ಗಬ್ಬು ನಾರುತ್ತಿದೆ ರಾವೂರ ಪರಿಶಿಷ್ಟರ ಓಣಿ


Team Udayavani, Jan 20, 2022, 10:43 AM IST

3ravura

ವಾಡಿ: ಗಲೀಜು ಪರಿಸರ-ಕೊಳಚೆ ತುಂಬಿದ ಬಡಾವಣೆ, ಗಬ್ಬು ನಾರುವ ಬಹಿರ್ದೆಸೆ ತಾಣ. ಸ್ವಾತಂತ್ರ್ಯ ನಂತರವೂ ಮೀಸಲು ಮತಕ್ಷೇತ್ರಕ್ಕೆ ದೊರಕದ ಮೂಲ ಸೌಲಭ್ಯ. ಇಂತ ದುಸ್ಥಿತಿ ಸ್ಥಳೀಯ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಇಂತಹ ಅವ್ಯವಸ್ಥೆ ಇರುವುದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ. ಒಟ್ಟು 31 ಗ್ರಾಪಂ ಸದಸ್ಯರು ಇಲ್ಲಿದ್ದು, ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಇದಾಗಿದೆ. ಗ್ರಾಮ ಪಂಚಾಯಿತಿ ಕಚೇರಿ ಆವರಣ ಹಸಿರು ವಾತಾವರಣದಿಂದ ಕೂಡಿದ್ದು, ನೋಡುಗರ ಮನಸೂರೆಗೊಳ್ಳುತ್ತದೆ. ಆದರೆ ದಲಿತರ ಓಣಿಯತ್ತ ಹೆಜ್ಜೆ ಹಾಕಿದಾಗ ನರಕ ದರ್ಶನವಾಗುತ್ತದೆ. ಈ ಭಾಗದಲ್ಲಿ ಓಡಾಡುವಾಗ ಮೂಗು ಮುಚ್ಚಿಕೊಂಡೇ ಇರುವಂತ ಪರಿಸ್ಥಿತಿ ಇಲ್ಲಿದೆ.

ಅಧಿಕಾರಿಗಳು ಹಾಗೂ ಗ್ರಾಪಂ ಆಡಳಿತ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಾರೆ. ಗ್ರಾಮದ ರಸ್ತೆಯುದ್ದಕ್ಕೂ ನಿರ್ಮಿಸಲಾಗಿರುವ ಎಡ ಮತ್ತು ಬಲ ಭಾಗದ ಸಿಸಿ ಚರಂಡಿ ಸಂಪೂರ್ಣ ಕಸದಿಂದ ತುಂಬಿ, ಕೊಳೆ ಹೊತ್ತು ನಿಂತಿವೆ. ಮನೆಯಂಗಳದಲ್ಲಿ ಬೀಡುಬಿಟ್ಟ ಹಂದಿಗಳ ಹಿಂಡು ಕಸವನ್ನು ಹೆಕ್ಕಿ ಆಹಾರ ಹುಡುಕುತ್ತ ದುರ್ಗಂಧ ಹಬ್ಬಿಸುತ್ತಿವೆ. ರಸ್ತೆಗಳಲ್ಲಿ ಚರಂಡಿ ನೀರು ಹರಿದಾಡುತ್ತಿದೆ. ಕುಡಿಯುವ ಸಾರ್ವಜನಿಕ ನೀರಿನ ತಾಣಗಳು ಅಸ್ವಚ್ಚತೆಯಿಂದ ಕೂಡಿವೆ. ಹೋಗಲು ರಸ್ತೆಯಿಲ್ಲದ ಮತ್ತು ನೀರಿನ ಸೌಲಭ್ಯ ವಂಚಿತ ಮಹಿಳಾ ಶೌಚಾಲಯ ಗಬ್ಬೆದ್ದು ನಾರುತ್ತಿದೆ.

ವೈಯಕ್ತಿಕ ಶೌಚಾಲಯ ಸೌಲಭ್ಯ ಈ ಕುಟುಂಬಗಳಿಗೆ ತಲುಪಿವೆಯಾದರೂ ಬಳಕೆಗೆ ಬಾರದಷ್ಟು ಕಳಪೆಯಾಗಿವೆ. ಹೀಗಾಗಿ ಗ್ರಾಮಸ್ಥರು ಬಯಲು ಶೌಚಾಲಯವನ್ನೇ ನೆಚ್ಚಿಕೊಂಡಿದ್ದಾರೆ. ಮಳೆಯಾದರೆ ಮನೆಗಳಿಗೆ ನೀರು ನುಗ್ಗಿ ಬದುಕು ಬೀದಿಗೆ ಬೀಳುತ್ತದೆ. ರಸ್ತೆ, ಚರಂಡಿ, ಶೌಚಾಲಯ, ಕುಡಿಯಲು ಶುದ್ಧ ನೀರು ಗಗನಕುಸುಮವಾಗಿದೆ. ಇವೆಲ್ಲ ಅವ್ಯವಸ್ಥೆ ಸರಿಪಡಿಸಬೇಕು ಎಂದು ಬಡಾವಣೆ ನಿವಾಸಿಗಳು ಕೋರಿದ್ದಾರೆ.

ಗ್ರಾಮದ ವಿವಿಧ ಬಡಾವಣೆಗಳಲ್ಲಿ ಚರಂಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪರಿಶಿಷ್ಟರ ಓಣಿ ಮಾರ್ಗದ ರಸ್ತೆ ಬದಿಯ ಚರಂಡಿಗಳು ಕಸದಿಂದ ತುಂಬಿದ್ದರೆ ಸ್ಥಳ ಪರಿಶೀಲನೆ ನಡೆಸಿ ಸ್ವತ್ಛತೆಗೆ ಆದ್ಯತೆ ನೀಡುತ್ತೇನೆ. ಪರಿಶಿಷ್ಟರ ಬಡಾವಣೆಯ ಸಾರ್ವಜನಿಕ ಮಹಿಳಾ ಶೌಚಾಲಯ ಸೇರಿದಂತೆ ಇತರ ಬಡಾವಣೆಯ ಶೌಚಾಲಯಗಳನ್ನು ದುರಸ್ತಿ ಮಾಡಿಸಿ ನೀರಿನ ಸೌಲಭ್ಯ ಒದಗಿಸಲಾಗುವುದು. -ದೇವಕಿ ನಾರಾಯಣ ಮಿನಿಗಿಲೇರ ಗ್ರಾಪಂ ಅಧ್ಯಕ್ಷೆ, ರಾವೂರ

ಗ್ರಾಮದ ಪರಿಶಿಷ್ಟರ ಬಡಾವಣೆ ಮಾರ್ಗದಲ್ಲಿನ ಚರಂಡಿಗಳು ಅಸ್ವತ್ಛತೆಯಿಂದ ಕೂಡಿವೆ. ಚರಂಡಿ ಪಕ್ಕದಲ್ಲಿಯೇ ಓಣಿ ಜನರು ತಿಪ್ಪೆಗಳನ್ನು ನಿರ್ಮಿಸಿಕೊಂಡಿದ್ದರಿಂದ ಕಸವೆಲ್ಲ ಚರಂಡಿಗೆ ಬೀಳುತ್ತಿದೆ. ಎಷ್ಟು ಸಾರಿ ತಿಳಿವಳಿಕೆ ನೀಡಿದರೂ ನಿವಾಸಿಗಳು ಜಾಗೃತರಾಗುತ್ತಿಲ್ಲ. ಪದೇಪದೆ ಚರಂಡಿ ಸ್ವತ್ಛತೆ ಮಾಡಿಸಿದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಚರಂಡಿಗಳ ಮೇಲೆ ಮೇಲ್ಚಾವಣಿ (ಹಾಸುಗಲ್ಲು) ಹಾಕಲು ಅನುದಾನ ಮೀಸಲಿರಿಸಿದ್ದೇವೆ. ದಲಿರ ಓಣಿಯನ್ನು ನಾವು ನಿರ್ಲಕ್ಷ್ಯ ಮಾಡಿಲ್ಲ. ಶೌಚಾಲಯ ಮಾತ್ರ ಬಳಕೆಗಿಲ್ಲ. ಕೆಲವೇ ದಿನಗಳಲ್ಲಿ ಅದನ್ನು ಸರಿಪಡಿಸುತ್ತೇವೆ. -ಕಾವೇರಿ ರಾಠೊಡ, ಪಿಡಿಒ, ರಾವೂರ ಗ್ರಾಪಂ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.