ಕೊರಳಿ ವೀರದ್ರೇಶ್ವರ ಜಾತ್ರೆ-ಅಗ್ನಿ ಹಾಯ್ದ ಭಕ್ತರು


Team Udayavani, Dec 11, 2021, 10:21 AM IST

2kalaburugi

ಆಳಂದ: ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪುರವಂತರ ಸಾಂಪ್ರದಾಯಿಕ ಕುಣಿತ, ವಾದ್ಯ, ವೈಭವಗಳೊಂದಿಗೆ ಪ್ರಮುಖ ರಸ್ತೆಗಳ ಮೂಲಕ ಪಲ್ಲಕ್ಕಿ ಉತ್ಸವ, ಸಾಗಿದ ಬಳಿಕ ದೇವಸ್ಥಾನ ಹತ್ತಿರ ಭಕ್ತಾದಿಗಳು ಪ್ರಜ್ವಲಿಸಿದ ಅಗ್ನಿ ಪೂಜಿಸಿ ಹಾಯ್ದರು.

ವಿಶೇಷವಾಗಿ ಗ್ರಾಮದಿಂದ ಮದುವೆಯಾಗಿ ಪರಊರಿಗೆ ಹೋದ ಮಹಿಳೆಯರು ಗ್ರಾಮದ ಜಾತ್ರೆಯಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಂಡು ದೇವರ ದರ್ಶನ ಪಡೆದು ಅಗ್ನಿಯನ್ನು ಹಾಯುವ ವಿಶೇಷ ಸಂಪ್ರದಾಯ ಈ ಬಾರಿಯೂ ನಡೆಯಿತು.

ನೆರೆಯ ಭೂಸನೂರ, ಸಂಗೋಳಗಿ, ಧುತ್ತರಗಾಂವ, ಅನೇಕ ಗ್ರಾಮಗಳ ಗ್ರಾಮಸ್ಥರು ಸೇರಿ ಗ್ರಾಮಸ್ಥರೆಯಲ್ಲರು ಜಾತ್ರೆಯಲ್ಲಿ ಪಾಲ್ಗೊಂಡು ವೀರಭದ್ರೇಶ್ವರರ ದರ್ಶನ ಪಡೆದರು. ಆರಂಭದಲ್ಲಿ ವೀರಭದ್ರೇಶ್ವರ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ 11 ಜನ ಪುರವಂತರ ಕುಣಿತ ಹಾಗೂ ಗ್ರಾಮದ ಯುವ ಪುರವಂತನು ಉದ್ದನೆ ಶಸ್ತ್ರವನ್ನು ಚುಚಿಕೊಂಡು ಅಗ್ನಿ ಹಾಯುವ ಮೂಲಕ ದೇವರ ಮೂರ್ತಿಯ ವರೆಗೆ ಶಸ್ತ್ರವನ್ನು ಎಳೆಯುತ್ತ ಬಂದು ಗಮನ ಸೆಳೆದರು.

ಧುತ್ತರಗಾಂವದ ಸೂರ್ಯಕಾಂತ ಶಾಸ್ತ್ರಿಗಳು 11 ದಿನಗಳ ಸಾಗಿಬಂದ ವೀರಭದ್ರೇಶ್ವರ ಪುರಾಣವನ್ನು ಮಹಾ ಮಂಗಲಗೊಳಿಸಿದರು. ಕಲಾವಿದ ಬಸವರಾಜ ಆಳಂದ ತಬಲಾ ಸಾತ್‌ ನೀಡಿದರು.

ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ಬಿಜೆಪಿ ಮಂಡಲ ಅಧ್ಯಕ್ಷ ಆನಂದರಾವ್‌ ಪಾಟೀಲ, ಗ್ರಾಪಂ ಅಧ್ಯಕ್ಷ ಸುಭಾಷ ರಾಠೊಡ, ಜಯಕರ್ನಾಟಕ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ದಯಾನಂದ ಚೌಲ್‌, ಮಹೇಶ ಉಡಗಿ, ಸಿದ್ಧಣ್ಣಾ ಬರಮದಿ, ಚಂದ್ರಯ್ನಾ ಸ್ವಾಮಿ, ಎಲ್‌.ಎಸ್‌.ಬೀದಿ, ಚಂದ್ರಕಾಂತ ಮಂಠಾಳೆ, ಡಾ| ಶಿವಶರಣಪ್ಪ ಮದಗುಣಕಿ, ರಮೇಶ ಉಡಗಿ, ಚಂದ್ರಶೇಖರ ಪಾಟೀಲ, ಷಣ್ಮಖಯ್ಯ ಸ್ವಾಮಿ, ಮಡಿಯವಾಳ ಸ್ವಾಮಿ, ಸಂತೋಷ ಹಾಗೂ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.