ಮಹಾನಗರದಲ್ಲಿ ನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ
ಈ ನಡುವೆ ಆರೇಳು ತಿಂಗಳಲ್ಲಿ ಕೊರೊನಾ ಪ್ರಮಾಣ ಕಡಿಮೆ ಆಗಿತ್ತು.
Team Udayavani, Apr 9, 2021, 6:42 PM IST
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿತ್ಯವೂ 150ರಿಂದ 200 ಪಾಸಿಟಿವ್ ಪ್ರಕರಣಗಳು ಮತ್ತು ಎರಡ್ಮೂರು ಸಾವು ಸಂಭವಿಸುತ್ತಲೇ ಇವೆ. ಆದರೂ, ಸಾರ್ವಜನಿಕರು ಎಚ್ಚೆತ್ತುಕೊಳ್ಳುತ್ತಿಲ್ಲ. ಹೀಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏ.10ರಿಂದ 10 ದಿನಗಳ ಕಾಲ ಸರ್ಕಾರ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ. ಪ್ರತಿ ದಿನ ರಾತ್ರಿ 10ರಿಂದ ಬೆಳಗಿನ ಜಾವ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ.
ದೇಶದಲ್ಲೇ ಮೊದಲು ಕೊರೊನಾದಿಂದ ಸಾವು ಸಂಭವಿಸಿದ್ದು ಕಲಬುರಗಿ ನಗರದಲ್ಲೇ. 2020ರ ಮಾ.10ರಂದು ವೃದ್ಧನ ಸಾವಿನ ಮೂಲಕ ಮಹಾಮಾರಿ ರೋಗ ಕಾಲಿಟ್ಟಿತ್ತು. ವೃದ್ಧ ಕೊರೊನಾದಿಂದ ಮೃತಪಟ್ಟಿದ್ದು ದೃಢಪಡುತ್ತಿದ್ದಂತೆ ದೇಶದಲ್ಲಿ ಮೊದಲು ಲಾಕ್ಡೌನ್ ಆಗಿದ್ದು ಸಹ ಕಲಬುರಗಿಯಲ್ಲಿಯೇ.ನಂತರ ನಿರಂತರವಾಗಿ ಜಿಲ್ಲಾದ್ಯಂತ ರೋಗದ ಹಾವಳಿ ಹೆಚ್ಚಾಗಿತ್ತು.
ಈ ನಡುವೆ ಆರೇಳು ತಿಂಗಳಲ್ಲಿ ಕೊರೊನಾ ಪ್ರಮಾಣ ಕಡಿಮೆ ಆಗಿತ್ತು. ಇದೇ ಮಾರ್ಚ್ ತಿಂಗಳ ಆರಂಭದಲ್ಲಿ ದಿನಕ್ಕೆ 20ರಿಂದ 30 ಕೊರೊನಾ ಪಾಸಿಟಿವ್ಗಳು ಪತ್ತೆಯಾಗುತ್ತಿದ್ದವು. ಆದರೆ, ಮಾರ್ಚ್ ಮಧ್ಯದಲ್ಲೇ ಏಕಾಏಕಿ ಎರಡನೇ ಅಲೆ ಬೀಸಲು ಆರಂಭಿಸಿದೆ. ಕಳೆದ 10 ದಿನಗಳಿಂದ ನಿತ್ಯ 150ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಅಲ್ಲದೇ, ಇಬ್ಬರು, ಮೂವರು ಸೋಂಕಿತರು ಬಲಿಯಾಗುತ್ತಿದ್ದಾರೆ. ಅದರಲ್ಲೂ, ಇತ್ತೀಚೆಗೆ 10 ವರ್ಷಕ್ಕೂ ಮೇಲಟ್ಟ ವೃದ್ಧರೇ ಕೊರೊನಾದಿಂದ ಮೃತಪಡುತ್ತಿದ್ದಾರೆ.
ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಿದೆ. ಆದರೂ, ಜನರು ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳುತ್ತಲೇ ಇಲ್ಲ. ನಿತ್ಯ ಅನಗತ್ಯವಾಗಿ ರಸ್ತೆಗಳಲ್ಲಿ ಗುಂಪು-ಗುಂಪಾಗಿ ಸೇರುವುದು, ಮಾಸ್ಕ್ ಧರಿಸದೇ ಓಡಾಡುವುದನ್ನು ಮಾಡುತ್ತಲೇ ಇದ್ದಾರೆ. ಹೀಗಾಗಿ ಸರ್ಕಾರ ಏ.10ರಿಂದ ಏ.20ರ ವರೆಗೆ ನೈಟ್ ಕರ್ಫ್ಯೂ ಜಾರಿಗೆ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ
ಯಳಬೇರು: ಮರವೇರಿದ ಮೊಬೈಲ್!ಮರದ ಎತ್ತರದಲ್ಲಿ ನೆಟ್ವರ್ಕ್ ಸಂಪರ್ಕ; ಅಲ್ಲಿಂದ ಹಾಟ್ಸ್ಪಾಟ್
Madikeri: ಅತ್ಯಾಚಾರಿಗೆ ಕಠಿಣ ಸಜೆ