ಸಾಧನೆಗೆ ಅಸಾಧ್ಯವಾಗದ್ದುಯಾವುದೂ ಇಲ್ಲ
Team Udayavani, Jan 25, 2022, 12:13 PM IST
ಶಹಾಬಾದ: ಸಾಧನೆಗೆ ಅಸಾಧ್ಯವಾಗದ್ದು ಯಾವುದು ಇಲ್ಲ.ಆದರೆ ಸಾ ಸುವ ಛಲ ಇದ್ದರೇ ಜೀವನದಲ್ಲಿ ಏನಾದರೂ ಆಗಬಹುದು ಎಂಬುದಕ್ಕೆ ಸುಧಾರಾಣಿ ನಾಟೇಕಾರ ಅವರ ಪರಿಶ್ರಮವೇ ಸಾಕ್ಷಿ ಎಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹೇಳಿದರು.
ನಗರದ ಜಿಇ ಕಾಲೋನಿಯ ನಿವಾಸಿ ಸುಧಾರಾಣಿ ನಾಟೇಕಾರ ಅವರು ಪಿಎಸ್ಐ ಆಗಿ ಆಯ್ಕೆಯಾಗಿರುವುದಕ್ಕೆ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೇ ಮಾತ್ರ ನೌಕರಿಯನ್ನು ಗಿಟ್ಟಿಸಿಕೊಳ್ಳಬಹುದು ಎಂಬುದಕ್ಕೆ ಅಪವಾದ ಎಂಬಂತೆ ಅಪ್ಪಟ ಕನ್ನಡ ಮಾಧ್ಯಮದಲ್ಲಿ ಓದಿದಲ್ಲದೇ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದು ಪಿಎಸ್ಐ ಆಗಿ ನೇಮಕವಾಗಿದ್ದಾರೆ. ಅವರ ಸತತ ಪರಿಶ್ರಮ, ಅಭ್ಯಾಸ ಅವರನ್ನು ಇಲ್ಲಿಗೆ ತಂದು ನಿಲ್ಲಿಸಿದೆ. ಅವರ ಅಭ್ಯಾಸ ನಿರಂತರವಾಗಿರಲಿ. ಇನ್ನೂ ಹೆಚ್ಚಿನ ಹುದ್ದೆಯನ್ನು ಪಡೆದುಕೊಳ್ಳುವಂತಾಗಲಿ ಎಂದು ಶುಭಕೋರಿದರು.
ಕಲಬುರಗಿ ದಕ್ಷಿಣ ವಿಧಾನಸಭಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್ ಮಾತನಾಡಿ, ವಿದ್ಯೆ ಗುಡಿಸಲಿನಲ್ಲಿ ಹುಟ್ಟಿದರೂ ಅರಮನೆಯಲ್ಲಿ ಅರಳುವ ಶಕ್ತಿ ಅದಕ್ಕಿದೆ. ಸಮಯದ ಪರಿಪಾಲನೆ, ಸತತ ಅಧ್ಯಯನ ಹಾಗೂ ಪರಿಶ್ರಮದ ಮೂಲಕವೇ ಏನಾದರೂ ಸಾಧಿಸಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ಎಂದರೆ ಸುಧಾರಾಣಿ ನಾಟೇಕಾರ ಅವರು ಪಿಎಸ್ಐ ಆಗಿ ನೇಮಕವಾಗಿರುವುದು ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿಕೊಂಡು ಮಾತನಾಡಿದ ಸುಧಾರಾಣಿ ನಾಟೇಕಾರ, ಸ್ಪಷ್ಟ ಗುರಿ, ಸಾಧಿ ಸುವ ಛಲ ಇದ್ದಾಗಲೂ ಸೋಲು ಕಾಣುತ್ತೆವೆ. ಎಡವಿದಾಗ ಕೈಚೆಲ್ಲದೇ ಮರಳಿ ಯತ್ನ ಮಾಡಬೇಕು. ಹಿಂದೆ ಮಾಡಿದ ತಪ್ಪುಗಳನ್ನು ಮರುಕಳಿಸದಂತೆ ತಿದ್ದುಕೊಳ್ಳಬೇಕು ಅಲ್ಲದೇ ಕಾಟಾಚಾರಕ್ಕೆ ಪರೀಕೆಗಳನ್ನು ಬರೆಯದೇ ಜೀವನದಲ್ಲಿ ಏನಾದರೂ ಸಾ ಧಿಸಬೇಕೆಂಬ ಅದಮ್ಯ ಬಯಕೆಯೊಂದಿಗೆ ಪರೀಕ್ಷೆಗೆ ಸಿದ್ಧರಾದರೇ ಸಾಧನೆ ತಾನಾಗಿ ಒಲಿಯುತ್ತದೆ ಎಂದರು.
ಈ ಸಂದರ್ಭದಲ್ಲಿ ಸಾಜ್ಜಿದ್ ಗುತ್ತೆದಾರ, ಕಿರಣಬಾಬು ಕೋರೆ, ಬಾಬು, ಡಾ| ಆಂಜನೇಯ, ನಾಗೇಂದ್ರ ನಾಟೇಕಾರ, ವೆಂಕಟೇಶ (ಲೇಖು), ಸಂತೋಷ ಉಳ್ಳಾಗಡ್ಡಿ, ಶಿವರಾಜ ನಾಟೇಕಾರ, ರವಿ, ಸಂತೋಷ ಉಳ್ಳಾಗಡ್ಡಿ, ವಿದ್ಯಾಸಾಗರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ