ಖಾತ್ರಿ ಸ್ಥಳದಲ್ಲಿ ನೀರಿಲ್ಲ-ನೆರಳಿಲ್ಲ, ಕೋವಿಡ್‌ ನಿಯಮ ಪಾಲನೆಯೂ ಇಲ್ಲ

ಉದ್ಯೋಗ ಖಾತ್ರಿ ಕಾಮಗಾರಿ ಯಲ್ಲಿ ನಾವೆಲ್ಲ ಬೆವರು ಸುರಿಸಿ ಕೆಲಸ ಮಾಡುತ್ತೇವೆ.

Team Udayavani, Apr 22, 2021, 6:03 PM IST

cooli

ಮಾದನಹಿಪ್ಪರಗಿ: ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿಗಾರರಿಗೆ ನೀರಿಲ್ಲ, ನೆರಳಿಲ್ಲ, ಕೋವಿಡ್‌-19 ನಿಯಮಗಳ ಪಾಲನೆಯಂತೂ ಗೊತ್ತೇ ಇಲ್ಲ. ಗ್ರಾಮದಲ್ಲಿ ಸುಮಾರು ಏಳೆಂಟು ದಿನಗಳಿಂದ ಕೆರೆ ಹೂಳೆತ್ತುವ ಕೆಲಸ ಆರಂಭಿಸಲಾಗಿದೆ. 300 ಕೂಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರೆಲ್ಲ ಗುಂಪು ಸೇರಿಯೇ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಇವರಿಗೆ ತಿಳಿವಳಿಕೆ ನೀಡಿಲ್ಲ. ಕಾಮಗಾರಿ ಕೈಗೊಳ್ಳುವ ಪಂಚಾಯಿತಿ ವತಿಯಿಂದ ಮಾಸ್ಕ್ ವಿತರಣೆಯೂ ಆಗಿಲ್ಲ.

ಬೆಳಗಿನ ಜಾವ ಎದ್ದು ರೊಟ್ಟಿ, ಬುತ್ತಿ ಕಟ್ಟಿಕೊಂಡು 8 ಗಂಟೆಗೆ ಬರುವ ಕೂಲಿಕಾರರು ಬಿರು ಬಿಸಿಲಿನಲ್ಲಿಯೇ ಮಣ್ಣು ಹೊತ್ತು ಚೆಲ್ಲಿ ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ತಮಗೆ ಸಿಕ್ಕ ಜಾಗದಲ್ಲಿ ವಿಶ್ರಾಂತಿ ಪಡೆಯಲು ಕುಳಿತುಕೊಳ್ಳುತ್ತಿದ್ದಾರೆ. ಮಧ್ಯಾಹ್ನ ಆಗುವ ಮುನ್ನವೇ ಕೆಲಸ ಮುಗಿಸುವ ಧಾವಂತ ಕೂಲಿಕಾರರಿಗೆ. ಕೆಲವರು ಮನೆಯಿಂದಲೇ ನೀರಿನ ಬಾಟಲು ತಂದಿದ್ದರು. ಕೆಲಸ ಮಾಡುವ ಜಾಗದಲ್ಲಿಯೇ ಎಲ್ಲರೂ ಕುಳಿತು ರೊಟ್ಟಿಬುತ್ತಿ ಬಿಚ್ಚಿ ಊಟ ಮಾಡುತ್ತಾರೆ. ಕೂಲಿಕಾರರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ, ನೆರಳಿಗಾಗಿ ಟೆಂಟ್‌ ಹೊಡಿಸಿಲ್ಲ. ಇವರ ಮಕ್ಕಳನ್ನು ನೋಡಿಕೊಳ್ಳಲು ದಾದಿಯರು ಇಲ್ಲ. ಕೆಲಸಗಾರರ ಮಕ್ಕಳು ಗಿಡಗಂಟಿಯ ನೆರಳಲ್ಲೇ ಆಟವಾಡುತ್ತ ಕುಳಿತಿದ್ದವು.

ಉದ್ಯೋಗ ಖಾತ್ರಿ ಕಾಮಗಾರಿ ಯಲ್ಲಿ ನಾವೆಲ್ಲ ಬೆವರು ಸುರಿಸಿ ಕೆಲಸ ಮಾಡುತ್ತೇವೆ. ಇನ್ನು ಕೆಲವರು ಸುಮ್ಮನೆ ಅಡ್ಡಾಡಿಕೊಂಡು ಹೋಗಿ ಕೂಲಿ ಪಡೆಯುತ್ತಿದ್ದಾರೆ
ಎಂದು ಕೂಲಿಕಾರ ರೊಬ್ಬರು ಆಪಾದಿಸಿದರು.

ಕೆರೆ ಹೂಳೆತ್ತುವ ಕಾಮಗಾರಿ ಆರಂಭವಾಗುವ ಮುನ್ನ ಕೆಲವೇ ಕಾರ್ಮಿಕರು ಆಗಮಿಸಿದ್ದರು. ಈಗ 300ಕ್ಕಿಂತ ಹೆಚ್ಚು ಜನರಿದ್ದಾರೆ. ಆದ್ದರಿಂದ ಕುಡಿಯುವ ನೀರಿನ
ಟ್ಯಾಂಕ್‌ ತರಲು ಸ್ವಲ್ಪ ತಡವಾಗಿದೆ. ಕೋವಿಡ್‌ ನಿಯಮದಂತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕೂಲಿ ಕಾರ್ಮಿಕರಿಗೆ ತಿಳಿವಳಿಕೆ ನೀಡಲಾಗುವುದು. ಅಲ್ಲದೇ ಮಾಸ್ಕ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು.
ಪ್ರಭು ಎಸ್‌. ಗಡಗಿ, ಪಿಡಿಒ

ಸರ್‌, ಇಲ್ಲಿ ಕೆಲಸಕ್ಕೆ ಬಂದವರಿಗಿ ಪಂಚಾಯಿತಿಯವರು ಯಾವುದೇ ಸೌಲಭ್ಯ ಕೊಟ್ಟಿಲ್ರಿ. ದಣಿವಾದ್ರ ಒಂದ ಗಳಗಿ ಕೂಡಬೇಕಂದ್ರ ನೆರಳೂ ಇಲ್ರಿ, ನೀರು ಇಲ್ರಿ. ನಾವು ಮನುಷ್ಯಾರ ಅದೀವಿ. ನಮ್ಮ ಜೀವಕ್ಕೂ ತ್ರಾಸ್‌ ಆಗದಂಗ ಪಂಚಾಯಿತಿಯವ್ರು ನೋಡಬೇಕ್ರಿ.
ಶರಣಪ್ಪ ಪ್ಯಾಟಿ,ಕೂಲಿಕಾರ

ಸಾಹೇಬ್ರ ಬಾಯಾರಿಕೆಯಾಗಿ ನೀರ್‌ ಕುಡಿಬೇಕಂದ್ರ ಬಿಸಿಲಿಗೆ ಕಾಯ್ದು ಬಿಸಿ ನೀರ ಆಗ್ತಾವ್ರಿ. ಅಂತ ನೀರನ್ನೆ ಕುಡಿದು ಕೆಲಸ ಮಾಡತೀವ್ರಿ. ಎಷ್ಟು ನೀರು ಕುಡಿದ್ರೂ ಬಾಯಾರಿಕೆ ಹೋಗೋದಿಲ್ರಿ.
ಸುಭದ್ರ ಕಾಶಪ್ಪ ಪೂಜಾರಿ, ಕೂಲಿಕಾರ ಮಹಿಳೆ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.