್ಲಿ ನಡೆದ 1981ರ ಸಾಲಿನ ಸಿವಿಲ್ ಇಂಜಿನಿಯರಿಂಗ್ ಬ್ಯಾಚ್ನ ಅಲುಮಿನಿ (ಹಳೆ ವಿದ್ಯಾರ್ಥಿಗಳ ಮಿಲನ) ಭೇಟಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಂದಿನ ವಿದ್ಯಾರ್ಥಿಗಳು ವಿವಿಧ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಿ, ಸಾಧನೆ ಮಾಡಿದ್ದು ಸಂತೋಷ ತಂದಿದೆ ಎಂದರು.
ಇನ್ಸ್ಟಿಟ್ಯೂಶನ್ ಇಂಜಿನಿಯರ್ಸ್ ಆಫ್ ಇಂಡಿಯಾ, ಕಲಬುರಗಿ ಲೋಕಲ್ ಸೆಂಟರ್ ಅಧ್ಯಕ್ಷ ಸುಭಾಷ ಸುಗೂರು ಮಾತನಾಡಿ, ಅಂದಿನ ವಿದ್ಯಾರ್ಥಿ ಜೀವನವು ಶಿಸ್ತು ಮತ್ತು ಉತ್ಸಾಹದಿಂದ ಕೂಡಿತ್ತು. ಕಲಿಯಬೇಕು ಎನ್ನುವ ಆಸಕ್ತಿಯಿಂದ ಜೀವನದಲ್ಲಿ ಸಾಧನೆ ಮಾಡಲು ಅನುಕೂಲವಾಯಿತು ಎಂದರು.
ನಿವೃತ್ತಿ ಜೀವನ ಸರಳವಾಗಿ ಸಾಗಿಸಿ. ಜತೆಗೆ ಆರೋಗ್ಯ ಕಡೆ ಹೆಚ್ಚಿನ ಗಮನ ಹರಿಸಿ, ನಿತ್ಯ ಜೀವನದಲ್ಲಿ ಪ್ರಾಣಾಯಾಮ, ಮುದ್ರಾಯೋಗ, ಯೋಗ ಅಳವಡಿಸಿಕೊಂಡು ನೆಮ್ಮದಿ ಕಂಡುಕೊಳ್ಳುದು ಮುಖ್ಯವಾಗಿದೆ. ಪ್ರತಿದಿನ ಬೆಳಗ್ಗೆ 6ರಿಂದ ವಿಶ್ವೇಶ್ವರಯ್ಯ ಭವನದಲ್ಲಿ ಯೋಗ ಹೇಳಿ ಕೊಡಲು ಶಿಕ್ಷಕರಿದ್ದು, ಪ್ರಯೋಜನ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಕಲಬುರಗಿ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶು ಪಾಲ ಡಾ| ಪಿ.ಆರ್.ಪಾಟೀಲ, ಸುರಪುರ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಪಿ.ಖಗೇಶನ್, ಪಿಡಬ್ಲ್ಯೂಡಿ ನಿವೃತ್ತ ಕಾರ್ಯದರ್ಶಿ ಸದಾಶಿವ ರೆಡ್ಡಿ ಬಿ.ಪಾಟೀಲ, ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಜಗ್ನನಾಥ ಹಲಿಂಗೆ, ಕಲಬುರಗಿ ಇಂಜಿನಿಯರಿಂಗ್ ಇನ್ಸಿrಟ್ಯೂಟ್ ಅಧ್ಯಕ್ಷ ಕಕ್ಕೇರಿ ಚಂದ್ರಶೇಖರ, ಕಾರ್ಯದರ್ಶಿ ಗುರುಗುಂಟಿ ಶಿವಶಂಕ್ರಪ್ಪ, ರಾಜಶೇಖರ ಗಾರಂಪಳ್ಳಿ, ಕಾಶೀನಾಥ ಬಿರದಕರ್, ಭಲ್ಲ ಲಕ್ಷಿಕ್ಷ್ಮೀಕಾಂತ ರೆಡ್ಡಿ, ಸೂರ್ಯಕಾಂತ ಕಲ್ಯಾಣಿ, ಪಗಾ ಜಿತೇಂದ್ರ, ಸಿದ್ಧರಾಜ ಪುಣಿಶೆಟ್ಟಿ, ಮಹ್ಮದ್ ಜಾವೀದ್, ಸತೀಶ್ ಹಜಾರೆ, ಗೋಪಿನಾಥ ಮಟ್ಟಿಮನಿ, ವಿಜಯಕುಮಾರ ಮೂಲಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ