ಪರಾರಿಯಾಗುವಾಗ ಬಾವಿಗೆ ಬಿದ್ದ ಕಳ್ಳ
ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸೋಮವಾರ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
Team Udayavani, Jul 28, 2021, 5:43 PM IST
ಕಲಬುರಗಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಮೊಬೈಲ್ ಕದ್ದು ಪರಾರಿಯಾಗುವ ವೇಳೆ ಕಳ್ಳನೊಬ್ಬ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ನಡೆಸಿದರೂ, ಮೃತ ದೇಹ ಪತ್ತೆಯಾಗಿಲ್ಲ. ಜು.28ರಂದು ಬೆಳಗ್ಗೆ ಶೋಧ ಕಾರ್ಯ ಮುಂದುವರಿಯಲಿದೆ.
ಸೋಮವಾರ ಸಂಜೆ 6:30ರ ಸುಮಾರಿಗೆ ಮೊಬೈಲ್ ಕದ್ದಿದ್ದ. ಆಗ ಕೆಲವರು ಹಿಡಿಯಲು ಯತ್ನಿಸಿದರು. ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಪ್ರಾಣಿ ಸಂಗ್ರಹಾಲಯ ಸಮೀಪದ ಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸೋಮವಾರ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಬಾವಿಯಲ್ಲಿ ತುಂಬಾ ಕಸ ತುಂಬಿಕೊಂಡ ಕಾರಣ ಪತ್ತೆ ಹಚ್ಚಲು ಕಷ್ಟವಾಗಿತ್ತು. ಹೀಗಾಗಿ ಮಂಗಳವಾರ ಬೆಳಗ್ಗೆ ಮಹಾನಗರ ಪಾಲಿಕೆ ಮೂಲಕ ಬಾವಿಯಲ್ಲಿ ನೀರನ್ನು ಮೋಟರ್ ಹಚ್ಚಿ ಖಾಲಿ ಮಾಡಿಸುವ ಪ್ರಯತ್ನ ನಡೆಯಿತು.
ಬಾವಿಯಲ್ಲಿ ಸಂಪೂರ್ಣ ಕಸ ತುಂಬಿದ್ದರಿಂದ ಎಲ್ಲ ನೀರು ಹೊರ ಹಾಕಲು ಸಾಧ್ಯವಾಗಲಿಲ್ಲ. ಅಲ್ಲದೇ, ಮಂಗಳವಾರ ಸಂಜೆ ವೇಳೆಗಾದರೂ ಮೃತ ದೇಹ ನೀರಲ್ಲಿ ತೇಲಬೇಕಿತ್ತು. ಆದರೆ, ಕಸ ಮತ್ತು ಮಣ್ಣು ಇರುವುದಿಂದ ಸಿಲುಕಿಕೊಂಡಿರುವ ಶಂಕೆ ಇದೆ. ಹೀಗಾಗಿ ಬುಧವಾರ ಮತ್ತೆ ಶೋಧ ಕಾರ್ಯ ಮಾಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು