Crime: ವಾಡಿ: ಪ್ರಿಯಾಂಕ್ ಪ್ರತಿಸ್ಪರ್ಧಿ ಮಣಿಕಂಠ ಮೇಲೆ ಹಲ್ಲೆ
Team Udayavani, Nov 19, 2023, 9:17 AM IST
ವಾಡಿ (ಚಿತ್ತಾಪುರ): ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಮೀಸಲು ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಮಣಿಕಂಠ ರಾಠೋಡ್ ಮೇಲೆ ನ.18ರ ಶನಿವಾರ ತಡರಾತ್ರಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಶಹಾಬಾದ ತಾಲೂಕಿನ ಕಾಗಿಣಾ ಸೇತುವೆ ಬಳಿ ನಡೆದಿದೆ.
ಮಾಲಗತ್ತಿ ಸಮೀಪದ ತಮ್ಮ ತೋಟದ ಮನೆಯಿಂದ ರಾತ್ರಿ 1 ಗಂಟೆಗೆ ಕಲಬುರಗಿ ಮನೆಯತ್ತ ಹೊರಟಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಕಾರನ್ನು ದುಷ್ಕರ್ಮಿಗಳು ಸೇತುವೆ ಹತ್ತಿರ ತಡೆದು ಮದ್ಯದ ಬಾಟಲಿಗಳಿಂದ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ತಲೆಗೆ ಮತ್ತು ದೇಹಕ್ಕೆ ಭಾರಿ ಪ್ರಮಾಣದಲ್ಲಿ ಪೆಟ್ಟಾಗಿದೆ. ತಲೆಯಿಂದ ರಕ್ತ ಸುರಿದು ಮಣಿಕಂಠ ನೆಲಕ್ಕೆ ಬಿದ್ದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.
ಜತೆಗಿದ್ದವರು ತಕ್ಷಣ ಅವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮಣಿಕಂಟನ ಮೇಲೆ ಮಧ್ಯರಾತ್ರಿ ಹಲ್ಲೆಗೆ ಹೊಂಚು ಹಾಕಿದವರು ಯಾರು ಎಂಬುದು ಹಲ್ಲೆಗೊಳಗಾದ ಮಣಿಕಂಠ ರಾಠೋಡ ಹೇಳಬೆಕು ಅಥವಾ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ