ಹರನೂರ ಕೂಲಿ ಕಾರ್ಮಿಕರ ಧರಣಿ ಅಂತ್ಯ
Team Udayavani, Mar 17, 2022, 3:19 PM IST
ಜೇವರ್ಗಿ: ಉದ್ಯೋಗ ಖಾತ್ರಿ ಸಂಪೂರ್ಣ ಜಾರಿಗೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಾಲೂಕಿನ ಹರನೂರ ಗ್ರಾಮ ಪಂಚಾಯಿತಿ ಕಚೇರಿ ಎದುರು ಕಳೆದ ಶುಕ್ರವಾರದಿಂದ ನಡೆಸಲಾಗುತ್ತಿದ್ದ ಧರಣಿಯನ್ನು ಬುಧವಾರ ಅಧಿಕಾರಿಗಳ ಭರವಸೆ ಮೇರೆಗೆ ಅಂತ್ಯಗೊಳಿಸಲಾಯಿತು.
60 ವರ್ಷ ದಾಟಿದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು ಕನಿಷ್ಟ 7,500ರೂ. ಮಾಸಾಶನ ಮಂಜೂರಿ ಮಾಡಬೇಕು. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಬೆಳಗ್ಗೆ 9ರಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಖಾತ್ರಿ ಕೆಲಸ ನಿರ್ವಹಿಸಬೇಕು ಎಂಬ ಸರ್ಕಾರದ ಆದೇಶ ರದ್ದುಪಡಿಸಬೇಕು. ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿಗದಿ ಪಡಿಸಿದ 150 ದಿನಗಳ ಕಾಲ ನಿರಂತರ ಕೆಲಸ ನೀಡಬೇಕು. ಡಾ| ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬನ್ನು ಕೂಡಲೇ ಕಟಾವು ಮಾಡಿ ಬೆಂಬಲ ಬೆಲೆಯಲ್ಲಿ ಖರೀದಿಸಿ, ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯ ಮಾಡಬೇಕು ಸೇರಿದಂತೆ ಸ್ಥಳಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಆರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿತ್ತು.
ಬುಧವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ಅಬ್ದುಲ್ ನಬಿ, ಧರಣಿ ನಿರತರ ಸಮಸ್ಯೆ ಆಲಿಸಿ ಸ್ಥಳೀಯ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ರೈತರ, ಕೂಲಿಕಾರ್ಮಿಕರ ಕೆಲವು ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ರೈತ ಮುಖಂಡರಾದ ಪರಶುರಾಮ ಬಡಿಗೇರ, ಮಲ್ಕಪ್ಪ ಹರನೂರ, ಸಕ್ರೆಪ್ಪ ಹರನೂರ, ರೇವು ಜಾಧವ ರೇವನೂರ, ಶಂಕರಲಿಂಗ ಹನ್ನೂರ, ಯಲ್ಲಾಲಿಂಗ ತಳವಾರ, ರಸೂಲಬೀ ಹರನೂರ, ತಾರಾಬಾಯಿ ರಾಠೊಡ, ಬಸಮ್ಮ ಮ್ಯಾಗೇರಿ, ಸುನಂದಾ ಬಳಗಾರ, ಶಾರದಾ ರಾಠೊಡ, ಭೀಮಬಾಯಿ ರೇವನೂರ, ಚಂದ್ರಬಾಯಿ ಇಜೇರಿ, ರಾಜು ಸಾಥಖೇಡ ರೇವನೂರ, ಶ್ರೀನಿವಾಸ ದಾಸರ ಹಾಗೂ ರೇವನೂರ, ಹರನೂರಿನ ರೈತರು, ಕೂಲಿಕಾರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ