ನಿರುದ್ಯೋಗಿಗಳಿಗೆ ತರಬೇತಿ
Team Udayavani, Dec 10, 2021, 12:24 PM IST
ಕಲಬುರಗಿ: ಯಾವುದೇ ಕ್ಷೇತ್ರದಲ್ಲಿ ವೃತ್ತಿ ನಿಪುಣತೆ ಮುಖ್ಯವಾಗಿದ್ದರಿಂದ ನಿರುದ್ಯೋಗಿಗಳಿಗೆ ವಿವಿಧ ಕೋರ್ಸ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ- ಜೀವನೋಪಾಯ ಇಲಾಖೆ ಜಿಲ್ಲಾ ನಿರ್ದೇಶಕರಾದ ನಾಗುಬಾಯಿ ದೊಡ್ಡಮನಿ ಹೇಳಿದರು.
ನಗರದ ಬಸವ ಸಿರಿ ತರಬೇತಿ ಕೇಂದ್ರದಲ್ಲಿ 2021-22ನೇ ಸಾಲಿನ ಪ್ರಧಾನ ಮಂತ್ರಿ ವಿಕಾಸ (ಪಿಎಂಕೆವಿವೈ 3.0) ಯೋಜನೆಯಡಿ ಕೌಶಲ್ಯಾಭಿ ವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಉಚಿತ ಕೋವಿಡ್ ಕ್ರಾಸ್ ಕೋರ್ಸ್ ತರಬೇತಿ ಉದ್ದೇಶಿಸಿ ಅವರು ಮಾತನಾಡಿದರು.
ಹಲವರಲ್ಲಿ ತಮ್ಮದೆ ಪ್ರತಿಭೆ ಹಾಗೂ ಕೌಶಲ್ಯತೆ ಇದ್ದೇ ಇರುತ್ತದೆ. ಅದಕ್ಕೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ದೊರೆತಲ್ಲಿ ಕೌಶಲ್ಯ ಸಮಾಜಕ್ಕೆ ಗೊತ್ತಾಗುತ್ತದೆ. ಇಲಾಖೆ ಯಡಿ ನಿರುದ್ಯೋಗಿಗಳ ಕೌಶಲ್ಯಾ ಭಿವೃದ್ಧಿಗೆ ಕೋರ್ಸುಗಳಿವೆ. ತರಬೇತಿ ಪಡೆಯುವ ಮೂಲಕ ಬದುಕು ರೂಪಿಸುವ ಕೆಲಸ ಇಲಾಖೆಯದ್ದಾಗಿದೆ. ಹೀಗಾಗಿ ಯುವಕರು ಹಾಗೂ ನಿರುದ್ಯೋಗಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಪಿಎಂಕೆವಿವೈ 3.0 ಜಿಲ್ಲಾ ಸಂಯೋಜಕ ಮೌನೇಶ ಹಾಗೂ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಗರೂರ್, ಉಪನ್ಯಾಸಕ ಡಾ| ಶರಣಗೌಡ ಪಾಟೀಲ ಮತ್ತು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ