ಅವೈಜ್ಞಾನಿಕ ಕಾಮಗಾರಿ; ತನಿಖೆಗೆ ಪುಣ್ಯಶೆಟ್ಟಿ ಆಗ್ರಹ
Team Udayavani, Jan 3, 2022, 10:32 AM IST
ಚಿಂಚೋಳಿ: ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿ ಕುರಿತು ರಾಜ್ಯ ಸರ್ಕಾರ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹಿಸಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಸುಧಾರಣೆ ಸುಧಾರಣೆಗಾಗಿ ಐನೋಳಿಯಿಂದ ಚೆಂಡ್ರಿಕೆರೆ ನಾಲೆ ವರೆಗೆ ರಸ್ತೆ ನಿರ್ಮಿಸಲು 2.50 ಕೋಟಿ ರೂ. ನೀಡಲಾಗಿದೆ. ಇದೇ ರಸ್ತೆಗೆ ಚಂದ್ರಂಪಳ್ಳಿ ಪ್ರವಾಸಿತಾಣದಿಂದ ಐನೋಳಿ ಗ್ರಾಮದ ವರೆಗೆ ರಸ್ತೆ ಸುಧಾರಣೆಗಾಗಿ 2.50ಕೋಟಿ ರೂ.ಗಳನ್ನು ಕೆಕೆಆರ್ಡಿಬಿ ವತಿಯಿಂದ ಮಂಜೂರಿ ಮಾಡಲಾಗಿದೆ. ಆದರೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸದೇ ಕಚೇರಿಯಲ್ಲಿ ಕುಳಿತು ಅಂದಾಜುಪಟ್ಟಿ ಸಿದ್ಧಪಡಿಸಿರುವುದು ಅವೈಜ್ಞಾನಿಕವಾಗಿದೆ ಎಂದರು.
ಕುಸರಂಪಳ್ಳಿ ಗ್ರಾಮದಿಂದ ಕೊಳ್ಳುರ ಗ್ರಾಮದ ವರೆಗೆ 5ಕೋಟಿ ರೂ.ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಆದರೆ ಕುಸರಂಪಳ್ಳಿ ಮಾರ್ಗದ ಅರಣ್ಯಪ್ರದೇಶದಲ್ಲಿ 2 ಕಿ.ಮೀ ರಸ್ತೆ ಸುಧಾರಣೆ ಡಾಂಬರೀಕರಣ ಯಾಕೆ ಮಾಡಿಲ್ಲ ಎಂದರು.
ತಾಲೂಕಿನ ಗಾರಂಪಳ್ಳಿ ಗ್ರಾಮದಿಂದ ಸಾಲೇಬೀರನಳ್ಳಿ ರಸ್ತೆ ಅಭಿವೃದ್ಧಿಗೆ 2020-21ನೇ ಸಾಲಿನಲ್ಲಿ ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ ಅಡಿಯಲ್ಲಿ 1.48 ಕೋಟಿ ರೂ.ಗಳಲ್ಲಿ ರಸ್ತೆ ಕಾಮಗಾರಿ ನಡೆಸಲಾಗಿದೆ. ಆದರೆ ಇದೇ ಸಾಲೇಬೀರನಳ್ಳಿ-ಎಂಪಳ್ಳಿ-ಕೊಳ್ಳುರ ಗ್ರಾಮದ ವರೆಗೆ 6 ಕಿ.ಮೀ ರಸ್ತೆಗೆ 4.50 ಕೋಟಿ ರೂ.ಅನುದಾನ ಕೆಕೆಆರ್ಡಿಬಿ ಯೋಜನೆಗೆ ನೀಡಲಾಗಿದೆ. ತಾಲೂಕಿನಲ್ಲಿ ರಸ್ತೆ ಅಭಿವೃದ್ಧಿ ನೆಪದಲ್ಲಿ ಹಣ ಲೂಟಿ ವ್ಯವಸ್ಥಿತವಾಗಿ ನಡೆಯುತ್ತಿದೆ. ಆದ್ದರಿಂದ ಈ ಕುರಿತು ತನಿಖೆ ನಡೆಸಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.
ಐನೋಳಿ ಗ್ರಾಪಂ ಅಧ್ಯಕ್ಷ ಅಶೋಕ ಭಜಂತ್ರಿ, ಶಿವಕುಮಾರ ಮೂಲಗೆ, ಶರಣು ಪಪ್ಪಾ,ಅಲ್ಲಾವುದ್ದೀನ್ ಅನಸಾಗಿ, ಲೋಕೇಶ ಪತ್ತೆಪೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ