ದಿಗ್ಗಾಂವ ಜಗಳಕ್ಕೆ ರಾಜಕೀಯ ಬಣ್ಣ ಬೇಡ


Team Udayavani, Apr 22, 2022, 11:56 AM IST

6politics

ಚಿತ್ತಾಪುರ: ತಾಲೂಕಿನ ದಿಗ್ಗಾಂವ ಗ್ರಾಮದಲ್ಲಿ ಕಳೆದ ಏ.16ರಂದು ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ದಲಿತರ ನಡುವೆ ನಡೆದ ಜಗಳ ತಿಳಿಗೊಳಿಸುವ ಬದಲು ಮತ್ತಷ್ಟು ದ್ವೇಷದ ಭಾವನೆ ಬಿತ್ತಿ ರಾಜಕೀಯ ಮಾಡುತ್ತಿರುವ ಸಮಾಜ ಸೇವಕ ಮಣಿಕಂಠ ರಾಠೊಡ ನಡೆ ಖಂಡನೀಯ ಎಂದು ಡಿಎಸ್‌ಎಸ್‌ ತಾಲೂಕು ಸಂಚಾಲಕ ಆನಂದ ಕಲ್ಲಕ್‌ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರಿಯಾಂಕ್‌ ಖರ್ಗೆ ಮದುವೆ ಕಾರ್ಯಕ್ರಮವೊಂದಕ್ಕೆ ದಿಗ್ಗಾಂವಗೆ ಹೋದಾಗ ದಲಿತ ಮಹಿಳೆಯರು ಕುಡಿಯುವ ನೀರು ಮತ್ತು ಶೌಚಾಲಯ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದರು. ಸಮಸ್ಯೆ ಬಗೆಹರಿಸಲು ಶಾಸಕರು ಸ್ಪಂದಿಸಿ ಹೋಗಿದ್ದರು. ಅವರು ಹೋದ ನಂತರ ವೈಯಕ್ತಿಕ ಕಾರಣಕ್ಕೆ ದಲಿತರ ನಡುವೆ ಗಲಾಟೆ ನಡೆದಿತ್ತು. ಇದನ್ನೇ ಮುಂದಿಟ್ಟುಕೊಂಡು ಕೆಲ ಬಿಜೆಪಿ ಮುಖಂಡರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.

ಡಿಎಸ್‌ಎಸ್‌ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್‌ ಮಾತನಾಡಿ, ದಿಗ್ಗಾಂವ ಗ್ರಾಮದಲ್ಲಿ ನಡೆದ ದಲಿತರ ವೈಯಕ್ತಿಕ ಜಗಳದಲ್ಲಿ ಶಾಸಕ ಪ್ರಿಯಾಂಕ್‌ ಖರ್ಗೆ, ಜಿಪಂ ಮಾಜಿ ಸದಸ್ಯ ಶಿವರುದ್ರ ಭೀಣಿ ಹೆಸರು ಪ್ರಸ್ತಾಪಿಸಿ, ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರ ನೀತಿಯನ್ನು ಖಂಡಿಸಿದರು.

ಈಗಾಗಲೇ ಶಾಸಕ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರು ಮತ್ತು ಸಾರ್ವಜನಿಕ ಶೌಚಾಲಯ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿ ಪ್ರಾರಂಭಕ್ಕೆ ಚಾಲನೆ ನೀಡಿದ್ದಾರೆ. ಮುಖಂಡರಾದ ಮಣಿಕಂಠ ರಾಠೊಡ ಅವರು ನಮ್ಮ ಸಮಾಜದ ಮಧ್ಯೆ ಬರುವ ಅವಶ್ಯಕತೆ ಇಲ್ಲ ಎಂದರು.

ಡಿಎಸ್‌ಎಸ್‌ (ಅಂಬೇಡ್ಕರ್‌ ವಾದ) ತಾಲೂಕು ಸಂಚಾಲಕ ದೇವಿಂದ್ರ ಕುಮಸಿ, ಶ್ರೀಕಾಂತ ಸಿಂಧೆ, ಜಗನ್ನಾಥ ಮುಡಬೂಳಕರ್‌, ಸಂಜಯ ಬುಳಕರ್‌, ಲೋಹಿತ್‌ ಮುದ್ದಡಗಿ, ವಿಶ್ವನಾಥ ಬಿದಿಮನಿ, ರವಿಸಾಗರ ಹೊಸಮನಿ, ಬಸವರಾಜ ಮುಡಬೂಳ, ಸೂರಜ್‌ ಕಲ್ಲಕ್‌, ಶರಣು ತಲಾಟಿ, ಪರಶುರಾಮ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.