ಕಂಟ್ರೋಲ್ ತಪ್ಪಿದ ಕೋವಿಡ್: ಫೀಲ್ಡಿಗಿಳಿದ ಖಾಕಿ
21 ಬೈಕ್, ಒಂದು ಕಾರು, ಎರಡು ಕ್ರೂಸರ್ಗಳನ್ನು ಪೊಲೀಸರು ಜಪ್ತಿಮಾಡಿಕೊಂಡರು.
Team Udayavani, May 21, 2021, 8:08 PM IST
ವಾಡಿ: ಕಂಟ್ರೋಲ್ ತಪ್ಪಿದ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಘೋಷಿಸಿದ ಮೂರು ದಿನಗಳ ಸಂಪೂರ್ಣ ಲಾಕ್ಡೌನ್ ಯಶಸ್ವಿಗೊಳಿಸಲು ಗುರುವಾರ ಪಟ್ಟಣದಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಸಾಮೂಹಿಕವಾಗಿ ಲಾಠಿ ಪ್ರದರ್ಶಿಸುವ ಮೂಲಕ ಸಿಮೆಂಟ್ ನಗರಿಯನ್ನು ಪೂರ್ತಿ ಸ್ತಬ್ಧ ಮಾಡುವಲ್ಲಿ ಸಫಲರಾದರು.
ಬೆಳ್ಳಂಬೆಳಗ್ಗೆ ಸೈರನ್ ಸದ್ದಿನೊಂದಿಗೆ ಪಿಎಸ್ಐ ವಿಜಯಕುಮಾರ ಭಾವಗಿ ನೇತೃತ್ವದಲ್ಲಿ ಕೋವಿಡ್ ಕರ್ತವ್ಯಕ್ಕೆ ಹಾಜರಾದ ಪೊಲೀಸರು, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಚೌಕ್, ಬಳಿರಾಮ ಚೌಕ್, ಶ್ರೀನಿವಾಸಗುಡಿ, ಬಸವೇಶ್ವರ ಚೌಕ್ ಸೇರಿದಂತೆ ವಿವಿಧೆಡೆ ಭದ್ರತೆಗಾಗಿ ನಿಯೋಜನೆಗೊಂಡರು.
ಹಾಲು, ಆಸ್ಪತ್ರೆ, ಮೆಡಿಕಲ್ ಸೇವೆ ಹೊರತುಪಡಿಸಿ ತರಕಾರಿ, ಕಿರಾಣಿ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಅಂಗಡಿ ಮುಗ್ಗಟ್ಟುಗಳಿಗೆ ಸಂಪೂ ರ್ಣ ಬೀಗ ಬಿದ್ದಿತ್ತು. ಕೆಲ ಖಾಸಗಿ ಕ್ಲಿನಿಕ್ ಮತ್ತು ಔಷಧ ಅಂಗಡಿಗಳು ಮುಚ್ಚಿದ್ದವು.ರೈಲು ಮೂಲಕ ಪಟ್ಟಣಕ್ಕೆ ಆಗಮಿಸಿ ವಿವಿಧ ಗ್ರಾಮಗಳಿಗೆ ಹೋಗಬೇಕಿದ್ದ ಪ್ರಯಾಣಿಕರು, ವಾಹನ ಸೌಲಭ್ಯವಿಲ್ಲದೇ ಪರದಾಡಿದರು.
ಸಿದ್ಧ ಕಾರಣಗಳನ್ನು ಒಪ್ಪಿಸಿ ಪೊಲೀಸ ರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವಾಹನ ಚಾಲಕರು ಮತ್ತು ಬೈಕ್ ಸವಾರರು ಲಾಠಿ ರುಚಿ ಉಂಡರು. 21 ಬೈಕ್, ಒಂದು ಕಾರು, ಎರಡು ಕ್ರೂಸರ್ಗಳನ್ನು ಪೊಲೀಸರು ಜಪ್ತಿಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ