ನಾಲವಾರ-ವಾಡಿ ವಲಯದಲ್ಲಿ ಹತ್ತಿ ಬಿತ್ತನೆ

ತೊಗರಿಯೂ ಈ ಭಾಗದ ಪ್ರಮುಖ ಬೆಳೆ ನಾಲವಾರ ವಲಯದಲ್ಲಿ 66 ಮಿ.ಮೀ ಮಳೆ

Team Udayavani, Jul 2, 2020, 10:51 AM IST

02-July-02

ವಾಡಿ: ನಾಲವಾರ ವಲಯದ ಕೊಂಚೂರು ಗ್ರಾಮದ ಜಮೀನೊಂದರಲ್ಲಿ ರೈತ ಮಹಿಳೆಯರು ಹತ್ತಿ ಬೀಜವನ್ನು ಭೂಮಿಗೆ ಹಾಕುತ್ತಿರುವುದು.

ವಾಡಿ: ಮುಂಗಾರು ಆರ್ಭಟಿಸಿದ ನಂತರ ನಾಲವಾರ ಹಾಗೂ ವಾಡಿ ವಲಯದಲ್ಲಿ ಕೃಷಿ ಚಟುವಟಿಕೆ ಗರಿಗೆದರಿದ್ದು, ರೈತರು ಬಿತ್ತನೆ ಕಾಯಕದಲ್ಲಿ ತೊಡಗಿದ್ದಾರೆ.

ಸನ್ನತಿ ಭೀಮಾ ತೀರದ ಕಪ್ಪು ಭೂಮಿಯ ಸಾಲುಗಳಲ್ಲಿ ಈ ವರ್ಷವೂ ಹತ್ತಿ ಬೀಜವನ್ನೇ ಹೆಚ್ಚಿನ ಪ್ರಮಾಣದಲ್ಲಿ ಉತ್ತುತ್ತಿರುವುದು ಕಂಡುಬಂದಿದೆ. ಉಳಿದಂತೆ ತೊಗರಿ ಈ ಭಾಗದ ಪ್ರಮುಖ ಬೆಳೆಯಾಗಿದೆ. ನಾಲವಾರ ವಲಯದಲ್ಲಿ ಈಗಾಗಲೇ 66 ಎಂ.ಎಂ ಮಳೆಯಾಗಿದೆ. ಸನ್ನತಿ, ರಾಂಪುರಹಳ್ಳಿ, ಮಾರಡಗಿ, ಅಳ್ಳೊಳ್ಳಿ, ಭೀಮನಳ್ಳಿ, ಕೊಲ್ಲೂರು, ಉಳಂಡಗೇರಾ, ಕನಗನಹಳ್ಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ಭೀಮಾ ನದಿ ಬ್ಯಾರೇಜ್‌ ವ್ಯಾಪ್ತಿಯ ಸನ್ನತಿ ಭೂಮಿಯಂತೂ ಹಸಿರಿನಿಂದ ಆವರಿಸಿ ಮಲೆನಾಡಿನಂತೆ ಕಂಗೊಳಿಸುತ್ತಿವೆ. ಕಳೆದ ಮೂರ್‍ನಾಲ್ಕು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ಈಗಾಗಲೇ ಬಿತ್ತಿದ ಬೆಳೆಗೆ ಮತ್ತು ಬಿತ್ತಲಿರುವ ಭೂಮಿಗೂ ಹೆಚ್ಚು ಅನುಕೂಲಕರವಾಗಿದೆ. ಕೋವಿಡ್ ಆತಂಕದಿಂದಾಗಿ ರೈತರ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಿಲ್ಲಾಧಿಕಾರಿಗಳ ಆದೇಶದಂತೆ ನಾಲವಾರ ರೈತ ಸಂಪರ್ಕ ಕೇಂದ್ರ ಸಹಿತ ಕೊಲ್ಲೂರು, ಅಳ್ಳೊಳ್ಳಿ ಮತ್ತು ಭೀಮನಳ್ಳಿ ಗ್ರಾಮಗಳಲ್ಲಿ ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಿರುವುದು ಆಯಾಭಾಗದ ರೈತರಿಗೆ ತುಸು ಅನುಕೂಲವಾಗಿದೆ ಎನ್ನಬಹುದು.

ಸನ್ನತಿ ಭೀಮಾ ನದಿಯಲ್ಲಿ ಬ್ಯಾರೇಜ್‌ ಹಿನ್ನೀರು ಅಪಾರ ಪ್ರಮಾಣದಲ್ಲಿ ಸಂಗ್ರಹವಿದ್ದು, ಸನ್ನತಿ ಸೇರಿದಂತೆ ಬನ್ನೇಟಿ, ಕನಗನಹಳ್ಳಿ, ಕೊಲ್ಲೂರು, ಉಳಂಡಗೇರಾ, ತರ್ಕಸ್‌ಪೇಟೆ ಗ್ರಾಮಗಳಲ್ಲಿ ಮಲೆನಾಡು ರೂಪದ ನೀರಾವರಿ ಕೃಷಿ ಭೂಮಿಗಳಿದ್ದು, ಆ ಭಾಗದಲ್ಲಿ ಭತ್ತ ನಾಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆದರೆ ತೊಗರಿ ಮತ್ತು ಹತ್ತಿ ಬಿತ್ತನೆಯಲ್ಲಿ ತೊಡಗಿರುವ ಒಣ ಭೂಮಿ ರೈತರು ಮೋಡಗಳನ್ನೆ ನೆಚ್ಚಿ ಬೇಸಾಯಕ್ಕಿಳಿದಿದ್ದಾರೆ. 14 ಪಂಚಾಯತಿ ವ್ಯಾಪ್ತಿಯ ರೈತರ ಮಧ್ಯೆ ಕೇವಲ ಮೂವರು ಸಹಾಯಕ ಕೃಷಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಮೂರು ಸಹಾಯಕ ಕೃಷಿ ಅಧಿಕಾರಿಗಳ ಕೊರತೆ ನಾಲವಾರ ರೈತ ಸಂಪರ್ಕ ಕೇಂದ್ರವನ್ನು ಕಾಡುತ್ತಿದೆ.

ನಾಲವಾರ ವಲಯದಲ್ಲಿ ಇದುವರೆಗೂ ಟಿಎಸ್‌-3ಆರ್‌ ತೊಗರಿ ಬೀಜಗಳನ್ನು ಹೆಚ್ಚು ಬಳಕೆ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರೈತರಿಗೆ ಜಿಆರ್‌ಜಿ-811 ತೊಗರಿ ಬೀಜಗಳ ವಿತರಣೆ ಮಾಡಲಾಗಿದೆ. ಈ ಹೊಸ ಬೀಜ ತಳಿ ಕುರಿತು ರೈತರಲ್ಲಿ ಭರವಸೆ ಮೂಡಿಸುವುದರ ಜತೆಗೆ ಜಾಗೃತಿ ಮೂಡಿಸಲಾಗುತ್ತಿದೆ. ಒಟ್ಟು 80 ಕ್ವಿಂಟಲ್‌ ತೊಗರಿ, 60 ಕ್ವಿಂಟಲ್‌ ಹೆಸರು, 64 ಕ್ವಿಂಟಲ್‌ ಭತ್ತ ಬೀಜ ವಿತರಣೆ ಮಾಡಲಾಗಿದೆ. ನಾಲವಾರ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಗೆ ಬರುವ ಒಟ್ಟು 14 ಗ್ರಾ.ಪಂಗಳ ಆಧೀನದ ಒಟ್ಟು 25000 ಹೆಕ್ಟೇರ್‌ ಕೃಷಿ ಭೂಮಿಗೆ ಈಗಾಗಲೇ ಬೀಜಗಳ ವಿತರಣೆಯಾಗಿದ್ದು, ಬಿತ್ತನೆ ಕಾರ್ಯ ಶುರುವಾಗಿದೆ.
ರಮೇಶ ಕೆಲ್ಲೂರ,
ಸಹಾಯಕ ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ, ನಾಲವಾರ

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.