ಎತ್ತುಗಳ ಕಳ್ಳತನ ಪ್ರಕರಣ: ಮೂವರ ಬಂಧನ
Team Udayavani, Dec 6, 2021, 1:11 PM IST
ಆಳಂದ: ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ನಡೆದ ಎತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ನರೋಣಾ ಪೊಲೀಸರು, 85 ಸಾವಿರ ರೂ. ಮೌಲ್ಯದ ಎರಡು ಎತ್ತು, 5 ಲಕ್ಷ ರೂ. ಮೌಲ್ಯದ ಒಂದು ಮಹಿಂದ್ರಾ ಬುಲೆರೋ ಪಿಕಪ್ ಗೂಡ್ಸ್ ವಾಹನ ಮತ್ತು 20 ಸಾವಿರ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿದ್ಧಾಪುರದ ಭಾಷಾ ಸುಲೇಮಾನಸಾಬ್ ಖಟಕರ್ (29), ಬಳ್ಳಾರಿ ಜಿಲ್ಲೆಯ ಕೊಡಗಲ್ ಗ್ರಾಮದ ಭಾಷಾ ಹುಸೇನಸಾಬ ಸಯ್ಯದ್ (29), ರಾಯಚೂರು ಜಿಲ್ಲೆ ಸಿಂಧನೂರಿನ ಮೊಹ್ಮದ್ ರಫೀಕ್ ಹುಸೇನಸಾಬ ಪಠಾಣ (28) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚವರಿ ಮತ್ತು ಆಳಂದ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಮಂಜುನಾಥ ಮಾರ್ಗದರ್ಶನದಲ್ಲಿ ನರೋಣಾ ಪೊಲೀಸ್ ಠಾಣೆಯ ಪಿಎಸ್ಐ ವಾತ್ಸಲ್ಯ, ಪಿಎಸ್ಐ ಸೈಯದ್ ಮಹಿಬೂಬ ನೇತೃತ್ವದಲ್ಲಿ ಸಿಬ್ಬಂದಿಗಳಾದ ಭಗವಂತರಾಯ, ಶಾಂತಕುಮಾರ, ಈರಣ್ಣಾ, ರೇವಣಸಿದ್ಧಪ್ಪ, ಸತೀಶ್ಚಂದ್ರ, ಸತೀಶ, ಶರಣು, ಪ್ರದೀಪ, ಎಸ್ಜಿಪಿಎಲ್ಸಿಯಾದ ಶ್ರೀಶೈಲ ಎಂ. ಚಿಂಚೋಳಿ ದಾಳಿ ನಡೆಸಿ, ತಾಲೂಕಿನ ಬೋಳಣಿ ಕ್ರಾಸ್ ಹತ್ತಿರ ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ