ಅನಧಿಕೃತ ತಂಬಾಕು ಮಾರಾಟ ನಿಯಂತ್ರಿಸಿ: ಡಿಸಿ

ತಹಶೀಲ್ದಾರ್‌ರು ತ್ತೈಮಾಸಿಕ ಸಭೆ ನಡೆಸಿಕೋಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

Team Udayavani, May 30, 2020, 12:03 PM IST

30-May-05

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ತೈಮಾಸಿಕ ಸಮನ್ವಯ ಸಮಿತಿ ಸಭೆ ಜರುಗಿತು

ವಿಜಯಪುರ: ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾಗಿರುವ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ತೈಮಾಸಿಕ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಜಿಲ್ಲಾ ಹಾಗೂ ತಾಲೂಕು ತನಿಖಾ ತಂಡ ನಿರಂತರ ದಾಳಿ ಕೈಗೊಳ್ಳಬೇಕು. ಎಲ್ಲ ತಾಲೂಕುಗಳಲ್ಲಿ ತನಿಖಾ ದಳದ ಸದಸ್ಯರೊಂದಿಗೆ ಆಯಾ ತಾಲೂಕು ತಹಶೀಲ್ದಾರರು ನಾಲ್ಕು ತ್ತೈಮಾಸಿಕ ಸಭೆ ನಡೆಸಿ ಪ್ರತಿ ತಿಂಗಳು 2-3 ದಾಳಿ ನಡೆಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ತಂಬಾಕು ಮಾರಾಟ ಕೇಂದ್ರಗಳ ಮೇಲೆ ತನಿಖಾ ತಂಡಗಳಿಂದ ಆಗಾಗ್ಗೆ ದಾಳಿಯನ್ನು ನಡೆಸಬೇಕು. ಸರ್ಕಾರಿ ಕಚೇರಿಗಳಾದ ಮಾಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯತಿಗಳು ಉದ್ಯಮಿಗಳಿಗೆ ಪರವಾನಗಿ ನೀಡುವಾಗ ಎಲ್ಲ ಪಾನ್‌ಶಾಪ್‌ಗ್ಳು ಸೆಕ್ಷನ್‌-4 ಮತ್ತು ಸೆಕ್ಷನ್‌ 6(ಎ) ಸಂಬಂ ಧಿಸಿದ ನಾಮಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಹಾಗೂ ಎಲ್ಲ ಅಂಗಡಿ, ಹೋಟೆಲ್‌, ರೆಸ್ಟೋರೆಂಟ್‌, ಬೇಕರಿ ಹಾಗೂ ಲಾಡ್ಜ್ಗಳಲ್ಲಿ ಸೆಕ್ಷನ್‌-4 ಗೆ ಸಂಬಂಧಿಸಿದ ನಾಮಫಲಕ ಅಳವಡಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಯಾಗಿ ಪರಿವರ್ತಿಸಲು ಅಗತ್ಯ ಇರುವ ಎಲ್ಲ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳು ಸೆಕ್ಷನ್‌-4 ಮತ್ತು ಸೆಕ್ಷನ್‌-6(ಬಿ) ಗೆ ಸಂಬಂಧಿಸಿದ ನಾಮಫಲಕಗಳನ್ನು ಅಳವಡಿಸಿ ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದರು.

ಸಿಂದಗಿ ತಾಲೂಕನ್ನು ಕೋಟ್ಪಾ -2003 ರ ಕಾಯ್ದೆಯ ಉನ್ನತ ಅನುಷ್ಠಾನ ತಾಲೂಕನ್ನಾಗಿ ಘೋಷಿಸಲು ಆಯ್ಕೆ ಮಾಡಲಾಗಿದೆ. ಸಿಂದಗಿ ತಾಲೂಕಿನಲ್ಲಿ ಕೊಟ್ಪಾ ನಿಯಮಗಳು ಪರಿಣಾಮಕಾರಿಯಾಗಿ ಅನುಷ್ಠಾನ ಕೈಗೊಳ್ಳಬೇಕು. ಕೋಟಾ³ 2003ರ ಕಾಯ್ದೆಯ ಸೆಕ್ಷನ್‌-5 ಮತ್ತು 7 ರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವುದು ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷ ಜಾಹಿರಾತು ಫಲಕಗಳನ್ನು ತೆರುವುಗೊಳಿಸಬೇಕು. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ಪ್ರದೇಶಗಳಾಗಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಬೇಕು ಎಂದರು.

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಮಾತನಾಡಿ, ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನವೆಂದು ಆಚರಿಸಲಾಗುತಿದೆ. 1987 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಘೋಷಣೆ ಮಾಡಿದ್ದರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದೆ. ಪ್ರಸಕ್ತ ವರ್ಷ ಯುವ ಪೀಳಿಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್‌ನ ಬಳಕೆಯಿಂದ ರಕ್ಷಣೆ ಮಾಡಬೇಕಿದೆ ಎಂದರು.

ಈ ಧ್ಯೇಯ ವಾಕ್ಯದೊಂದಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಜೀವಕಾರಕ ವಸ್ತುವಿನ ಕುರಿತು ಜನರಲ್ಲಿ ಅರಿವು ಮೂಡಿಸಬೇಕಿದೆ. ಇದಕ್ಕಾಗಿ ಜಿಲ್ಲಾದ್ಯಂತ ಜನರಲ್ಲಿ ಅರಿವು ಮೂಡಿಸಿ ಜನರು ತಂಬಾಕು ಉತ್ಪನ್ನಗಳಿಂದ ದೂರ ಉಳಿಯುವಂತೆ ಪ್ರರೇಪಿಸಲಾಗುತ್ತಿದೆ ಎಂದರು. ಎಸ್ಪಿ ಅನುಪಮ ಅಗರವಾಲ್‌, ಜಿಪಂ ಸಿಇಒ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶಟ್ಟಿ, ಡಿಎಚ್‌ಒ ಮಹೇಂದ್ರ ಕಾಪ್ಸೆ, ಡಾ| ಶರಣಪ್ಪ ಕಟ್ಟಿ, ಡಾ| ಸಂಪತಕುಮಾರ ಗುಣಾರೆ, ಡಾ| ಕವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.