ಗೋದಾಮಿನಲ್ಲಿ ಕೊಳೆಯುತ್ತಿದೆ ಮಾವು-ಬಾಳೆಹಣ್ಣು!


Team Udayavani, Apr 26, 2020, 12:39 PM IST

26-April-08

ವಾಡಿ: ಪಟ್ಟಣದ ಹಣ್ಣು ವ್ಯಾಪಾರಿಯೊಬ್ಬರ ಗೋದಾಮಿನಲ್ಲಿ ಸಂಗ್ರಹಿಸಿರುವ ಮಾವು.

ವಾಡಿ: ಲಾಕ್‌ಡೌನ್‌ ಘೋಷಣೆಯಿಂದ ತೀವ್ರ ಅರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರು ಖರೀದಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ. ಮಾರುಕಟ್ಟೆಗೆ ಬೀಗ ಬಿದ್ದಿದ್ದು, ರಾಶಿ ರಾಶಿ ಹಣ್ಣುಗಳು ನಗರದ ಗೋದಾಮಿನಲ್ಲೇ ಕೊಳೆಯುತ್ತಿವೆ.

ಉತ್ತಮ ಆದಾಯ ನಿರೀಕ್ಷಿಸಿ ಮಾವು, ಕಲ್ಲಂಗಡಿ, ದ್ರಾಕ್ಷಿ, ಬಾಳೆಹಣ್ಣು ಹೀಗೆ ವಿವಿಧ ರೀತಿಯ ಹಣ್ಣುಗಳನ್ನು ಬೆಳೆದಿರುವ ಚಿತ್ತಾಪುರ ತಾಲೂಕಿನ ರೈತರ ಪಾಲಿಗೆ ಈ ವರ್ಷ ಮಹಾಮಾರಿ ಕೊರೊನಾ ಭಾರಿ ಹೊಡೆತ ನೀಡಿದೆ. ಕಳೆದ ಒಂದು ತಿಂಗಳಿಂದ ಜಾರಿಯಲ್ಲಿರುವ 144 ಸೆಕ್ಷನ್‌, ಲಾಕ್‌ಡೌನ್‌ ಮತ್ತು ಸೀಲ್‌ ಡೌನ್‌ ಹೊಡೆತಕ್ಕೆ ಸಿಕ್ಕು ಗೃಹ ಬಂಧನಕ್ಕೊಳಗಾಗಿರುವ ಜನರು ಮಾರುಕಟ್ಟೆಗೆ ಬರದಂತಾಗಿದ್ದು, ಹಣ್ಣುಗಳು ಜನರ ಮನೆ ಬಾಗಿಲಿಗೆ ತಲುಪಿಸಲು ರೈತರು ಪಡಬಾರದ ಕಷ್ಟ ಪಡುತ್ತಿದ್ದಾರೆ.

ಬೆಲೆ ಕುಸಿತದ ಮಧ್ಯೆ ಬೆಳೆದ ತೋಟದ ಹಣ್ಣುಗಳನ್ನು ಮಾರುಕಟ್ಟೆಗೆ ಕಳುಹಿಸುತ್ತಿರುವ ರೈತರು, ಬಿರುಬಿಸಿಲಿನಲ್ಲಿ ಕುಳಿತುಕೊಳ್ಳುವ ಗ್ರಾಹಕರಿಗಾಗಿ ಚಾತಕ ಪಕ್ಷಿಯಂತೆ ಕಾಯಬೇಕಾದ ದುಸ್ಥಿತಿ ಎದುರಾಗಿದೆ. ಬಹುತೇಕ ತೋಟಗಳಲ್ಲಿಯೇ ಹಣ್ಣುಗಳು ಮಣ್ಣು ಪಾಲಾಗುತ್ತಿದ್ದರೆ, ಇತ್ತ ನಗರದ ಗೋದಾಮುಗಳಲ್ಲಿ ಸಂಗ್ರಹಿಸಲಾಗುತ್ತಿರುವ ರುಚಿ ಮಾವು, ಬಾಳೆ, ದ್ರಾಕ್ಷಿ ಕೊಳೆತು ಹಾಳಾಗುತ್ತಿವೆ. ಇದರಿಂದ ರೈತರು ಮತ್ತು ವ್ಯಾಪಾರಿಗಳು ಭಾರಿ ನಷ್ಟ ಅನುಭವಿಸುತ್ತಿದ್ದಾರೆ.

ಕೊಳೆತ ಮಾವಿನ ಹಣ್ಣು ಹಾಗೂ ಬಾಳೆಹಣ್ಣುಗಳನ್ನು ಸಾಕು ಪ್ರಾಣಿಗಳಿಗೆ ಹಾಕುವಂತಾಗಿದೆ. ಬಹುತೇಕ ಫಲ ತಿಪ್ಪೆಗುಂಡಿ ಸೇರುತ್ತಿರುವುದು ವಿಷಾದದ ವಿಚಾರ. ದಿನಗೂಲಿಗಳೇ ಹೆಚ್ಚಿರುವ ಕಾರ್ಮಿಕ ನಗರಿ ವಾಡಿ ಪಟ್ಟಣದಲ್ಲಿ ಕೇವಲ ಹಣ್ಣುಗಳ ವ್ಯಾಪಾರಿಗಳೇ ಹೆಚ್ಚಾಗಿ ಕಂಡು ಬರುತ್ತಿದ್ದು, ವ್ಯಾಪಾರ ಮಾತ್ರ ಶೂನ್ಯ ಸ್ಥಿತಿಯಲ್ಲಿದೆ. ರೈತ ಕೊರೊನಾ ಹೊಡೆತಕ್ಕೆ ತತ್ತರಿಸಿದ್ದಾನೆ.

ರೈತರು ದೊಡ್ಡ ಪ್ರಮಾಣದಲ್ಲಿ ಹಣ್ಣು ಬೆಳೆದಿದ್ದಾರೆ. ಮಾರುಕಟ್ಟೆಗಳಲ್ಲಿ ಖರೀದಿಸುವವರ ಕೊರತೆ ಎದುರಾಗಿದೆ. ಹೀಗಾಗಿ ವ್ಯಾಪಾರವಾಗದೆ ಹಣ್ಣುಗಳು ಗೋದಾಮಿನಲ್ಲಿ ಬಿದ್ದು ಕೊಳೆಯುತ್ತಿವೆ. ಕೊರೊನಾ ನಿಯಂತ್ರಣದ ಹೋರಾಟದಲ್ಲಿ ಎಲ್ಲೆಡೆ ಮಾರುಕಟ್ಟೆಗಳು ಲಾಕ್‌ ಆಗಿವೆ. ಪರಿಣಾಮ ವ್ಯವಹಾರದಲ್ಲಿ ಕುಸಿತ ಕಂಡಿದೆ. ಖರೀದಿಸಿ ತರಲಾದ ಹಣ್ಣುಗಳು ಬಜಾರಿನಲ್ಲಿ ಬಿಕರಿಯಾಗುತ್ತಿಲ್ಲ. ಇದರಿಂದ ವ್ಯಾಪಾರಿಗಳು ನಷ್ಟದ ಹೊಡೆತಕ್ಕೆ ಸಿಲುಕಿದ್ದಾರೆ.
ಮಹ್ಮದ್‌ ಗೌಸ್‌,
ಹಣ್ಣು ವ್ಯಾಪಾರಿ.

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.