ವಾಡಿ ಪುರಸಭೆ: ತಿಂಗಳಲ್ಲಿ 2.46 ಲ ರೂ. ಸಂಗ್ರಹ


Team Udayavani, Jan 21, 2022, 11:34 AM IST

7collection

ವಾಡಿ: ಪಟ್ಟಣದಲ್ಲಿ ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಅಂಗಡಿಗಳ ಲೈಸೆನ್ಸ್‌ ರಿನಿವಲ್‌ ಅಭಿಯಾನಕ್ಕೆ ವ್ಯಾಪಾರಿಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಂಗಡಿ ಬಾಗಿಲಿಗೆ ಬಂದು ಪರವಾನಗಿ ನೀಡುತ್ತಿರುವ ಪುರಸಭೆ ಅಧಿಕಾರಿಗಳ ಕಾರ್ಯಕ್ಕೆ ವರ್ತಕರು ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಗಡಿ ಪರವಾನಗಿ ಮರು ನೋಂದಣಿ ಮಾಡಿಕೊಡುವಂತೆ ಪುರಸಭೆ ಕಚೇರಿಗೆ ಅಲೆದರೂ ನೋಂದಣಿಯಾಗದೆ ಬೇಸರಗೊಳ್ಳುತ್ತಿದ್ದ ವ್ಯಾಪಾರಿಗಳು, ಅಧಿಕಾರಿಗಳು ತಾವಿದ್ದಲ್ಲಿಗೆ ಬಂದು ಶುಲ್ಕ ಪಡೆದು, ರಸೀದಿ ನೀಡುತ್ತಿದ್ದಾರೆ. ಹೀಗಾಗಿ ಅಲೆದಾಟ ತಪ್ಪಿದೆ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಪಟ್ಟಣದ ಮಾರುಕಟ್ಟೆಯಲ್ಲಿ ನಡೆಯುತ್ತಿದ್ದ ಲೈಸೆನ್ಸ್‌ ಅಭಿಯಾನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪುರಸಭೆ ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕಿ ಲತಾಮಣಿ, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ನಗರದ ಯಾವುದೇ ಅಂಗಡಿಗಳ ಪರವಾನಗಿ ಮರು ನೋಂದಣಿ ನಡೆದಿರಲಿಲ್ಲ. ಈಗ ಸರ್ಕಾರದ ಆದೇಶದಂತೆ ಲೈಸೆನ್ಸ್‌ ಅಭಿಯಾನ ಆರಂಭಿಸಿದ್ದೇವೆ. ಹಳೆಯ ಪಟ್ಟಿಯಂತೆ ನಗರದಲ್ಲಿ ಒಟ್ಟು 386 ಅಂಗಡಿಗಳಿವೆ. ಮುಂದಿನ ಸಲ ಮತ್ತೊಮ್ಮೆ ಸರ್ವೇ ಮಾಡುವ ಮೂಲಕ ಹೊಸ ಅಂಗಡಿಗಳನ್ನು ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪ್ರತಿಯೊಬ್ಬ ವ್ಯಾಪಾರಿಯೂ ಅಂಗಡಿಯ ಪರವಾನಗಿ ಹೊಂದುವುದು ಕಡ್ಡಾಯವಾಗಿದ್ದು, ಅದಕ್ಕಾಗಿ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವ್ಯಾಪಾರಿಗಳು ಪುರಸಭೆ ಕಚೇರಿಗೆ ಬಂದು ತೊಂದರೆ ಅನುಭವಿಸುವುದು ಬೇಡ ಎಂಬ ಕಾರಣಕ್ಕೆ ನಾವೇ ವ್ಯಾಪಾರಿಗಳಿರುವ ಸ್ಥಳಕ್ಕೆ ತೆರಳಿ ಅಂಗಡಿ ಪರವಾನಗಿ ಮರು ನೋಂದಣಿ ಮಾಡುವ ಕಾರ್ಯ ಮಾಡುತ್ತಿದ್ದೇವೆ. ಸದ್ಯ ಬಹುತೇಕ ಎಲ್ಲ ಅಂಗಡಿಗಳ ವರ್ತಕರು ಇದಕ್ಕೆ ಸಹಕರಿಸಿದ್ದರಿಂದ ಒಟ್ಟು 2.46 ಲಕ್ಷ ರೂ. ಶುಲ್ಕ ವಸೂಲಿಯಾಗಿದ್ದು, ಪುರಸಭೆ ಖಜಾನೆಗೆ ಜಮೆ ಮಾಡಿದ್ದೇವೆ. ಇನ್ನೂ ಕೆಲ ಅಂಗಡಿಗಳು ಬಾಕಿ ಉಳಿದಿವೆ. ಈ ವರ್ಷ ಪರವಾನಗಿ ಶುಲ್ಕ 1250ರೂ. ಇದೆ. ಮುಂದಿನ ಪರಿಷ್ಕೃತ ದರದಲ್ಲಿ ತುಸು ಏರಿಕೆಯಾಗಲಿದೆ. ಆದ್ದರಿಂದ ವ್ಯಾಪಾರಿಗಳು ಕಡ್ಡಾಯವಾಗಿ ಲೈಸೆನ್ಸ್‌ ನೋಂದಣಿಗೆ ಮಹತ್ವ ನೀಡಬೇಕು ಎಂದು ಮನವಿ ಮಾಡಿದರು.

ತೆರಿಗೆ ಪಾವತಿ ಎಂಬುದು ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಗೆ ಬಲವಿದ್ದಂತೆ. ಸಾರ್ವಜನಿಕರು ಪಾವತಿಸುವ ವಿವಿಧ ತೆರಿಗೆ ಶುಲ್ಕದಿಂದಲೇ ನಮ್ಮೂರ ಸ್ವತ್ಛತೆಗೆ ಬಳಕೆಯಾಗುತ್ತದೆ. ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಇದು ಸಹಕಾರಿಯಾಗುತ್ತದೆ. ಅಂಗಡಿಗಳ ಮಾಲೀಕರು ಪ್ರತಿ ವರ್ಷವೂ ಸರಿಯಾದ ಸಮಯಕ್ಕೆ ಲೈಸೆನ್ಸ್‌ ಮರು ನೋಂದಣಿ ಮಾಡಿಕೊಳ್ಳಬೇಕು. ಬೇಜವಾಬ್ದಾರಿ ವಹಿಸಿದರೆ ಅಂತಹವರ ಅಂಗಡಿಗಳ ವಿದ್ಯುತ್‌ ಸಂಪರ್ಕವೇ ಕಡಿತಗೊಳಿಸಬೇಕಾಗುತ್ತದೆ. ಅಂತಹ ಕೆಟ್ಟ ನಡೆಗೆ ಅವಕಾಶ ನೀಡದೇ ವ್ಯಾಪಾರದ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

ಪುರಸಭೆ ಕಿರಿಯ ಅರೋಗ್ಯ ನೈರ್ಮಲ್ಯ ನಿರೀಕ್ಷಕ ಬಸವರಾಜ ಪೂಜಾರಿ, ಸಿಬ್ಬಂದಿಗಳಾದ ನಾಗೇಶ ಎಲ್‌., ಶಿವುಕಾಂತಮ್ಮ, ಪಾಂಡು ರಾಠೊಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.