ಟಿಪ್ಪು ಮೊದಲ ಸ್ವಾತಂತ್ರ್ಯ ಸೇನಾನಿ
Team Udayavani, Nov 13, 2021, 12:52 PM IST
ಅಫಜಲಪುರ: ಭಾರತದ ಮೊದಲ ಸ್ವಾತಂತ್ರ್ಯ ಸೇನಾನಿ, ಅಪ್ರತಿಮ ದೇಶಭಕ್ತ ಹಾಗೂ ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ವೀರಯೋಧ ಟಿಪ್ಪು ಸುಲ್ತಾನ್ ವ್ಯಕ್ತಿತ್ವ ಎಲ್ಲ ಜನಾಂಗದವರಿಗೆ ಮಾದರಿ ಎಂದು ಯುವ ಮುಖಂಡ ಸಮ್ಸುದ್ದಿನ್ ಹೇಳಕಾರ್ ಹೇಳಿದರು.
ತಾಲೂಕಿನ ಕರಜಗಿ ಗ್ರಾಮದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ವತಿಯಿಂದ 271ನೇ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಧ್ವನಿ ಎತ್ತಿದ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಟಿಪ್ಪು ಕೂಡಾ ಒಬ್ಬರು. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ ತಂದವರು. ಮೈಸೂರು ರಾಜ್ಯಕ್ಕೆ ರೇಷ್ಮೆ ಪರಿಚಯಿಸಿದವರು. ಇಂತಹ ಉದಾತ್ತ ವ್ಯಕ್ತಿತ್ವದ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸುವುದು ರಾಜಕೀಯ ಪ್ರೇರಿತವಾಗಿದೆ ಎಂದರು.
ನಿಜವಾದ ದೇಶಭಕ್ತನ ಕುರಿತ ಮಾಹಿತಿಯನ್ನು ಪಠ್ಯದಿಂದ ಕೈ ಬಿಟ್ಟಿದ್ದು ದುರದೃಷ್ಟಕರ. ರಾಷ್ಟ್ರನಾಯಕರನ್ನು ಒಂದು ಕೋಮಿಗೆ ಸೀಮಿತಗೊಳಿಸಿದ್ದು ಸರಿಯಲ್ಲ ಎಂದರು.
ಗ್ರಾಪಂ ಅಧ್ಯಕ್ಷ ವಿಠೊಬಾ ಹಿರೇಕುರಬರ, ಸದಸ್ಯರಾದ ಇರ್ಫಾನ ಜಮಾದಾರ, ಪೀರಪ್ಪ ನಾಯ್ಕೋಡಿ, ಉಸ್ಮಾನ ಚೌಧರಿ, ಮೈಹಿಬೂಬ ಬಂಟನೂರ, ಇರ್ಫಾನ್ ಜಮಾದಾರ, ಸೈಫನ್ ಮಲ್ಲಾಬಾದ, ರಜಾಕ್ ಮುಜಾವರ, ಅಯ್ಯೂಬ ಮುಜಾವರ, ಹೈದರ್ ಮುಜಾವರ, ಸೈಫನ್ ಮುಲ್ಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ