ಅಂಗನವಾಡಿಗೆ ತಲುಪದ ಜಲ ಜೀವನ ವಿಷನ್‌

ಈ ತಿಂಗಳ (ಜುಲೈ) ಅಂತ್ಯದೊಳಗೆ ಶೇ.100ಕ್ಕೆ 100ರಷ್ಟು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ.

Team Udayavani, Jul 7, 2021, 6:24 PM IST

Anganawadi

ಕಲಬುರಗಿ: ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಅಭಿಯಾನಗಳಲ್ಲಿ ಒಂದಾದ “ಜಲ ಜೀವನ ವಿಷನ್‌’ ಜಿಲ್ಲೆಯಲ್ಲಿ ಆಮೆಗತಿಯಲ್ಲಿ ಸಾಗಿದೆ. ನೂರು ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ನೀರಿನ ಸಂಪರ್ಕ ನೀಡಬೇಕೆಂಬ ಅಭಿಯಾನದ ಉದ್ದೇಶ 270 ದಿನಗಳು ಕಳೆದರೂ ಪೂರ್ಣವಾಗಿಲ್ಲ.

ಕಳೆದ ವರ್ಷ ಗ್ರಾಮೀಣ ನೀರು ಸರಬರಾಜು ಯೋಜನೆಯನ್ನು ಕೇಂದ್ರ ಸರ್ಕಾರ “ಜಲ ಜೀವನ ವಿಷನ್‌’ ಎಂದು ಹೆಸರಿಸಿದೆ. ಇದರಡಿ ಕೇಂದ್ರ ಸರ್ಕಾರ ಶೇ.25ರಷ್ಟು ಅನುದಾನ ಮತ್ತು ರಾಜ್ಯ ಸರ್ಕಾರ ಶೇ.75ರಷ್ಟು ಅನುದಾನ ಭರಿಸುತ್ತದೆ. 100 ದಿನಗಳಲ್ಲಿ ಎಲ್ಲ ಅಂಗನವಾಡಿಗಳು ಮತ್ತು ಶಾಲೆಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ 2020ರ ಅಕ್ಟೋಬರ್‌ 2ರಂದು ಸೂಚಿಸಿತ್ತು. 2021ರ ಜನವರಿ 10ಕ್ಕೆ ಈ ಅಭಿಯಾನ ಅಂತ್ಯವಾಗಿದೆ. ಆದರೆ, ಜಿಲ್ಲೆಯಲ್ಲಿ ಜೂನ್‌ ಕಳೆದರೂ ಕೇವಲ ಶೇ.11.50ರಷ್ಟು ಮಾತ್ರ ಪ್ರಗತಿ ಕಂಡಿದೆ.

ಗ್ರಾಮೀಣ ಭಾಗದ ಮೂಲಭೂತ ಸಮಸ್ಯೆ ದೃಷ್ಟಿಯಲ್ಲಿರಿಸಿಕೊಂಡು “ಜಲ ಜೀವನ’ ವಿಷನ್‌ ಅನುಷ್ಠಾನಕ್ಕೆ ತರಲಾಗಿದೆ. ಪ್ರಮುಖವಾಗಿ ಮಕ್ಕಳು ಕಲಿಯುವ ಕೇಂದ್ರಗಳಲ್ಲಿ ನೀರಿನ ಸೌಲಭ್ಯ ಒದಗಿಸಲು ವಿಶೇಷ ಅಭಿಯಾನವನ್ನೇ ಸರ್ಕಾರ ಹಾಕಿಕೊಂಡಿತ್ತು. ಮಕ್ಕಳಿಗೆ ಕುಡಿಯಲು, ಊಟ ತಯಾರಿಕೆ, ಕೈತೊಳೆಯಲು ಮತ್ತು ಶೌಚಾಲಯಗಳಲ್ಲಿ ಬಳಸಲು ನೀರಿನ ನಳದ ಸಂಪರ್ಕ ಒದಗಿಸುವುದು ಇದರ ಮುಖ್ಯ ಗುರಿ. ಆದರೆ, ಒಂಭತ್ತು ತಿಂಗಳು ಕಳೆದರೂ ಜಿಲ್ಲೆಯಲ್ಲಿ ಈ ಅಭಿಯಾನ ವೇಗವನ್ನೇ ಪಡೆದಿಲ್ಲ.

ಜಿಲ್ಲಾದ್ಯಂತ ಒಟ್ಟಾರೆ 3,130 ಅಂಗನವಾಡಿ ಕೇಂದ್ರಗಳು ಇವೆ. ನಗರ ಪ್ರದೇಶ ಹೊರತು ಪಡಿಸಿ, ಎಲ್ಲ ಹಳ್ಳಿಗಳಲ್ಲಿ ಸ್ವಂತ ಕಟ್ಟಡ ಹೊಂದಿರುವ ಕೇಂದ್ರಗಳಿಗೆ ನೇರ ನೀರು ಪೂರೈಸಬೇಕಿದೆ. ಅಂದರೆ, ಗ್ರಾಮೀಣ ಭಾಗದಲ್ಲಿ 2,146 ಅಂಗನವಾಡಿ ಕೇಂದ್ರಗಳ ಬರುತ್ತವೆ. ಆದರೆ, ಇದುವರೆಗೆ ಬರೀ 247 ಅಂಗನವಾಡಿಗಳಿಗೆ ಮಾತ್ರ ನೀರಿನ ಸಂರ್ಪಕ ದೊರೆತಿದೆ.

ಏನಾಗಬೇಕಿತ್ತು?: ಅಂಗನವಾಡಿಗಳಿಗೆ ಬರುವುದೇ ಅತಿ ಹೆಚ್ಚಾಗಿ ಬಡ ವರ್ಗದ ಮಕ್ಕಳು. ಆ ಮಕ್ಕಳಿಗೆ ಅಕ್ಷರಾಭ್ಯಾಸದೊಂದಿಗೆ ಊಟ, ಹಾಲು, ಮೊಟ್ಟೆ ನೀಡಲಾಗುತ್ತದೆ. ಇದೆಲ್ಲಕ್ಕೂ ನೀರು ಅಗತ್ಯವಾಗಿ ಬೇಕಾಗುತ್ತೆ. ಕೆಲವೊಂದು ಕೇಂದ್ರಗಳಲ್ಲಿ ಈಗಾಗಲೇ ನೀರಿನ ಸಂಪರ್ಕ ಹೊಂದಿದ್ದರೂ, ಬಹುತೇಕ ಕಡೆ ನೀರಿನ ಸಮಸ್ಯೆ ಇದ್ದೇ ಇದೆ. ಹೀಗಾಗಿ “ಜಲ ಜೀವನ ವಿಷನ್‌’ ಅಡಿ ನಳದ ಸಂಪರ್ಕ ನೀಡಬೇಕಿದೆ. ಜತೆಗೆ ನೀರು ಸಂಗ್ರಹಕ್ಕೆ ಸಿಂಟೆಕ್ಸ್‌, ಅಗತ್ಯವಾದ ಕಡೆ ನೀರು ತುಂಬಿಸಲು ಮೋಟರ್‌ ಹಾಗೂ ವಿದ್ಯುತ್‌ ಕೂಡ ಅಳವಡಿಕೆ ಮಾಡಬೇಕು.

ಹಲವು ಕಡೆಗಳಲ್ಲಿ ಸಹಾಯಕಿಯರು ಎರಡ್ಮೂರು ಗಂಟೆ ನಿಂತು ನೀರು ತರಬೇಕಿದೆ. ಇಂತಹ ಪರಿ ಸ್ಥಿತಿಯಲ್ಲೂ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನವಾಗಿಲ್ಲ. ಕೆಲವು ಕಡೆಗಳಲ್ಲಿ ಸಿಂಟೆಕ್ಸ್‌ ಮತ್ತು ಮೋಟರ್‌ ಕೂಡಿಸಿದ್ದರೂ, ನೀರಿನ ನಳದ ಸಂಪರ್ಕ ಕೊಡಲು ಆಗಿಲ್ಲ. ಇದರಿಂದ ನೀರಿಗಾಗಿ ಕಾರ್ಯಕರ್ತೆಯರು, ಸಹಾಯಕಿಯರ ಅಳಲು ಮುಂದುವರಿಯುವಂತೆ ಆಗಿದೆ ಎಂದು ಅಂಗನವಾಡಿ ನೌಕರರ ಸಂಘದ ನಾಯಕಿ ಶಾಂಗಾ ಘಂಟಿ ಬೇಸರ ವ್ಯಕ್ತಪಡಿಸಿದ್ದಾರೆ. ಕೆಲ ಕೇಂದ್ರಗಳಲ್ಲಿ ನಳದ ಸಂಪರ್ಕ ನೀಡಲಾಗಿದ್ದು, ಅಲ್ಲಿನ ಸಹಾಯಕಿಯರು ತುಸು ನೆಮ್ಮದಿ ತರಿಸಿದೆ. ಸಿಂಟೆಕ್ಸ್‌ ಕೂಡಿಸಿ ಅಡುಗೆ ಮನೆ, ಶೌಚಾಲಯಕ್ಕೆ ನೀರಿನ ಸಂಪರ್ಕ ಒದಗಿಸಲಾಗಿದೆ.

ಮೂರು ಕಡೆ ಅತ್ಯಂತ ನೀರಸ: “ಜಲ ಜೀವನ’ ವಿಷನ್‌ ಅಭಿಯಾನವು ಮೂರು ತಾಲೂಕುಗಳಲ್ಲಿ ಅತ್ಯಂತ ನೀರಸದಿಂದ ಕೂಡಿದೆ ಎಂದು ಸರ್ಕಾರದ ಅಂಕಿ-ಅಂಶಗಳೇ ಹೇಳುತ್ತವೆ. ಇದುವರೆಗೆ ಸೇಡಂ ನಲ್ಲಿ ಕೇವಲ ಐದು, ಆಳಂದ ಮತ್ತು ಶಹಾಬಾದ್‌ನಲ್ಲಿ ತಲಾ ಎಂಟು ಕೇಂದ್ರಗಳಿಗೆ ಮಾತ್ರ ಸಂಪರ್ಕ ಕಲ್ಪಿಸಲು ಸಾಧ್ಯವಾಗಿದೆ. ಚಿಂಚೋಳಿಯಲ್ಲಿ ಕೊಂಚ ಉತ್ತಮ ಪ್ರಗತಿ ಕಂಡಿದೆ. ಇಲ್ಲಿ ಈಗಾಗಲೇ 70 ಅಂಗನವಾಡಿ ಕೇಂದ್ರಗಳಿಗೆ ನೀರಿನ ಸಂಪರ್ಕ ಒದಗಿಸಲಾಗಿದೆ. ಕಲಬುರಗಿ ಗ್ರಾಮೀಣ-46, ಜೇವರ್ಗಿ-40, ಅಫಜಲಪುರ-38, ಚಿತ್ತಾಪುರದಲ್ಲಿ 32 ಕೇಂದ್ರಗಳಿಗೆ ನೀರಿನ ಸಂಪರ್ಕ ಸಿಕ್ಕಿದೆ.

ಸಮನ್ವಯ ಕೊರತೆಯೇ ಕಾರಣ: “ಜಲ ಜೀವನ ವಿಷನ್‌’ ಅಭಿಯಾನ ಹಿನ್ನೆಡೆಗೆ ಕೊರೊನಾ ಎರಡನೇ ಅಲೆ ಒಂದು ಕಾರಣವಾದರೆ, ಇದರ ಅನುಷ್ಠಾನ ಗೊಳಿಸಬೇಕಾದ ಮೂರು ಇಲಾಖೆಗಳಲ್ಲಿನ ಸಮನ್ವಯ ಕೊರತೆಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣ ಕುಡಿಯುವ ನೀರು ಪೂರೈಕೆ ಕಾರ್ಯಕ್ರಮ ಅಧಿಕಾರಿಗಳ ನಡುವಿನ ಹೊಂದಾಣಿಕೆಯ ಸಮಸ್ಯೆಯಿಂದ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ.

ಮಾರ್ಚ್‌ ತಿಂಗಳಲ್ಲಿ “ಜಲ ಜೀವನ ವಿಷನ್‌’ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ, ಅದೇ ತಿಂಗಳು ಕೊರೊನಾ ಉಲ್ಬಣಗೊಂಡು ಅಡೆ-ತಡೆ ಉಂಟಾಯಿತು. ಈಗ ಮತ್ತೆ ಇದಕ್ಕೆ ವೇಗ ಕೊಡಲಾಗುತ್ತದೆ. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಿತಿ-ಗತಿ ಬಗ್ಗೆ ಮತ್ತೂಮ್ಮೆ ಮಾಹಿತಿ ಪಡೆಯಲಾಗುತ್ತದೆ. ಈ ತಿಂಗಳ (ಜುಲೈ) ಅಂತ್ಯದೊಳಗೆ ಶೇ.100ಕ್ಕೆ 100ರಷ್ಟು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ.
ಡಾ| ದಿಲೀಷ್‌ ಸಸಿ, ಸಿಇಒ, ಜಿಪ

ರಂಗಪ್ಪ ಗಧಾರ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.