ನಾಳೆ ಶರಣಬಸವೇಶ್ವರ 200ನೇ ರಥೋತ್ಸವ
ಕಳೆದೆರಡು ವರ್ಷಗಳಿಂದ ಅದ್ಧೂರಿಯಾಗಿ ರಥೋತ್ಸವ ಹಾಗೂ 11 ದಿನಗಳ ಕಾಲ ವೈಭದವ ಜಾತ್ರಾ ಮಹೋತ್ಸವ ನಡೆದಿರಲಿಲ್ಲ
Team Udayavani, Mar 21, 2022, 5:53 PM IST
ಕಲಬುರಗಿ: ಈ ಭಾಗದ ಆರಾಧ್ಯ ದೈವ, ಮಹಾದಾಸೋಹಿ ಶ್ರೀ ಶರಣಬಸವೇಶ್ವರ 200ನೇ ಮಹಾ ರಥೋತ್ಸವ ಮಾರ್ಚ್ 22ರಂದು ಸಂಜೆ 6ಗಂಟೆಗೆ ನಡೆಯಲಿದೆ. 11 ದಿನಗಳ ಕಾಲ ಯುಗಾದಿ ಹಬ್ಬದ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ರವಿವಾರ ಲಕ್ಷದೀಪೋತ್ಸವದ ಮುಖಾಂತರ ಚಾಲನೆ ನೀಡಲಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಅದ್ಧೂರಿಯಾಗಿ ರಥೋತ್ಸವ ಹಾಗೂ 11 ದಿನಗಳ ಕಾಲ ವೈಭದವ ಜಾತ್ರಾ ಮಹೋತ್ಸವ ನಡೆದಿರಲಿಲ್ಲ. ಆದರೆ ಈ ಸಲ 200ನೇ ಮಹಾ ರಥೋತ್ಸವಕ್ಕೆ ಸಡಗರ ಮನೆ ಮಾಡಿದೆ. ಐತಿಹಾಸಿಕ, ಮಹಾಪುರುಷ ಶರಣಬಸವೇಶ್ವರರ ಈ ಸಲದ 200ನೇ ಮಹಾಜಾತ್ರಾ ಮಹೋತ್ಸವಕ್ಕೆ ಮತ್ತಷ್ಟು ವೈಭವ ತರುವ ನಿಟ್ಟಿನಲ್ಲಿ ರವಿವಾರ ಶರಣಬಸವೇಶ್ವರ ಮಹಾಸಂಸ್ಥಾನ ಹಾಗೂ ಶರಣರ ದೇವಾಲಯ ಪ್ರಾಂಗಣದಲ್ಲಿ ಆಯೋಜಿಸಲಾಗಿದ್ದ ಲಕ್ಷ ದೀಪೋತ್ಸವ ಇತಿಹಾಸ ಸೃಷ್ಟಿಸಿತು.
ಲಕ್ಷ ದೀಪೋತ್ಸವಕ್ಕೆ ಡಾ| ಅಪ್ಪ ಚಾಲನೆ:
ರವಿವಾರ ಸಂಜೆ ನಡೆದ ಲಕ್ಷ ದೀಪೋತ್ಸವಕ್ಕೆ ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ 8ನೇ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ, 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಹಾಗೂ ಪೂಜ್ಯ ಡಾ| ದಾಕ್ಷಾಯಣಿ ಅವ್ವ ಚಾಲನೆ ನೀಡಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಮುಂತಾದವರು ಇದ್ದರು.
ಹರಿದು ಬಂದ ಭಕ್ತ ಸಾಗರ:
ಲಕ್ಷ ದೀಪೋತ್ಸವ ಅಂಗವಾಗಿ ಮಹಾನಗರವಲ್ಲದೇ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಈ ವೇಳೆ ಭಕ್ತರಿಂದ ಶರಣಬಸವೇಶ್ವರ ಮಹಾರಾಜ್ ಕೀ ಜೈ ಎನ್ನುವ ಜೈಕಾರ ಮೊಳಗಿದವು. ಜಾತ್ರಾ ಮಹೋತ್ಸವ ನಿಮಿತ್ತ ವಿವಿಧ ಮನೋರಂಜನೆ ಹಾಗೂ ವಿವಿಧ ಅಂಗಡಿಗಳನ್ನು ಹಾಕಲಾಗಿತ್ತು. ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ವಿವಿಧ ಭಾಗಗಳಿಂದ ಭಕ್ತ ಸಮೂಹ ಆಗಮಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು