ಮಾಶಾಳದಿಂದ ಜಲಶಕ್ತಿ ಅಭಿಯಾನ

ಈಗ ಕೆರೆ ತುಂಬುವ ಯೋಜನೆ ಕೈಗೊಂಡಿದ್ದು ಖುಷಿ ತಂದಿದೆ.

Team Udayavani, Apr 10, 2021, 6:21 PM IST

Abiyana

ಅಫಜಲಪುರ: ರೈತರು ಹಾಗೂ ಜನಸಾಮಾನ್ಯರು ಸ್ವಾವಲಂಬಿ ಜೀವನಕ್ಕೆ ತಾಲೂಕಿನಾದ್ಯಂತ ಹೆಚ್ಚು ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗಿದ್ದು,
ತಾಲೂಕಿನಲ್ಲಿ 58 ಕೋಟಿ ರೂ. ವೆಚ್ಚದಲ್ಲಿ ಏಳು ಕೆರೆಗಳನ್ನು ತುಂಬುವ ಮೂಲಕ ರೈತರ ಬಹುದಿನದ ಬೇಡಿಕೆ ಇಡೆರಿಸಿದಂತಾಗಿದೆ ಎಂದು ಶಾಸಕ ಎಂ.ವೈ.
ಪಾಟೀಲ ಹೇಳಿದರು. ತಾಲೂಕಿನ ಮಾಶಾಳ ಗ್ರಾಮದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಡಿಯಲ್ಲಿ 58 ಕೋಟಿ ರೂ. ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೃಷಿ ದೇಶದ ಬಹುಮುಖ್ಯ ಕಸಬಾಗಿದ್ದು ಕೃಷಿ ಚಟುವಟಿಕೆಗಳು ಬಲವರ್ಧನೆಗೊಳ್ಳಲು ನೀರಾವರಿ ಯೋಜನೆ ಯಶಸ್ವಿಯಾಗಬೇಕು. ಇನ್ನು ಕೃಷಿಯತ್ತ
ಯುವಕರು ಸೇರಿದಂತೆ ವಿದ್ಯಾವಂತರು ಒಲವು ತೋರಿಸಿದರೆ ಕೃಷಿ ಮತ್ತಷ್ಟು ಲಾಭದತ್ತ ಹೆಜ್ಜೆ ಹಾಕಲು ಸಾಧ್ಯ ಎಂದರು.

ಕೆರೆ ತುಂಬುವ ಯೋಜನೆಯಿಂದ ತಾಲೂಕಿನಾದ್ಯಂತ ಅಂತರ್ಜಲಮಟ್ಟ ಹೆಚ್ಚಳವಾಗಲಿದೆ. ನೀರಾವರಿ ಲಾಭ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಶಾಲೆ, ಆಸ್ಪತ್ರೆ, ಶೌಚಾಲಯ, ರಸ್ತೆ, ಚರಂಡಿ ಸೇರಿದಂತೆ ಅನೇಕ ಮೂಲಭೂತ ಸೌಕರ್ಯ ನೀಡಲಾಗಿದ್ದು ತಮ್ಮೆಲ್ಲರ ಸಹಕಾರದಿಂದ ಅಭಿವೃದ್ಧಿ ಕೆಲಸ ಚುರುಕಾಗಿ ನಡೆಯುತ್ತಿವೆ. ಮಾಶಾಳ ಗ್ರಾಮದಲ್ಲಿ ನರೇಗಾ ಯೋಜನೆ ಯಶಸ್ವಿಯಾಗಿದ್ದು, ಸರ್ಕಾರದ ಅನುದಾನದಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿವೆ. ಮಣೂರು ಮತ್ತು ಮಾಶಾಳ ಗ್ರಾ.ಪಂ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜಗೇರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಜಿಪಂ ಸದಸ್ಯ ಅರುಣಕುಮಾರ ಪಾಟೀಲ ಮಾತನಾಡಿ, ತಮ್ಮ ತಂದೆ ಶಾಸಕರಾಗಿ ಆಯ್ಕೆಯಾದ ಬಳಿಕ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಬಹುದಿನದ ಕನಸು ಈಡೇರಿದಂತಾಗಿದೆ ಎಂದರು. ಮುಖಂಡ ಜೆ.ಎಂ. ಕೊರಬು ಅನುಭವ ಉಳ್ಳವರು. ಅಭಿವೃದ್ಧಿ ಕುರಿತು ಅವರ ಸಲಹೆ, ಮಾರ್ಗದರ್ಶನ ಅವಶ್ಯಕವಾಗಿದೆ. ನನ್ನನ್ನು ರಾಜಕೀಯವಾಗಿ ಬೆಳೆಸಿದ ಮಾಶಾಳ ವಲಯದ ಜನತೆ ಋಣ ಮರೆಯುವದಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ರಾಜೇಂದ್ರ ಪಾಟೀಲ ರೇವೂರ ಮಾತನಾಡಿದ ಅವರು, ಕೆಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತ ಮರೆತು ಉದ್ದೀಮೆದಾರರ ಕೈಗೊಂಬೆಯಾಗಿ ವರ್ತಿಸುತ್ತಿವೆ. ಜನ ತಕ್ಕ ಪಾಠ ಕಲಿಸಲು ಸಜ್ಜಾಗಬೇಕಿದೆ. ಈಗ ಕೆರೆ ತುಂಬುವ ಯೋಜನೆ ಕೈಗೊಂಡಿದ್ದು ಖುಷಿ ತಂದಿದೆ. ರೇವೂರ ಗ್ರಾಮದಲ್ಲಿಯೂ ಈ ಯೋಜನೆ ಕೈಗೊಳ್ಳಿ ಎಂದು ಮನವಿ ಮಾಡಿದರು. ಜ್ಞಾನೇಶ್ವರಿ ಪಾಟೀಲ, ಗುರುಪಾದ ಪತಾಟೆ, ತುಕಾರಾಮಗೌಡ ಪಾಟೀಲ ಮಾತನಾಡಿದರು.

ಕೆಎನ್‌ಎಲ್‌ಎಲ್‌ ಇಇ ಮಲ್ಲಿಕಾರ್ಜುನ ಜಾಕಾ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಕಾಂಗ್ರೆಸ್‌ ಮುಖಂಡ ಜೆ.ಎಂ.ಕೊರಬು ಮಾತನಾಡಿ, ನಾನು ಯಾವತ್ತಿಗೂ ಕಾಂಗ್ರೆಸ್ ಪಕ್ಷದಲ್ಲಿದ್ದು ಸೇವೆ ಮಾಡುತ್ತೇನೆ. ಶಾಸಕ ಎಂ.ವೈ. ಪಾಟೀಲ ಜನಪರ ಕೆಲಸಗಳಿಗೆ ಸದಾ ಬೆಂಬಲ ಇದೆ ಎಂದರು.

ಗ್ರಾ ಪಂ ಅಧ್ಯಕ್ಷ ಸುಗಲಾಬಾಯಿ, ತಾಪಂ ಅಧ್ಯಕ್ಷೆ ರುಕ್ಮಿಣಿ ಜಮಾದಾರ, ಸದಸ್ಯ ರಾಜಕುಮಾರ ಬಬಲಾದ, ಜಿಪಂ ಸದಸ್ಯೆ ಬೌರಮ್ಮ ಕರೂಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೆಶ ಪಾಟೀಲ, ಮುಖಂಡರಾದ ಪಪ್ಪು ಪಟೇಲ್‌, ರಮೇಶ ಪೂಜಾರಿ ಉಡಚಾಣ ಮಹಾದೇವಗೌಡ ಕರೂಟಿ, ಬಾಬಾಸಾಹೇಬಗೌಡ ಪಾಟೀಲ, ಶಿವಪುತ್ರಪ್ಪ ಜಿಡ್ಡಗಿ, ಸಿದ್ದಾರ್ಥ ಬಸರಿಗಿಡ, ರಾಜಶೇಖರ ಪಾಟೀಲ, ಸಂತೋಷ ರಾಠೊಡ, ಶಿವಾನಂದ ಗಾಡಿಸಾಹುಕಾರ, ಬಿಲ್ಲಮರಾಜ್‌ ಮ್ಯಾಳೆಸಿ, ಶಿವರುದ್ರಪ್ಪ ಅವಟಗಿ, ರೇವಪ್ಪ ನಾಮಗೊಂಡ, ಚಂದು ದೇಸಾಯಿ, ವಿಠೊಬ ಪೂಜಾರಿ, ನಾನಾ ಸಾಹೇಬಗೌಡ ಪಾಟೀಲ, ಶರಣು ಕುಂಬಾರ ಇತರರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.